ಬ್ರೇಕಿಂಗ್ ನ್ಯೂಸ್
 
            
                        21-12-20 03:49 pm Headline Karnataka News Network ದೇಶ - ವಿದೇಶ
 
            ನವದೆಹಲಿ, ಡಿಸೆಂಬರ್ 21: ಭಾರತದಿಂದ ತಲೆಮರೆಸಿಕೊಂಡು ನಾಪತ್ತೆಯಾಗಿರುವ ಸ್ವಯಂಘೋಷಿತ ದೇವಮಾನವ ನಿತ್ಯಾನಂದ, ತಾನು ಭಾರತಕ್ಕೆ ಹಿಂದಿರುಗದೇ ಇರುವುದಕ್ಕೆ ಜೀವ ಬೆದರಿಕೆ ಬರುತ್ತಿರುವುದಾಗಿ ಹೇಳಿಕೆ ನೀಡಿದ್ದಾನೆ.
ಈ ಕುರಿತು ವಿಡಿಯೋ ಮೂಲಕ ಹೇಳಿಕೆ ನೀಡಿರುವ ನಿತ್ಯಾನಂದ, ಭಾರತಕ್ಕೆ ತಾನು ಹಿಂದಿರುಗದ್ದಕ್ಕೆ ಜೀವ ಬೆದರಿಕೆ ಬರುತ್ತಿದೆ. ಭಾರತದಲ್ಲಿದ್ದಾಗ ನನ್ನ ವಿರುದ್ಧ ಹಲವರು ಬೆದರಿಕೆ ಹಾಕಿದ್ದರು. ಹತ್ಯೆ ಮಾಡುವ ಪ್ರಯತ್ನಗಳೂ ನಡೆದಿದ್ದವು. ಹೀಗಾಗಿ ಭಾರತವನ್ನು ತೊರೆಯಬೇಕಾಯಿತು ಎಂದು ಹೇಳಿಕೊಂಡಿದ್ದಾರೆ. ಇಷ್ಟಲ್ಲದೇ ತಾನು ಸತ್ತ ನಂತರ ತನ್ನ ಆಸ್ತಿಪಾಸ್ತಿ ಎಲ್ಲವೂ ಭಾರತಕ್ಕೇ ಸೇರುವುದಾಗಿ ತಿಳಿಸಿದ್ದು, ಹಿಂದುತ್ವವನ್ನು ಕಾಪಾಡಲು ಏನು ಬೇಕಾದರೂ ಮಾಡಲು ಸಿದ್ಧ ಎಂದು ಹೇಳಿಕೊಂಡಿದ್ದಾನೆ.

ವಾರದ ಹಿಂದಷ್ಟೆ ನಿತ್ಯಾನಂದ, ಆಸ್ಟ್ರೇಲಿಯಾದಿಂದ ತನ್ನ ಒಡೆತನದ "ಕೈಲಾಸ" ರಾಷ್ಟ್ರಕ್ಕೆ ಉಚಿತ ವಿಮಾನ ಸೇವೆ ಆರಂಭಿಸಿದ್ದಾಗಿ ಹೇಳಿದ್ದ. ಅಲ್ಲದೆ ತನ್ನ ದೇಶಕ್ಕೆ ಬರಲು ವೀಸಾ ಅರ್ಜಿ ಸಲ್ಲಿಸುವಂತೆ ಭಕ್ತರಲ್ಲಿ ಮನವಿಯನ್ನೂ ಮಾಡಿದ್ದ. ಬೆಂಗಳೂರಿನ ಬಿಡದಿಯ ಮಠದಲ್ಲಿದ್ದಾಗ ಎರಡು ವರ್ಷಗಳ ಹಿಂದೆ ನಿತ್ಯಾನಂದ ವಿರುದ್ಧ ಅತ್ಯಾಚಾರ ಆರೋಪ ಕೇಳಿಬಂದಿತ್ತು. ಬಳಿಕ ದಿಢೀರ್ ಭಾರತದಿಂದ ತಲೆಮರೆಸಿಕೊಂಡು ಪರಾರಿಯಾಗಿದ್ದ. ಇದೀಗ ದಕ್ಷಿಣ ಅಮೆರಿಕದ ಈಕ್ವೆಡಾರ್ ದೇಶದ ಕರಾವಳಿಯ ಒಂದು ಸಣ್ಣ ದ್ವೀಪದಲ್ಲಿ ತನ್ನ ಅನುಯಾಯಿಗಳೊಂದಿಗೆ ನೆಲೆಸಿದ್ದಾನೆ ಎನ್ನಲಾಗುತ್ತಿದೆ. ಅಲ್ಲಿಗೆ ಕೈಲಾಸ ಎಂದು ಹೆಸರಿಟ್ಟಿದ್ದು ಸ್ವಂತ ಬ್ಯಾಂಕ್ ಕೂಡ ಪ್ರಾರಂಭಿಸಿ, ಅದಕ್ಕೆ "ರಿಸರ್ವ್ ಬ್ಯಾಂಕ್ ಆಫ್ ಕೈಲಾಸ" ಎಂಬ ಹೆಸರನ್ನಿಟ್ಟ ಸುದ್ದಿಯಾಗಿದ್ದ. ಇದೀಗ ತನಗೆ ಭಾರತದಿಂದ ಜೀವ ಬೆದರಿಕೆ ಬರುತ್ತಿದೆ ಎಂದು ವಿಡಿಯೋ ಬಿಡುಗಡೆ ಮಾಡಿದ್ದಾರೆ.
 
            
            
            Fugitive godman and rape accused Nithyananda in a video claimed assassination threats for not returning to India. He said this in a new video that has recently surfaced.
 
    
            
             31-10-25 06:02 pm
                        
            
                  
                Bangalore Correspondent    
            
                    
 
    ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
 
    ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
 
    ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
 
    ಸಿದ್ದರಾಮಯ್ಯ ಅವರೇ ಐದು ವರ್ಷಗಳಿಗೆ ಮುಖ್ಯಮಂತ್ರಿಯೆಂ...
30-10-25 04:34 pm
 
    
            
             30-10-25 03:20 pm
                        
            
                  
                HK News Desk    
            
                    
 
    ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
 
    ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
 
    ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
 
    ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
 
    
            
             31-10-25 03:05 pm
                        
            
                  
                Mangalore Correspondent    
            
                    
 
    ಬಿಸಿ ರೋಡಿನಲ್ಲಿ ಆಂಬುಲೆನ್ಸ್ ಗೆ ಸೈಡ್ ಕೊಡದೆ ಸತಾಯಿ...
30-10-25 11:16 pm
 
    ಧರ್ಮಸ್ಥಳ ಪ್ರಕರಣ ; ಮಹೇಶ್ ಶೆಟ್ಟಿ ತಿಮರೋಡಿ ತಂಡಕ್ಕ...
30-10-25 08:06 pm
 
    ರಸ್ತೆ ಗುಂಡಿ ಮುಚ್ಚಿಸಲು ಹಣವಿಲ್ಲದ ಸರ್ಕಾರಕ್ಕೆ ಶಾಸ...
30-10-25 07:28 pm
 
    ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮದುವೆಗೆ ಬರುತ್ತಿದ್ದ ಟೆ...
30-10-25 03:23 pm
 
    
            
             31-10-25 12:55 pm
                        
            
                  
                HK News Desk    
            
                    
 
    ಇಂಗ್ಲೆಂಡಿನಲ್ಲಿ ಉದ್ಯೋಗ ಆಮಿಷ ; ಮಂಗಳೂರು- ಉಡುಪಿಯ...
29-10-25 10:43 pm
 
    ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
 
    ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
 
    ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm