ಬ್ರೇಕಿಂಗ್ ನ್ಯೂಸ್
19-06-25 07:13 pm HK News Desk ದೇಶ - ವಿದೇಶ
ಟೆಹ್ರಾನ್, ಜೂನ್.19: ಇರಾನ್- ಇಸ್ರೇಲ್ ಸಂಘರ್ಷ ಏಳನೇ ದಿನಕ್ಕೆ ಕಾಲಿಟ್ಟಿದ್ದು, ಎರಡೂ ರಾಷ್ಟ್ರಗಳ ನಡುವೆ ಕ್ಷಿಪಣಿ ದಾಳಿ ತೀವ್ರಗೊಂಡಿದೆ. ಅಮೆರಿಕ ಮತ್ತು ಇಸ್ರೇಲ್ ಬೆದರಿಕೆಗೆ ಸೊಪ್ಪು ಹಾಕದ ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಖಮೇನಿ, ನಾವು ವಿದೇಶಿ ಒತ್ತಡಕ್ಕೆ ಮಣಿಯುವುದಿಲ್ಲ ಎಂದು ಹೇಳಿದ್ದಾರೆ. ಇದೇ ವೇಳೆ, ಇಸ್ರೇಲ್ ರಾಜಧಾನಿ ಮತ್ತು ಇನ್ನಿತರ ನಾಗರಿಕ ಪ್ರದೇಶಗಳನ್ನು ಗುರಿಯಾಗಿಸಿ ಇರಾನ್ ಡಜನ್ ಗಟ್ಟಲೆ ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಹಾರಿಸಿದೆ.
ದಕ್ಷಿಣ ಇಸ್ರೇಲ್ ಭಾಗದ ಬೀರ್ ಶೆವಾ ನಗರದಲ್ಲಿರುವ ಅತಿದೊಡ್ಡ ಆಸ್ಪತ್ರೆ ಸೊರೊಕಾ ಕೇಂದ್ರಕ್ಕೆ ಕ್ಷಿಪಣಿ ಅಪ್ಪಳಿಸಿದ್ದು, ವ್ಯಾಪಕ ಹಾನಿ ಉಂಟು ಮಾಡಿದೆ. ಈ ವೇಳೆ ಆಸ್ಪತ್ರೆಯಲ್ಲಿದ್ದ ರೋಗಿ ಮತ್ತು ವೈದ್ಯಕೀಯ ಸಿಬಂದಿ ಸುರಕ್ಷಿತ ಜಾಗದಲ್ಲಿ ಅಡಗಿದ್ದರಿಂದ ಹೆಚ್ಚಿನ ಸಾವು, ನೋವು ಆಗಿಲ್ಲ. ಆದರೆ ದಾಳಿ ವೇಳೆ ಕಟ್ಟಡದಲ್ಲಿ ಅಡಗಿದ್ದ 47 ಮಂದಿ ಗಾಯಗೊಂಡಿದ್ದಾರೆ ಎಂದು ಅಲ್ಲಿನ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.



ಸೊರೊಕಾ ಆಸ್ಪತ್ರೆ ಇಸ್ರೇಲ್ನ ಪ್ರಮುಖ ವೈದ್ಯಕೀಯ ಕೇಂದ್ರಗಳಲ್ಲಿ ಒಂದಾಗಿದೆ. ಅದರ ವೆಬ್ಸೈಟ್ ಪ್ರಕಾರ ದಕ್ಷಿಣ ಇಸ್ರೇಲಿನಲ್ಲಿ ಒಂದು ಮಿಲಿಯನ್ಗಿಂತಲೂ ಹೆಚ್ಚು ಜನರಿಗೆ ಈ ಆಸ್ಪತ್ರೆ ಚಿಕಿತ್ಸೆ ಒದಗಿಸುತ್ತದೆ. ಗಾಜಾದಿಂದ ಕೇವಲ 22 ಮೈಲುಗಳಷ್ಟು ದೂರದಲ್ಲಿರುವ ಸೊರೊಕಾ ಯುದ್ಧದಲ್ಲಿ ಗಾಯಗೊಂಡ ಜನರಿಗೆ ಚಿಕಿತ್ಸೆ ನೀಡುತ್ತದೆ.
ಪ್ರಮುಖ ಆಸ್ಪತ್ರೆ ಸೇರಿದಂತೆ ಹಲವು ನಾಗರಿಕ ಪ್ರದೇಶಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು, ಇರಾನ್ ಇದಕ್ಕೆ ಭಾರೀ ಬೆಲೆ ತೆರಲಿದೆ ಎಂದು ಎಚ್ಚರಿಸಿದ್ದಾರೆ. ಇದೇ ವೇಳೆ, ಇಸ್ರೇಲ್ ಇರಾನ್ ದೇಶದ ಅರಾಕಾದಲ್ಲಿರುವ ನೀರಿನ ಸರಬರಾಜು ರಿಯಾಕ್ಟರ್ ಮತ್ತು ಪರಮಾಣು ಸ್ಥಾವರಗಳ ಮೇಲೆ ದಾಳಿ ನಡೆಸಿದೆ.
An Iranian missile barrage has struck several sites across Israel, damaging a hospital in the country’s south, and Israel has attacked Iran’s Arak heavy water nuclear reactor as the two countries trade fire for a seventh consecutive day.
18-02-26 09:02 pm
HK Desk
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
18-02-26 11:19 am
Mangaluru Staffer
Parameshwara in Mangalore: ಶಾಸಕರು ವಿದೇಶಕ್ಕೆ ತ...
17-02-26 12:42 pm
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
18-02-26 09:16 pm
Mangaluru Staffer
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm