ಬ್ರೇಕಿಂಗ್ ನ್ಯೂಸ್
06-06-25 11:08 pm HK News Desk ದೇಶ - ವಿದೇಶ
ಶ್ರೀನಗರ, ಜೂನ್ 6 : ಕಾಶ್ಮೀರ ಕಣಿವೆಯನ್ನು ಜಮ್ಮುವಿಗೆ ಸಂಪರ್ಕಿಸುವ ಜಗತ್ತಿನ ಅತಿ ಎತ್ತರದ ಚೆನಾಬ್ ನದಿಯ ಮೇಲಿನ ರೈಲ್ವೇ ಸೇತುವೆಯನ್ನು ಪ್ರಧಾನಿ ಮೋದಿ ಲೋಕಾರ್ಪಣೆ ಮಾಡಿದ್ದಾರೆ. ಇದೇ ವೇಳೆ, ಮೋದಿಯವರು ತ್ರಿವರ್ಣ ಧ್ವಜ ಹಿಡಿದು ಸೇತುವೆಯಲ್ಲಿ ನಡೆದುಕೊಂಡು ಹೋಗಿ ಗಮನ ಸೆಳೆದರು. ಉದ್ಘಾಟನೆಗು ಮುನ್ನ ರೈಲು ಇಂಜಿನ್ನಲ್ಲಿ ಪ್ರಯಾಣಿಸಿ ಮೋದಿ ಅಲ್ಲಿಗೆ ತಲುಪಿದರು.
ಚೆನಾಬ್ ನದಿಗೆ ನಿರ್ಮಿಸಿರುವ ಈ ಸೇತುವೆಯು 272 ಕಿಮೀ ಉದ್ದದ ಉಧಂಪುರ- ಶ್ರೀನಗರ - ಬಾರಾಮುಲ್ಲಾ ರೈಲ್ವೇ ಲಿಂಕ್ ಭಾಗವಾಗಿದೆ. ಈ ಯೋಜನೆಯನ್ನು 43,780 ಕೋಟಿ ವೆಚ್ಚದಲ್ಲಿ ಕಾರ್ಯಗತ ಮಾಡಲಾಗುತ್ತಿದೆ.






ಕತ್ರಾದಿಂದ ಶ್ರೀನಗರಕ್ಕೆ ಮೊದಲ ವಂದೇ ಭಾರತ್ ರೈಲು ಇದಾಗಿದ್ದು ಈ ಸೇತುವೆ ಉದ್ಘಾಟಿಸಿದ್ದಕ್ಕೆ ಪ್ರಧಾನಿ ಮೋದಿ ಬಗ್ಗೆ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಹರ್ಷ ವ್ಯಕ್ತಪಡಿಸಿದ್ದಾರೆ.
ಕತ್ರಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರೊಂದಿಗೆ ಸಂವಾದ ನಡೆಸಿದರು. ಈ ವೇಳೆ, ಒಮರ್ ಅಬ್ದುಲ್ಲಾ ಮಾತನಾಡಿ, "ಈ ರೈಲು ಸೇವೆಯ ಬಗ್ಗೆ ಅನೇಕ ಜನರು ಕನಸು ಕಂಡಿದ್ದರು. ಬ್ರಿಟಿಷರು ಮಾಡಲು ಸಾಧ್ಯವಾಗದ್ದನ್ನು ನೀವು ಪೂರ್ಣಗೊಳಿಸಿದ್ದೀರಿ, ಮತ್ತು ಕಾಶ್ಮೀರ ಕಣಿವೆ ಈಗ ದೇಶದ ಉಳಿದ ಭಾಗಗಳೊಂದಿಗೆ ನೇರ ಸಂಪರ್ಕ ಪಡೆಯುವಂತಾಗಿದೆ. ಈ ಸಂದರ್ಭದಲ್ಲಿ, ನಾನು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರನ್ನು ಉಲ್ಲೇಖಿಸಿ ಧನ್ಯವಾದ ಹೇಳದಿದ್ದರೆ ಅದು ತಪ್ಪಾಗುತ್ತದೆ.. ಈ ಯೋಜನೆಗೆ ಅಡಿಪಾಯ ಹಾಕಿದಾಗ ನಾನು 8 ನೇ ತರಗತಿಯಲ್ಲಿ ಓದುತ್ತಿದ್ದೆ. ಈಗ ನನಗೆ 55 ವರ್ಷ, ಮತ್ತು ಇದನ್ನು ಅಂತಿಮವಾಗಿ ಉದ್ಘಾಟಿಸಲಾಗಿದೆ. ಅಟಲ್ ಬಿಹಾರಿ ವಾಜಪೇಯಿ ಇದಕ್ಕೆ 'ರಾಷ್ಟ್ರೀಯ ಮಹತ್ವದ ಯೋಜನೆ' ಸ್ಥಾನಮಾನವನ್ನು ನೀಡಿದ್ದು ಮತ್ತು ಅದರ ಬಜೆಟ್ ಹೆಚ್ಚಿಸಿದ್ದಕ್ಕಾಗಿ ಇದು ಸಾಧ್ಯವಾಗಿದೆ. ಇದು ಜಮ್ಮು ಮತ್ತು ಕಾಶ್ಮೀರದ ಜನರಿಗೆ ಎಲ್ಲ ರೀತಿಯಲ್ಲೂ ಹೆಚ್ಚಿನ ಪ್ರಯೋಜನವನ್ನು ನೀಡುತ್ತದೆ ಎಂದು ಒಮರ್ ಅಬ್ದುಲ್ಲಾ ಹೇಳಿದ್ದಾರೆ.
Prime Minister Narendra Modi on Friday said Jammu and Kashmir Chief Minister Omar Abdullah's childhood dream has been fulfilled with the completion of the Udhampur-Srinagar-Baramulla Rail Link (USBRL) project.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am