ಬ್ರೇಕಿಂಗ್ ನ್ಯೂಸ್
21-06-25 08:50 pm HK News Desk ದೇಶ - ವಿದೇಶ
ನವದೆಹಲಿ, ಜೂನ್ 21: 168 ಪ್ರಯಾಣಿಕರನ್ನು ಹೊಂದಿದ್ದ ಗುವಾಹಟಿಯಿಂದ ಚೆನ್ನೈ ತೆರಳುತ್ತಿದ್ದ ಇಂಡಿಗೋ ವಿಮಾನವು ಹಾರಾಟದ ಸಮಯದಲ್ಲೇ ‘ಮೇಡೇ’ ಘೋಷಿಸಿದ್ದು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ತುರ್ತಾಗಿ ಲ್ಯಾಂಡ್ ಆಗಿದೆ.
ಇಂಡಿಗೋ ವಿಮಾನದಲ್ಲಿ ತೈಲ ಕಡಿಮೆಯಾಗಿದ್ದು ಇದರಿಂದಾಗಿ ವಿಮಾನದ ಸ್ಥಿತಿ ಡೇಂಜರ್ ಆಗಿದೆ ಎನ್ನುವುದನ್ನು ಸೂಚಿಸುವ ಮೇ ಡೇ ಘೋಷಣೆಯನ್ನು ಪೈಲಟ್ ಮಾಡಿದ್ದರು. ಇತ್ತೀಚೆಗೆ ಅಹ್ಮದಾಬಾದ್ ಏರ್ಪೋರ್ಟ್ ನಲ್ಲಿ ಟೇಕಾಫ್ ಆದ ಸ್ವಲ್ಪ ಸಮಯದಲ್ಲೇ ಏರ್ ಇಂಡಿಯಾ ಬೋಯಿಂಗ್ ವಿಮಾನ ಅಪಘಾತಕ್ಕೀಡಾಗಿತ್ತು. ಅದರಲ್ಲೂ ಪೈಲಟ್ ‘ಮೇಡೇ’ ಘೋಷಿಸಿದ್ದು ಕೆಲ ಹೊತ್ತಿನಲ್ಲೇ ದುರಂತ ಸಂಭವಿಸಿತ್ತು.
ಗುವಾಹಟಿಯಿಂದ ಗುರುವಾರ ಸಂಜೆ 4.40 ಕ್ಕೆ ಹೊರಟಿದ್ದ ಇಂಡಿಗೋ ವಿಮಾನವು 7.45ಕ್ಕೆ ಚೆನ್ನೈ ತಲುಪಬೇಕಿತ್ತು. ಆದರೆ ಇಂಧನ ಪ್ರಮಾಣ ತೀರಾ ಕಡಿಮೆ ಇದ್ದ ಕಾರಣ ಪೈಲಟ್ ತುರ್ತು ಸ್ಥಿತಿಯ ಎಲರ್ಟ್ ಸೂಚನೆ ನೀಡಿದ್ದರು. ವಿಪತ್ತಿನ ಕರೆ ಬಂದ ನಂತರ, ಬೆಂಗಳೂರು ಏರ್ಪೋರ್ಟ್ ಎಟಿಸಿ (ವಾಯು ಸಂಚಾರ ನಿಯಂತ್ರಣ) ಸಿಬ್ಬಂದಿಗೆ ಮಾಹಿತಿ ನೀಡಿದ್ದು ಕೂಡಲೇ ಅಲರ್ಟ್ ಆಗಿದ್ದರು. ವೈದ್ಯಕೀಯ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳದಲ್ಲಿದ್ದರು. ವಿಮಾನವು ಬಳಿಕ ರಾತ್ರಿ 8.20ಕ್ಕೆ ಬೆಂಗಳೂರು ಏರ್ಪೋರ್ಟ್ ನಲ್ಲಿ ಸುರಕ್ಷಿತವಾಗಿ ಲ್ಯಾಂಡ್ ಆಗಿತ್ತು. ಕೇವಲ ಇಂಧನ ಕಡಿಮೆಯಾಗಿದ್ದೋ, ತಾಂತ್ರಿಕ ವೈಫಲ್ಯ ಎದುರಾಗಿತ್ತೋ ಎನ್ನುವ ಬಗ್ಗೆ ತನಿಖೆ ನಡೆಸಿದೆ. ಪೈಲಟ್ ಮೇ ಡೇ ಘೋಷಣೆ ಮಾಡಿದ್ದರಿಂದ ಪ್ರಯಾಣಿಕರು ಭಯಗೊಂಡು ಬಾಗಿಲ ಬಳಿ ನಿಂತುಕೊಂಡಿದ್ದರು. ಒಬ್ಬಾತ ಹೊರಕ್ಕೆ ಹಾರುವುದಕ್ಕೂ ರೆಡಿಯಾಗಿದ್ದ ಎಂದು ಮೂಲಗಳು ತಿಳಿಸಿವೆ.
ಇದೇ ವೇಳೆ, ಡಿಜಿಸಿಎ ಏರ್ ಇಂಡಿಯಾ ವಿಮಾನಗಳ ಸುರಕ್ಷತೆ ಬಗ್ಗೆ ಅತೀವ ಕಾಳಜಿ ವಹಿಸಿದ್ದು ಯಾವುದೇ ತಾಂತ್ರಿಕ ದೋಷ ಇರುವ ವಿಮಾನಗಳ ಸಂಚಾರಕ್ಕೆ ಅನುಮತಿ ನೀಡಲಾಗದು ಎಂದಿದೆ. ಅಲ್ಲದೆ, ಮೂವರು ಏರ್ ಇಂಡಿಯಾ ಅಧಿಕಾರಿಗಳನ್ನು ಅಮಾನತುಗೊಳಿಸಿ ಆದೇಶ ಮಾಡಿದೆ. ಅಹ್ಮದಾಬಾದ್ ವಿಮಾನ ದುರಂತ ಬಳಿಕ ಏರ್ ಇಂಡಿಯಾ ವಿಮಾನಗಳನ್ನು ಪೂರ್ತಿ ತಪಾಸಣೆ ಮಾಡಲಾಗಿದ್ದು ಕಳೆದೊಂದು ವಾರದಲ್ಲಿ ಏಳು ವಿಮಾನಗಳ ಸಂಚಾರಕ್ಕೆ ಬ್ರೇಕ್ ಹಾಕಲಾಗಿದೆ.
An IndiGo flight from Guwahati to Chennai with 168 passengers on board made an emergency landing at Bengaluru's Kempegowda International Airport (KIA) after the captain gave a 'Mayday' call -- a distress call via radio communication - citing insufficient fuel in the plane. The incident comes on the heels of an Air India plane crash in Ahmedabad that claimed the lives of 241 passengers, leaving one survivor. The Air India Boeing 787-8 Dreamliner had issued a Mayday call shortly before it crashed.
18-02-26 09:02 pm
HK Desk
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
18-02-26 11:19 am
Mangaluru Staffer
Parameshwara in Mangalore: ಶಾಸಕರು ವಿದೇಶಕ್ಕೆ ತ...
17-02-26 12:42 pm
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
18-02-26 09:16 pm
Mangaluru Staffer
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm