ಬ್ರೇಕಿಂಗ್ ನ್ಯೂಸ್
19-06-25 07:13 pm HK News Desk ದೇಶ - ವಿದೇಶ
ಟೆಹ್ರಾನ್, ಜೂನ್.19: ಇರಾನ್- ಇಸ್ರೇಲ್ ಸಂಘರ್ಷ ಏಳನೇ ದಿನಕ್ಕೆ ಕಾಲಿಟ್ಟಿದ್ದು, ಎರಡೂ ರಾಷ್ಟ್ರಗಳ ನಡುವೆ ಕ್ಷಿಪಣಿ ದಾಳಿ ತೀವ್ರಗೊಂಡಿದೆ. ಅಮೆರಿಕ ಮತ್ತು ಇಸ್ರೇಲ್ ಬೆದರಿಕೆಗೆ ಸೊಪ್ಪು ಹಾಕದ ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಖಮೇನಿ, ನಾವು ವಿದೇಶಿ ಒತ್ತಡಕ್ಕೆ ಮಣಿಯುವುದಿಲ್ಲ ಎಂದು ಹೇಳಿದ್ದಾರೆ. ಇದೇ ವೇಳೆ, ಇಸ್ರೇಲ್ ರಾಜಧಾನಿ ಮತ್ತು ಇನ್ನಿತರ ನಾಗರಿಕ ಪ್ರದೇಶಗಳನ್ನು ಗುರಿಯಾಗಿಸಿ ಇರಾನ್ ಡಜನ್ ಗಟ್ಟಲೆ ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಹಾರಿಸಿದೆ.
ದಕ್ಷಿಣ ಇಸ್ರೇಲ್ ಭಾಗದ ಬೀರ್ ಶೆವಾ ನಗರದಲ್ಲಿರುವ ಅತಿದೊಡ್ಡ ಆಸ್ಪತ್ರೆ ಸೊರೊಕಾ ಕೇಂದ್ರಕ್ಕೆ ಕ್ಷಿಪಣಿ ಅಪ್ಪಳಿಸಿದ್ದು, ವ್ಯಾಪಕ ಹಾನಿ ಉಂಟು ಮಾಡಿದೆ. ಈ ವೇಳೆ ಆಸ್ಪತ್ರೆಯಲ್ಲಿದ್ದ ರೋಗಿ ಮತ್ತು ವೈದ್ಯಕೀಯ ಸಿಬಂದಿ ಸುರಕ್ಷಿತ ಜಾಗದಲ್ಲಿ ಅಡಗಿದ್ದರಿಂದ ಹೆಚ್ಚಿನ ಸಾವು, ನೋವು ಆಗಿಲ್ಲ. ಆದರೆ ದಾಳಿ ವೇಳೆ ಕಟ್ಟಡದಲ್ಲಿ ಅಡಗಿದ್ದ 47 ಮಂದಿ ಗಾಯಗೊಂಡಿದ್ದಾರೆ ಎಂದು ಅಲ್ಲಿನ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.



ಸೊರೊಕಾ ಆಸ್ಪತ್ರೆ ಇಸ್ರೇಲ್ನ ಪ್ರಮುಖ ವೈದ್ಯಕೀಯ ಕೇಂದ್ರಗಳಲ್ಲಿ ಒಂದಾಗಿದೆ. ಅದರ ವೆಬ್ಸೈಟ್ ಪ್ರಕಾರ ದಕ್ಷಿಣ ಇಸ್ರೇಲಿನಲ್ಲಿ ಒಂದು ಮಿಲಿಯನ್ಗಿಂತಲೂ ಹೆಚ್ಚು ಜನರಿಗೆ ಈ ಆಸ್ಪತ್ರೆ ಚಿಕಿತ್ಸೆ ಒದಗಿಸುತ್ತದೆ. ಗಾಜಾದಿಂದ ಕೇವಲ 22 ಮೈಲುಗಳಷ್ಟು ದೂರದಲ್ಲಿರುವ ಸೊರೊಕಾ ಯುದ್ಧದಲ್ಲಿ ಗಾಯಗೊಂಡ ಜನರಿಗೆ ಚಿಕಿತ್ಸೆ ನೀಡುತ್ತದೆ.
ಪ್ರಮುಖ ಆಸ್ಪತ್ರೆ ಸೇರಿದಂತೆ ಹಲವು ನಾಗರಿಕ ಪ್ರದೇಶಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು, ಇರಾನ್ ಇದಕ್ಕೆ ಭಾರೀ ಬೆಲೆ ತೆರಲಿದೆ ಎಂದು ಎಚ್ಚರಿಸಿದ್ದಾರೆ. ಇದೇ ವೇಳೆ, ಇಸ್ರೇಲ್ ಇರಾನ್ ದೇಶದ ಅರಾಕಾದಲ್ಲಿರುವ ನೀರಿನ ಸರಬರಾಜು ರಿಯಾಕ್ಟರ್ ಮತ್ತು ಪರಮಾಣು ಸ್ಥಾವರಗಳ ಮೇಲೆ ದಾಳಿ ನಡೆಸಿದೆ.
An Iranian missile barrage has struck several sites across Israel, damaging a hospital in the country’s south, and Israel has attacked Iran’s Arak heavy water nuclear reactor as the two countries trade fire for a seventh consecutive day.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm