ಬ್ರೇಕಿಂಗ್ ನ್ಯೂಸ್
19-06-25 07:13 pm HK News Desk ದೇಶ - ವಿದೇಶ
ಟೆಹ್ರಾನ್, ಜೂನ್.19: ಇರಾನ್- ಇಸ್ರೇಲ್ ಸಂಘರ್ಷ ಏಳನೇ ದಿನಕ್ಕೆ ಕಾಲಿಟ್ಟಿದ್ದು, ಎರಡೂ ರಾಷ್ಟ್ರಗಳ ನಡುವೆ ಕ್ಷಿಪಣಿ ದಾಳಿ ತೀವ್ರಗೊಂಡಿದೆ. ಅಮೆರಿಕ ಮತ್ತು ಇಸ್ರೇಲ್ ಬೆದರಿಕೆಗೆ ಸೊಪ್ಪು ಹಾಕದ ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಖಮೇನಿ, ನಾವು ವಿದೇಶಿ ಒತ್ತಡಕ್ಕೆ ಮಣಿಯುವುದಿಲ್ಲ ಎಂದು ಹೇಳಿದ್ದಾರೆ. ಇದೇ ವೇಳೆ, ಇಸ್ರೇಲ್ ರಾಜಧಾನಿ ಮತ್ತು ಇನ್ನಿತರ ನಾಗರಿಕ ಪ್ರದೇಶಗಳನ್ನು ಗುರಿಯಾಗಿಸಿ ಇರಾನ್ ಡಜನ್ ಗಟ್ಟಲೆ ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಹಾರಿಸಿದೆ.
ದಕ್ಷಿಣ ಇಸ್ರೇಲ್ ಭಾಗದ ಬೀರ್ ಶೆವಾ ನಗರದಲ್ಲಿರುವ ಅತಿದೊಡ್ಡ ಆಸ್ಪತ್ರೆ ಸೊರೊಕಾ ಕೇಂದ್ರಕ್ಕೆ ಕ್ಷಿಪಣಿ ಅಪ್ಪಳಿಸಿದ್ದು, ವ್ಯಾಪಕ ಹಾನಿ ಉಂಟು ಮಾಡಿದೆ. ಈ ವೇಳೆ ಆಸ್ಪತ್ರೆಯಲ್ಲಿದ್ದ ರೋಗಿ ಮತ್ತು ವೈದ್ಯಕೀಯ ಸಿಬಂದಿ ಸುರಕ್ಷಿತ ಜಾಗದಲ್ಲಿ ಅಡಗಿದ್ದರಿಂದ ಹೆಚ್ಚಿನ ಸಾವು, ನೋವು ಆಗಿಲ್ಲ. ಆದರೆ ದಾಳಿ ವೇಳೆ ಕಟ್ಟಡದಲ್ಲಿ ಅಡಗಿದ್ದ 47 ಮಂದಿ ಗಾಯಗೊಂಡಿದ್ದಾರೆ ಎಂದು ಅಲ್ಲಿನ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.



ಸೊರೊಕಾ ಆಸ್ಪತ್ರೆ ಇಸ್ರೇಲ್ನ ಪ್ರಮುಖ ವೈದ್ಯಕೀಯ ಕೇಂದ್ರಗಳಲ್ಲಿ ಒಂದಾಗಿದೆ. ಅದರ ವೆಬ್ಸೈಟ್ ಪ್ರಕಾರ ದಕ್ಷಿಣ ಇಸ್ರೇಲಿನಲ್ಲಿ ಒಂದು ಮಿಲಿಯನ್ಗಿಂತಲೂ ಹೆಚ್ಚು ಜನರಿಗೆ ಈ ಆಸ್ಪತ್ರೆ ಚಿಕಿತ್ಸೆ ಒದಗಿಸುತ್ತದೆ. ಗಾಜಾದಿಂದ ಕೇವಲ 22 ಮೈಲುಗಳಷ್ಟು ದೂರದಲ್ಲಿರುವ ಸೊರೊಕಾ ಯುದ್ಧದಲ್ಲಿ ಗಾಯಗೊಂಡ ಜನರಿಗೆ ಚಿಕಿತ್ಸೆ ನೀಡುತ್ತದೆ.
ಪ್ರಮುಖ ಆಸ್ಪತ್ರೆ ಸೇರಿದಂತೆ ಹಲವು ನಾಗರಿಕ ಪ್ರದೇಶಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು, ಇರಾನ್ ಇದಕ್ಕೆ ಭಾರೀ ಬೆಲೆ ತೆರಲಿದೆ ಎಂದು ಎಚ್ಚರಿಸಿದ್ದಾರೆ. ಇದೇ ವೇಳೆ, ಇಸ್ರೇಲ್ ಇರಾನ್ ದೇಶದ ಅರಾಕಾದಲ್ಲಿರುವ ನೀರಿನ ಸರಬರಾಜು ರಿಯಾಕ್ಟರ್ ಮತ್ತು ಪರಮಾಣು ಸ್ಥಾವರಗಳ ಮೇಲೆ ದಾಳಿ ನಡೆಸಿದೆ.
An Iranian missile barrage has struck several sites across Israel, damaging a hospital in the country’s south, and Israel has attacked Iran’s Arak heavy water nuclear reactor as the two countries trade fire for a seventh consecutive day.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 11:47 am
HK News Staffer
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm