ಬ್ರೇಕಿಂಗ್ ನ್ಯೂಸ್
25-05-25 02:14 pm HK News Desk ದೇಶ - ವಿದೇಶ
ಕೊಚ್ಚಿ, ಮೇ.25: ಭಾರತೀಯ ನೌಕಾಪಡೆ ಮತ್ತು ಕರಾವಳಿ ಕಾವಲುಪಡೆಯ ಪ್ರಯತ್ನ ಹೊರತಾಗಿಯೂ ಕೊಚ್ಚಿ ಬಳಿಯ ಸಮುದ್ರ ಮಧ್ಯದಲ್ಲಿ ಬೃಹತ್ ಕಂಟೇನರ್ ಹಡಗೊಂದು ಮುಳುಗಡೆಯಾಗಿದೆ. ಕೋಸ್ಟ್ ಗಾರ್ಡ್ ಹಡಗು ICGS ಸಕ್ಷಮ್ ಮೂಲಕ ಹಡಗಿನ ರಕ್ಷಣೆಗಾಗಿ ಮತ್ತು ತೈಲ ಸೋರಿಕೆಯನ್ನು ನಿಯಂತ್ರಿಸಲು ಪ್ರಯತ್ನ ನಡೆಸಿತ್ತು. ಸರಕುಗಳನ್ನು ಹೊಂದಿದ್ದ ಕಂಟೇನರ್ ಹಡಗು ಶನಿವಾರ ಮಧ್ಯಾಹ್ನದ ವೇಳೆಗೆ 26 ಡಿಗ್ರಿಗಳಷ್ಟು ವಾಲಿತ್ತು.
ಹಡಗಿನಲ್ಲಿ 24 ಮಂದಿ ಸಿಬ್ಬಂದಿ ಇದ್ದರು. ಈ ಪೈಕಿ 21 ಜನರನ್ನು ನಿನ್ನೆ ಸಂಜೆ ಕರಾವಳಿ ಕಾವಲು ಪಡೆ ರಕ್ಷಿಸಿತ್ತು. ಹಡಗು ಮುಳುಗಲು ಪ್ರಾರಂಭಿಸುತ್ತಿದ್ದಂತೆ ನೌಕಾಪಡೆ ಉಳಿದ ಮೂವರನ್ನು ಇಂದು ಬೆಳಗ್ಗೆ ರಕ್ಷಿಸಿ ಸ್ಥಳಾಂತರಿಸಿತು. ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಕೊಚ್ಚಿಯ ಕೋಸ್ಟ್ ಗಾರ್ಡ್ ಪ್ರಧಾನ ಕಚೇರಿಗೆ ಸ್ಥಳಾಂತರಿಸಿದ್ದು, ಕ್ಯಾಪ್ಟನ್ ಮತ್ತು ಇಬ್ಬರು ಎಂಜಿನಿಯರ್ಗಳನ್ನು ಕೊಚ್ಚಿ ನೌಕಾ ನೆಲೆಗೆ ಕರೆದೊಯ್ಯಲಾಗಿದೆ. ಮಾಹಿತಿ ಪ್ರಕಾರ, ಹಡಗು 640 ಕಂಟೇನರ್ ಗಳನ್ನು ಹೊತ್ತೊಯ್ಯುತ್ತಿತ್ತು. ಅಲ್ಲದೆ, 13 ಕಂಟೇನರ್ ಗಳಲ್ಲಿ ಅತ್ಯಂತ ಕಲುಷಿತ ರಾಸಾಯನಿಕಗಳಿದ್ದವು. 84 ಟನ್ ಡೀಸೆಲ್ ಹಾಗೂ 367 ಮೆಟ್ರಿಕ್ ಟನ್ ಫರ್ನೆನ್ಸ್ ಆಯಿಲ್ ಇತ್ತು. ಮಳೆ ಮತ್ತು ಪ್ರವಾಹದಿಂದಾಗಿ ಅವುಗಳೀಗ ಕೇರಳ ಕರಾವಳಿ ಕಡೆಗೆ ಚಲಿಸುವ ಸಾಧ್ಯತೆಯಿದೆ. ಕಡಲ ತೀರ ಮಾಲಿನ್ಯಗೊಳ್ಳುವ ಸಾಧ್ಯತೆ ಇರುವುದರಿಂದ ಮೀನುಗಾರರು ಆತಂಕಗೊಂಡಿದ್ದು ಕೇರಳ ಸರ್ಕಾರ ಮುನ್ನೆಚ್ಚರಿಕೆಯನ್ನೂ ವಹಿಸಿದೆ.
1997 ರಲ್ಲಿ ನಿರ್ಮಿಸಲಾದ ಲೈಬೀರಿಯಾ ಮೂಲದ ಕಂಟೇನರ್ ಹಡಗು MSC ಎಲ್ಸಾ, 184 ಮೀಟರ್ ಉದ್ದ ಮತ್ತು 25.3 ಮೀಟರ್ ಅಗಲವಾಗಿತ್ತು. ತಾಂತ್ರಿಕ ತಜ್ಞರನ್ನು ಹೊತ್ತ ಹಡಗನ್ನು ರಕ್ಷಣಾ ಕಾರ್ಯಾಚರಣೆಗಾಗಿ ಕಳುಹಿಸಲಾಗಿತ್ತು, ಆದರೆ ಸರಕುಗಳನ್ನು ಸ್ಥಳಾಂತರಿಸಲು ಅಥವಾ ಹಡಗನ್ನು ಎಳೆದು ತರಲು ಸಾಧ್ಯವಾಗಲಿಲ್ಲ. ಹೀಗಾಗಿ ನೌಕಾಪಡೆಯು ರಕ್ಷಣಾ ಕಾರ್ಯಾಚರಣೆ ಕೈಬಿಟ್ಟಿದೆ.
Mangalore Massive Container Ship Sinks Near Kochi, 640 Containers and 80 Tons of Diesel Spill into Sea, 24 Crew Rescued.
02-09-25 11:04 pm
Bangalore Correspondent
Sowjanya Case, Dharmasthala: ಸೌಜನ್ಯಾ ಪ್ರಕರಣ ;...
02-09-25 08:37 pm
ಮಕ್ಕಳ ಕಳ್ಳರು ಹೀಗೂ ಮಾಡುತ್ತಾರೆ..! ಶಾಲಾ ವಾಹನ ಎಂದ...
02-09-25 08:00 pm
Ranya Rao: ಚಿನ್ನ ಸ್ಮಗ್ಲರ್ ರನ್ಯಾ ರಾವ್ ಗೆ ಮತ್ತೆ...
02-09-25 06:22 pm
Dharmasthala ED: ಧರ್ಮಸ್ಥಳ ಪ್ರಕರಣದಲ್ಲಿ ಇಡಿ ಎಂಟ...
02-09-25 02:37 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
02-09-25 10:26 pm
Mangalore Correspondent
Mangalore Mukka Accident: ಮುಕ್ಕ ಜಂಕ್ಷನ್ನಲ್ಲಿ...
02-09-25 04:44 pm
Bribe Puttur, Tahsildar Absconding, Lokayukta...
02-09-25 02:17 pm
ಮಗನಿಗೆ ಇಲ್ಲ ಉದ್ಯೋಗ ; ಮುಂಬೈನಿಂದ ಉಡುಪಿಗೆ ಬಂದು ಆ...
02-09-25 01:05 pm
ಧರ್ಮಸ್ಥಳ ಚಲೋ ಬೆನ್ನಲ್ಲೇ ಸೌಜನ್ಯಾ ಮನೆಗೆ ಭೇಟಿಯಿತ್...
01-09-25 10:01 pm
02-09-25 07:09 pm
Mangalore Correspondent
Valachil, Rape, College, Mangalore Crime: ಇನ್...
02-09-25 04:31 pm
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm