ಬ್ರೇಕಿಂಗ್ ನ್ಯೂಸ್
17-06-25 10:47 pm HK News Desk ದೇಶ - ವಿದೇಶ
ನವದೆಹಲಿ, ಜೂನ್ 17 : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೆನಡಾದಲ್ಲಿ ನಡೆಯುತ್ತಿದ್ದ ಜಿ7 ಶೃಂಗಸಭೆಯನ್ನು ಅರ್ಧದಲ್ಲೇ ಬಿಟ್ಟು ವಾಷಿಂಗ್ಟನ್ಗೆ ಮರಳಿದ್ದಾರೆ. ಇಸ್ರೇಲ್ - ಇರಾನ್ ಸಂಘರ್ಷ ನಡುವಲ್ಲೇ ಟ್ರಂಪ್ ಮರಳಿದ್ದು, ಏನೋ ದೊಡ್ಡ ಘಟನೆ ಸಂಭವಿಸಲಿದೆ ಎಂಬ ರೀತಿಯ ಸೂಚನೆ ನೀಡಿದ್ದಾರೆ. ಅಮೆರಿಕ ನೇರವಾಗಿ ಯುದ್ಧಕ್ಕೆ ಪ್ರವೇಶಿಸಲು ತಯಾರಿ ನಡೆಸುತ್ತಿದೆ ಎಂದು ಹೇಳಲಾಗುತ್ತಿದೆ.
ಇದೇ ವೇಳೆ ಟ್ರಂಪ್ ನೀಡಿರುವ ಹೇಳಿಕೆಯಲ್ಲಿ, ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್, ಇರಾನ್-ಇಸ್ರೇಲ್ ನಡುವೆ ಕದನ ವಿರಾಮದ ಪ್ರಯತ್ನಕ್ಕಾಗಿ ಟ್ರಂಪ್ ಜಿ7 ಶೃಂಗಸಭೆಯನ್ನು ತೊರೆದು ವಾಷಿಂಗ್ಟನ್ಗೆ ಹೋಗಿದ್ದಾಗಿ ಹೇಳಿದ್ದಾರೆ. ಇದು ತಪ್ಪಾದ ಗ್ರಹಿಕೆ. ನಾನು ವಾಷಿಂಗ್ಟನ್ಗೆ ಏಕೆ ಹೋಗುತ್ತಿದ್ದೇನೆ ಎಂದು ಅವರಿಗೆ ತಿಳಿದಿಲ್ಲ. ಇದಕ್ಕೂ ಕದನ ವಿರಾಮಕ್ಕೂ ಯಾವುದೇ ಸಂಬಂಧವಿಲ್ಲ. ಅದಕ್ಕಿಂತ ದೊಡ್ಡದನ್ನು ಮಾಡುವುದಕ್ಕೆ ಹೋಗುತ್ತಿದ್ದೇನೆ ಎಂದು ಹೇಳುವ ಮೂಲಕ ಸಂಘರ್ಷದಲ್ಲಿ ಅಮೆರಿಕ ಎಂಟ್ರಿ ನೀಡುವ ಕುರಿತು ಸುಳಿವು ನೀಡಿದ್ದಾರೆ. ಇದಕ್ಕೂ ಮುನ್ನ ಟ್ರಂಪ್ ಅವರು, ಸಾಧ್ಯವಾದಷ್ಟು ಬೇಗ ಇರಾನ್ ರಾಜಧಾನಿ ಟೆಹ್ರಾನ್ ತೊರೆಯುವಂತೆ ಅಲ್ಲಿನ ನಾಗರಿಕರಿಗೆ ಎಚ್ಚರಿಕೆ ನೀಡಿದ್ದಾರೆ.
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್ ವಿರುದ್ಧದ ಯುದ್ಧದಲ್ಲಿ ಇಸ್ರೇಲ್ಗೆ ಬಹಿರಂಗ ಬೆಂಬಲ ನೀಡಿದ್ದಾರೆ. ಆದರೆ ಇಲ್ಲಿಯವರೆಗೆ ಅಮೆರಿಕ ಈ ದಾಳಿಗಳಲ್ಲಿ ತನ್ನ ಪಾಲುದಾರಿಕೆ ಇಲ್ಲ ಎಂದೇ ಹೇಳಿಕೊಂಡು ಬಂದಿದೆ. ಟ್ರಂಪ್ ಅವರ ಇತ್ತೀಚಿನ ಹೇಳಿಕೆಯಿಂದಾಗಿ ಅಮೆರಿಕ ಈ ಯುದ್ಧದಲ್ಲಿ ಇರಾನ್ ವಿರುದ್ಧ ದೊಡ್ಡ ಹೆಜ್ಜೆ ಇಡಬಹುದು ಎಂದು ಹೇಳಲಾಗುತ್ತಿದೆ.
ಇದೇ ವೇಳೆ, ಇಸ್ರೇಲ್ ನಾಯಕರು ಅಮೆರಿಕದಿಂದ ಬಹಿರಂಗ ಬೆಂಬಲ ಕೋರಿದ್ದಾರೆ. ಇರಾನ್ ಪರಮಾಣು ಕಾರ್ಯಕ್ರಮವನ್ನು ನಾಶ ಮಾಡಲು ಮಿಲಿಟರಿ ಕಾರ್ಯಾಚರಣೆಗೆ ಕೈಜೋಡಿಸುವಂತೆ ಇಸ್ರೇಲ್ ಅಮೆರಿಕಕ್ಕೆ ಮನವಿ ಮಾಡಿತ್ತು. ಜಿ7 ಶೃಂಗಸಭೆ ಸಂದರ್ಭದಲ್ಲಿಯೂ, ಎಲ್ಲಾ ದೇಶಗಳು ಇಸ್ರೇಲ್ ಅನ್ನು ಬಹಿರಂಗ ಬೆಂಬಲಿಸಿವೆ. ಅಲ್ಲದೆ, ಉಭಯ ರಾಷ್ಡ್ರಗಳ ಉದ್ವಿಗ್ನತೆಯನ್ನು ಕಡಿಮೆ ಮಾಡಲು ಇರಾನ್ ಮೇಲೆ ಒತ್ತಡ ಹೇರಿವೆ. ಜಿ7 ಸದಸ್ಯರು ಮಾತ್ರ ಇರಾನ್ ಪರಮಾಣು ಶಸ್ತ್ರಾಸ್ತ್ರಗಳನ್ನು ತಯಾರಿಸಲು ಸಾಧ್ಯವಿಲ್ಲ ಎಂದು ಹೇಳಿದರು. ಇಸ್ರೇಲ್ ತನ್ನ ಆತ್ಮರಕ್ಷಣೆಗಾಗಿ ಕ್ರಮಗಳನ್ನು ತೆಗೆದುಕೊಳ್ಳುವ ಹಕ್ಕನ್ನು ಹೊಂದಿದೆ ಎಂದು ಸಹ ಬೆಂಬಲ ವ್ಯಕ್ತಪಡಿಸಿದ್ದಾರೆ.
In a dramatic turn of events, former U.S. President Donald Trump has abruptly left the ongoing G7 summit in Canada and returned to Washington D.C., triggering intense speculation over a possible major development amid rising tensions between Iran and Israel.
30-07-25 06:28 pm
Bangalore Correspondent
Dharmasthala Burial Site, Atm, Pan Card Found...
30-07-25 05:42 pm
Al Qaeda Arrest, Bangalore: ಕರ್ನಾಟಕ ರಾಜಧಾನಿಗೂ...
30-07-25 11:40 am
Durgaamba Bus Accident, Shivamogga: ಮಂಗಳೂರಿನಿ...
30-07-25 10:33 am
Kerala Nurse Nimisha Priya: ಕೇರಳ ನರ್ಸ್ ನಿಮಿಷ...
29-07-25 01:31 pm
30-07-25 09:06 am
HK News Desk
ಜಾರ್ಖಂಡ್ ನಲ್ಲಿ ಭೀಕರ ರಸ್ತೆ ಅಪಘಾತ ; ಸಿಲಿಂಡರ್...
29-07-25 11:58 am
ಕಾಶ್ಮೀರದಲ್ಲಿ ಭಾರತೀಯ ಸೇನೆಯಿಂದ ಆಪರೇಶನ್ ಮಹಾದೇವ್,...
28-07-25 11:07 pm
ಮತಾಂತರ ಇಲ್ಲದೆ ಅಂತರ್ ಧರ್ಮೀಯ ವಿವಾಹ ಕಾನೂನು ಬಾಹಿರ...
28-07-25 12:28 pm
Israel, Arabic Language: ಇಸ್ರೇಲ್ ಸೈನಿಕರಿಗೆ ಇಸ...
26-07-25 03:31 pm
30-07-25 11:05 pm
Mangalore Correspondent
Dharmasthala Second Day of Exhumation, SIT: ಶ...
30-07-25 03:00 pm
Shirur Landslide, Malayalam Film: ಶಿರೂರು ಗುಡ್...
30-07-25 09:04 am
No Evidence, Dharmasthala Burial, SIT: ಹೆಣ ಹೂ...
29-07-25 09:56 pm
Dharmasthala case, SIT Begins Excavation, Upd...
29-07-25 02:20 pm
30-07-25 10:42 pm
Bangalore Correspondent
Mangalore Crime, Arrest: ಉದ್ಯಮಿಗಳಿಗೆ ನಕಲಿ ಆಸ್...
30-07-25 08:48 pm
Mysuru Drugs, Crime, Mumbai Police: ಮೈಸೂರಿನಲ್...
30-07-25 11:37 am
ಮಕ್ಕಳಾಗಿಲ್ಲ ಅಂತ ಗಂಡನ ಮೇಲೆ ಸಿಟ್ಟು ; ಪ್ರಿಯಕರನಿಂ...
29-07-25 08:54 pm
Honor Killing in Chitradurga: ತಮ್ಮನಿಗೆ ಎಚ್ಐವ...
29-07-25 07:17 pm