ಬ್ರೇಕಿಂಗ್ ನ್ಯೂಸ್
15-06-25 10:29 pm HK News Desk ದೇಶ - ವಿದೇಶ
ಉತ್ತರಾಖಂಡ, ಜೂ 15 : ಇಂದು ಬೆಳ್ಳಂಬೆಳಗ್ಗೆ ಉತ್ತರಾಖಂಡದ ಕೇದಾರ್ನಾಥ್ ಬಳಿ ದುರಂತ ಸಂಭವಿಸಿದೆ. ಹೆಲಿಕಾಪ್ಟರ್ ಪತನಗೊಂಡು ಪೈಲಟ್ ಸೇರಿ ಕನಿಷ್ಠ ಏಳು ಜನರು ಮೃತಪಟ್ಟಿದ್ದಾರೆ.
ಆರ್ಯನ್ ಏವಿಯೇಷನ್ ಪ್ರೈವೇಟ್ ಲಿಮಿಟೆಡ್ಗೆ ಸೇರಿದ ಹೆಲಿಕಾಪ್ಟರ್ ಗೌರಿಕುಂಡ್ ಮತ್ತು ತ್ರಿಜುಗಿನಾರಾಯಣದ ನಡುವೆ ಕೆಡಾರ್ಘಾತಿಯಲ್ಲಿ ಬಿದ್ದಿದೆ. ಹೆಲಿಕಾಪ್ಟರ್ ಬೆಂಕಿಗೆ ಆಹುತಿಯಾಗಿದೆ. ವ್ಯತಿರಿಕ್ತ ಹವಾಮಾನದಿಂದಾಗಿ ಈ ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ.






ಉತ್ತರಾಖಂಡ ಸಿವಿಲ್ ಏವಿಯೇಷನ್ ಡೆವಲಪ್ಮೆಂಟ್ ಅಥಾರಿಟಿ (UCADA) ಮಾಹಿತಿ ಪ್ರಕಾರ, ಹೆಲಿಕಾಪ್ಟರ್ ಬೆಳಿಗ್ಗೆ 5.30ಕ್ಕೆ ಕೇದಾರನಾಥದಿಂದ ಗುಪ್ತಕಾಶಿಗೆ ಹೊರಟಿತ್ತು. ಟೇಕಾಫ್ ಆದ ಕೆಲವೇ ಹೊತ್ತಿನಲ್ಲಿ ಪತನಗೊಂಡಿದೆ ಎಂದು ರುದ್ರಪ್ರಯಾಗ ಜಿಲ್ಲಾ ವಿಪತ್ತು ನಿರ್ವಹಣಾ ಅಧಿಕಾರಿ ನಂದನ್ ಸಿಂಗ್ ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ. ಹವಾಮಾನ ಸರಿಯಿಲ್ಲದ ಕಾರಣ ಈ ಅಪಘಾತವಾಗಿದ್ದು, ದಟ್ಟವಾದ ಮಂಜು ಕವಿದ ವಾತಾವರಣ ಇತ್ತು ಎಂದು ಹೇಳಿದ್ದಾರೆ.
ಕೇದಾರನಾಥನ ದರ್ಶನ ಮುಗಿಸಿ ಕೇವಲ 10 ನಿಮಿಷದಲ್ಲಿ ಗುಪ್ತಕಾಶಿ ಸೇರಬೇಕಿದ್ದ ಯಾತ್ರಾರ್ಥಿಗಳು ದುರಂತ ಅಂತ್ಯ ಕಂಡಿದ್ದಾರೆ. ದುರ್ಗಮ ಕಾಡಿನಲ್ಲಿ ಬಿದ್ದು ಹೊತ್ತಿ ಉರಿಯುತ್ತಿದ್ದ ಹೆಲಿಕಾಪ್ಟರನ್ನು ಸ್ಥಳೀಯರು ತಮ್ಮ ಜಾನುವಾರುಗಳಿಗೆ ಮೇವು ಕೊಯ್ಯಲು ಹೋದಾಗ ನೋಡಿದ್ದಾರೆ. ಕಳೆದ ಮೇ 2ರಂದು ಕೇದಾರನಾಥ ಮಂದಿರ ತೆರೆದಿದ್ದು, ಈವರೆಗೂ ಲಕ್ಷಾಂತರ ಜನರು ಕೇದಾರನಾಥ ಯಾತ್ರೆ ನಡೆಸಿದ್ದಾರೆ.
ಇನ್ನು ಹೆಲಿಕಾಪ್ಟರ್ನ ಪೈಲಟ್ ಕ್ಯಾಪ್ಟನ್ ರಾಜ್ವೀರ್ ಸಿಂಗ್ ಚೌಹಾಣ್ (37) ಭಾರತೀಯ ವಾಯು ಸೇನೆಯಲ್ಲಿ 15ಕ್ಕೂ ಹೆಚ್ಚು ವರ್ಷಗಳ ಕಾಲ ಸೇವೆಸಲ್ಲಿಸಿದ್ದರು. ಅವರಿಗೆ ವಿವಿಧ ಭೂ ಪ್ರದೇಶಗಳ ಮೇಲೆ ಹೆಲಿಕಾಪ್ಟರ್ ಹಾರಾಟ ನಡೆಸಿದ್ದ ಅನುಭವ ಇತ್ತು ಎಂದು ತಿಳಿದು ಬಂದಿದೆ.
ರಾಜಾವೀರ್ ಸಿಂಗ್ ಅವರ ತಂದೆ ಗೋವಿಂದ್ ಸಿಂಗ್ ಮಗನ ಬಗ್ಗೆ ಮಾತನಾಡಿ, ಹೆಲಿಕಾಪ್ಟರ್ ದುರಂತದ ಮಾಹಿತಿ ಅವರ ಸಹೋದ್ಯೋಗಿಗಳಿಂದ ಸಿಕ್ಕಿದೆ. ನನ್ನ ಮಗ ಸೇನೆಯಲ್ಲಿ ಸೇವೆ ಸಲ್ಲಿಸಿದ್ದ. ನನ್ನ ಸೊಸೆ ಸೇನೆಯಲ್ಲಿ ಲೆಫ್ಟಿನೆಂಟ್ ಕರ್ನಲ್ ಆಗಿದ್ದಾರೆ. ಅವರಿಗೆ ನಾಲ್ಕು ತಿಂಗಳ ಅವಳಿ ಮಕ್ಕಳಿದ್ದಾರೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.
A helicopter operated by Aryan Aviation crashed in Uttarakhand’s Gaurikund forest area early Sunday morning, killing all seven people on board, including the pilot. The helicopter was flying from Kedarnath Dham to Guptkashi. This marks the fifth helicopter crash in Uttarakhand in just six weeks.
18-02-26 09:02 pm
HK Desk
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
18-02-26 11:19 am
Mangaluru Staffer
Parameshwara in Mangalore: ಶಾಸಕರು ವಿದೇಶಕ್ಕೆ ತ...
17-02-26 12:42 pm
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
18-02-26 09:16 pm
Mangaluru Staffer
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm