ಬ್ರೇಕಿಂಗ್ ನ್ಯೂಸ್
21-12-20 03:49 pm Headline Karnataka News Network ದೇಶ - ವಿದೇಶ
ನವದೆಹಲಿ, ಡಿಸೆಂಬರ್ 21: ಭಾರತದಿಂದ ತಲೆಮರೆಸಿಕೊಂಡು ನಾಪತ್ತೆಯಾಗಿರುವ ಸ್ವಯಂಘೋಷಿತ ದೇವಮಾನವ ನಿತ್ಯಾನಂದ, ತಾನು ಭಾರತಕ್ಕೆ ಹಿಂದಿರುಗದೇ ಇರುವುದಕ್ಕೆ ಜೀವ ಬೆದರಿಕೆ ಬರುತ್ತಿರುವುದಾಗಿ ಹೇಳಿಕೆ ನೀಡಿದ್ದಾನೆ.
ಈ ಕುರಿತು ವಿಡಿಯೋ ಮೂಲಕ ಹೇಳಿಕೆ ನೀಡಿರುವ ನಿತ್ಯಾನಂದ, ಭಾರತಕ್ಕೆ ತಾನು ಹಿಂದಿರುಗದ್ದಕ್ಕೆ ಜೀವ ಬೆದರಿಕೆ ಬರುತ್ತಿದೆ. ಭಾರತದಲ್ಲಿದ್ದಾಗ ನನ್ನ ವಿರುದ್ಧ ಹಲವರು ಬೆದರಿಕೆ ಹಾಕಿದ್ದರು. ಹತ್ಯೆ ಮಾಡುವ ಪ್ರಯತ್ನಗಳೂ ನಡೆದಿದ್ದವು. ಹೀಗಾಗಿ ಭಾರತವನ್ನು ತೊರೆಯಬೇಕಾಯಿತು ಎಂದು ಹೇಳಿಕೊಂಡಿದ್ದಾರೆ. ಇಷ್ಟಲ್ಲದೇ ತಾನು ಸತ್ತ ನಂತರ ತನ್ನ ಆಸ್ತಿಪಾಸ್ತಿ ಎಲ್ಲವೂ ಭಾರತಕ್ಕೇ ಸೇರುವುದಾಗಿ ತಿಳಿಸಿದ್ದು, ಹಿಂದುತ್ವವನ್ನು ಕಾಪಾಡಲು ಏನು ಬೇಕಾದರೂ ಮಾಡಲು ಸಿದ್ಧ ಎಂದು ಹೇಳಿಕೊಂಡಿದ್ದಾನೆ.

ವಾರದ ಹಿಂದಷ್ಟೆ ನಿತ್ಯಾನಂದ, ಆಸ್ಟ್ರೇಲಿಯಾದಿಂದ ತನ್ನ ಒಡೆತನದ "ಕೈಲಾಸ" ರಾಷ್ಟ್ರಕ್ಕೆ ಉಚಿತ ವಿಮಾನ ಸೇವೆ ಆರಂಭಿಸಿದ್ದಾಗಿ ಹೇಳಿದ್ದ. ಅಲ್ಲದೆ ತನ್ನ ದೇಶಕ್ಕೆ ಬರಲು ವೀಸಾ ಅರ್ಜಿ ಸಲ್ಲಿಸುವಂತೆ ಭಕ್ತರಲ್ಲಿ ಮನವಿಯನ್ನೂ ಮಾಡಿದ್ದ. ಬೆಂಗಳೂರಿನ ಬಿಡದಿಯ ಮಠದಲ್ಲಿದ್ದಾಗ ಎರಡು ವರ್ಷಗಳ ಹಿಂದೆ ನಿತ್ಯಾನಂದ ವಿರುದ್ಧ ಅತ್ಯಾಚಾರ ಆರೋಪ ಕೇಳಿಬಂದಿತ್ತು. ಬಳಿಕ ದಿಢೀರ್ ಭಾರತದಿಂದ ತಲೆಮರೆಸಿಕೊಂಡು ಪರಾರಿಯಾಗಿದ್ದ. ಇದೀಗ ದಕ್ಷಿಣ ಅಮೆರಿಕದ ಈಕ್ವೆಡಾರ್ ದೇಶದ ಕರಾವಳಿಯ ಒಂದು ಸಣ್ಣ ದ್ವೀಪದಲ್ಲಿ ತನ್ನ ಅನುಯಾಯಿಗಳೊಂದಿಗೆ ನೆಲೆಸಿದ್ದಾನೆ ಎನ್ನಲಾಗುತ್ತಿದೆ. ಅಲ್ಲಿಗೆ ಕೈಲಾಸ ಎಂದು ಹೆಸರಿಟ್ಟಿದ್ದು ಸ್ವಂತ ಬ್ಯಾಂಕ್ ಕೂಡ ಪ್ರಾರಂಭಿಸಿ, ಅದಕ್ಕೆ "ರಿಸರ್ವ್ ಬ್ಯಾಂಕ್ ಆಫ್ ಕೈಲಾಸ" ಎಂಬ ಹೆಸರನ್ನಿಟ್ಟ ಸುದ್ದಿಯಾಗಿದ್ದ. ಇದೀಗ ತನಗೆ ಭಾರತದಿಂದ ಜೀವ ಬೆದರಿಕೆ ಬರುತ್ತಿದೆ ಎಂದು ವಿಡಿಯೋ ಬಿಡುಗಡೆ ಮಾಡಿದ್ದಾರೆ.
Fugitive godman and rape accused Nithyananda in a video claimed assassination threats for not returning to India. He said this in a new video that has recently surfaced.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm