ಬ್ರೇಕಿಂಗ್ ನ್ಯೂಸ್
21-12-20 03:49 pm Headline Karnataka News Network ದೇಶ - ವಿದೇಶ
ನವದೆಹಲಿ, ಡಿಸೆಂಬರ್ 21: ಭಾರತದಿಂದ ತಲೆಮರೆಸಿಕೊಂಡು ನಾಪತ್ತೆಯಾಗಿರುವ ಸ್ವಯಂಘೋಷಿತ ದೇವಮಾನವ ನಿತ್ಯಾನಂದ, ತಾನು ಭಾರತಕ್ಕೆ ಹಿಂದಿರುಗದೇ ಇರುವುದಕ್ಕೆ ಜೀವ ಬೆದರಿಕೆ ಬರುತ್ತಿರುವುದಾಗಿ ಹೇಳಿಕೆ ನೀಡಿದ್ದಾನೆ.
ಈ ಕುರಿತು ವಿಡಿಯೋ ಮೂಲಕ ಹೇಳಿಕೆ ನೀಡಿರುವ ನಿತ್ಯಾನಂದ, ಭಾರತಕ್ಕೆ ತಾನು ಹಿಂದಿರುಗದ್ದಕ್ಕೆ ಜೀವ ಬೆದರಿಕೆ ಬರುತ್ತಿದೆ. ಭಾರತದಲ್ಲಿದ್ದಾಗ ನನ್ನ ವಿರುದ್ಧ ಹಲವರು ಬೆದರಿಕೆ ಹಾಕಿದ್ದರು. ಹತ್ಯೆ ಮಾಡುವ ಪ್ರಯತ್ನಗಳೂ ನಡೆದಿದ್ದವು. ಹೀಗಾಗಿ ಭಾರತವನ್ನು ತೊರೆಯಬೇಕಾಯಿತು ಎಂದು ಹೇಳಿಕೊಂಡಿದ್ದಾರೆ. ಇಷ್ಟಲ್ಲದೇ ತಾನು ಸತ್ತ ನಂತರ ತನ್ನ ಆಸ್ತಿಪಾಸ್ತಿ ಎಲ್ಲವೂ ಭಾರತಕ್ಕೇ ಸೇರುವುದಾಗಿ ತಿಳಿಸಿದ್ದು, ಹಿಂದುತ್ವವನ್ನು ಕಾಪಾಡಲು ಏನು ಬೇಕಾದರೂ ಮಾಡಲು ಸಿದ್ಧ ಎಂದು ಹೇಳಿಕೊಂಡಿದ್ದಾನೆ.
ವಾರದ ಹಿಂದಷ್ಟೆ ನಿತ್ಯಾನಂದ, ಆಸ್ಟ್ರೇಲಿಯಾದಿಂದ ತನ್ನ ಒಡೆತನದ "ಕೈಲಾಸ" ರಾಷ್ಟ್ರಕ್ಕೆ ಉಚಿತ ವಿಮಾನ ಸೇವೆ ಆರಂಭಿಸಿದ್ದಾಗಿ ಹೇಳಿದ್ದ. ಅಲ್ಲದೆ ತನ್ನ ದೇಶಕ್ಕೆ ಬರಲು ವೀಸಾ ಅರ್ಜಿ ಸಲ್ಲಿಸುವಂತೆ ಭಕ್ತರಲ್ಲಿ ಮನವಿಯನ್ನೂ ಮಾಡಿದ್ದ. ಬೆಂಗಳೂರಿನ ಬಿಡದಿಯ ಮಠದಲ್ಲಿದ್ದಾಗ ಎರಡು ವರ್ಷಗಳ ಹಿಂದೆ ನಿತ್ಯಾನಂದ ವಿರುದ್ಧ ಅತ್ಯಾಚಾರ ಆರೋಪ ಕೇಳಿಬಂದಿತ್ತು. ಬಳಿಕ ದಿಢೀರ್ ಭಾರತದಿಂದ ತಲೆಮರೆಸಿಕೊಂಡು ಪರಾರಿಯಾಗಿದ್ದ. ಇದೀಗ ದಕ್ಷಿಣ ಅಮೆರಿಕದ ಈಕ್ವೆಡಾರ್ ದೇಶದ ಕರಾವಳಿಯ ಒಂದು ಸಣ್ಣ ದ್ವೀಪದಲ್ಲಿ ತನ್ನ ಅನುಯಾಯಿಗಳೊಂದಿಗೆ ನೆಲೆಸಿದ್ದಾನೆ ಎನ್ನಲಾಗುತ್ತಿದೆ. ಅಲ್ಲಿಗೆ ಕೈಲಾಸ ಎಂದು ಹೆಸರಿಟ್ಟಿದ್ದು ಸ್ವಂತ ಬ್ಯಾಂಕ್ ಕೂಡ ಪ್ರಾರಂಭಿಸಿ, ಅದಕ್ಕೆ "ರಿಸರ್ವ್ ಬ್ಯಾಂಕ್ ಆಫ್ ಕೈಲಾಸ" ಎಂಬ ಹೆಸರನ್ನಿಟ್ಟ ಸುದ್ದಿಯಾಗಿದ್ದ. ಇದೀಗ ತನಗೆ ಭಾರತದಿಂದ ಜೀವ ಬೆದರಿಕೆ ಬರುತ್ತಿದೆ ಎಂದು ವಿಡಿಯೋ ಬಿಡುಗಡೆ ಮಾಡಿದ್ದಾರೆ.
Fugitive godman and rape accused Nithyananda in a video claimed assassination threats for not returning to India. He said this in a new video that has recently surfaced.
22-04-25 10:15 pm
Bangalore Correspondent
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
22-04-25 10:33 pm
HK News Desk
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm