ಬ್ರೇಕಿಂಗ್ ನ್ಯೂಸ್
22-06-25 04:49 pm HK News Desk ದೇಶ - ವಿದೇಶ
ಶ್ರೀನಗರ, ಜೂನ್ 22: ಪಹಲ್ಗಾಮ್ ಭಯೋತ್ಪಾದಕ ದಾಳಿ ಕೃತ್ಯದಲ್ಲಿ ಉಗ್ರರಿಗೆ ಆಶ್ರಯ ನೀಡಿದ್ದ ಇಬ್ಬರು ಯುವಕರನ್ನು ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಪರ್ವೈಜ್ ಅಹ್ಮದ್ ಜೋಥಾರ್ ಮತ್ತು ಬಶೀರ್ ಅಹ್ಮದ್ ಜೋಥಾರ್ ಬಂಧಿತರು ಎಂದು ಎನ್ಐಎ ಹೇಳಿಕೆಯಲ್ಲಿ ತಿಳಿಸಿದೆ.
ಕೃತ್ಯದಲ್ಲಿ ಪಾಲ್ಗೊಂಡಿದ್ದ ಮೂವರು ಉಗ್ರರ ಗುರುತು ಹೇಳಿರುವ ಈ ಇಬ್ಬರು ಯುವಕರು, ಅವರು ಪಾಕಿಸ್ತಾನಿಗಳು ಮತ್ತು ಲಷ್ಕರ್ ಇ-ತೊಯ್ಬಾ ಸಂಘಟನೆಯ ಉಗ್ರರು ಎಂದು ಮಾಹಿತಿ ನೀಡಿದ್ದಾರೆ. ಈ ಮೂವರು ಉಗ್ರರಿಗೆ ಪರ್ವೈಜ್ ಮತ್ತು ಬಶೀರ್ ದಾಳಿಗೂ ಮುನ್ನ ಹಿಲ್ ಪಾರ್ಕ್ ಏರಿಯಾದಲ್ಲಿ ಆಶ್ರಯ ನೀಡಿದ್ದರು. ಆಹಾರ, ಉಳಿಯುವುದಕ್ಕೆ ವ್ಯವಸ್ಥೆ ಮತ್ತು ಶಸ್ತ್ರಾಸ್ತ್ರ ಬಚ್ಚಿಟ್ಟುಕೊಳ್ಳುವುದಕ್ಕೆ ಬೆಂಬಲ ನೀಡಿದ್ದರು. ಬಂಧಿತ ಇಬ್ಬರು ಯುವಕರ ಮೇಲೆ ಯುಎಪಿಎ ಕಾಯ್ದೆಯಡಿ ಕೇಸು ದಾಖಲಿಸಿದೆ.
ಎನ್ಐಎ ಇತ್ತೀಚೆಗೆ ಜಮ್ಮು ಕಾಶ್ಮೀರದಲ್ಲಿ 32 ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿತ್ತು. ಪಹಲ್ಗಾಮ್ ಉಗ್ರರ ದಾಳಿ ಬಗ್ಗೆ ಕಾರ್ಯಾಚರಣೆ ಮುಂದುವರಿದಿದ್ದು, ಖಚಿತ ಮಾಹಿತಿ ಆಧರಿಸಿ ಇಬ್ಬರು ಯುವಕರನ್ನು ಬಂಧಿಸಿದ್ದಾಗಿ ಮಾಹಿತಿ ನೀಡಿದೆ. ದಿ ರೆಸಿಸ್ಟೆಂಟ್ ಫ್ರಂಟ್, ಯುನೈಟೆಡ್ ಲಿಬರೇಶನ್ ಫ್ರಂಟ್ ಜಮ್ಮು ಕಾಶ್ಮೀರ್ (ಯುಎಲ್ಎಫ್), ಮುಜಾಹಿದೀನ್ ಗಜ್ವಾತ್ ಉಲ್ ಹಿಂದ್ (ಎಂಜಿಎಚ್), ಜಮ್ಮು ಅಂಡ್ ಕಾಶ್ಮೀರ್ ಫ್ರೀಡಂ ಫೈಟರ್ಸ್ (ಜೆಕೆಎಫ್ಎಫ್) ಸಂಘಟನೆಗಳಲ್ಲಿ ಗುರುತಿಸಿಕೊಂಡ ಜನರ ಮನೆ, ಕಚೇರಿಗಳಿಗೆ ಎನ್ಐಎ ದಾಳಿ ನಡೆಸಿತ್ತು. ಈ ಸಂಘಟನೆಗಳ ಸದಸ್ಯರು ನಿಷೇಧಿತ ಲಷ್ಕರ್ ಇ-ತೈಬಾ, ಜೈಶ್ ಇ-ಮಹಮ್ಮದ್ ಮತ್ತು ಅಲ್ ಬದ್ರ್ ಜೊತೆಗೆ ಸಂಪರ್ಕ ಹೊಂದಿದ್ದಾರೆ ಎಂದು ಹೇಳಿಕೆಯಲ್ಲಿ ಎನ್ಐಎ ತಿಳಿಸಿದೆ.
ಕಳೆದ ಎಪ್ರಿಲ್ 22ರಂದು ಜಮ್ಮು ಕಾಶ್ಮೀರದ ಪಹಲ್ಗಾಮ್ ಬಳಿಯ ಬೈಸಾರಣ್ ಹುಲ್ಲುಗಾವಲಿನಲ್ಲಿ ಪ್ರವಾಸಿಗರಿದ್ದ ಸಂದರ್ಭದಲ್ಲಿ ಐದಾರು ಮಂದಿಯಿದ್ದ ಶಸ್ತ್ರಸಜ್ಜಿತ ಉಗ್ರರು ಪ್ರವಾಸಿಗರನ್ನು ಗುರಿಯಾಗಿಸಿ ದಾಳಿ ನಡೆಸಿದ್ದು ಘಟನೆಯಲ್ಲಿ 26 ಮಂದಿ ಬಲಿಯಾಗಿದ್ದರು. ಮಿನಿ ಸ್ವಿಜರ್ಲ್ಯಾಂಡ್ ಎಂದು ಬಣ್ಣಿತವಾಗಿರುವ ಬೈಸಾರಣ್ ಪ್ರದೇಶದಲ್ಲಿ ಪ್ರವಾಸಿಗರು ಬೀಡು ಬಿಟ್ಟಿದ್ದಾಗಲೇ ಏಕಾಏಕಿ ಈ ದಾಳಿ ನಡೆದಿತ್ತು.
In a major breakthrough, the National Investigation Agency (NIA) has arrested two men for harbouring the terrorists who had carried out the Pahalgam terror attack that left 26 people dead, the agency said on Sunday.According to the NIA, the two men Parvaiz Ahmad Jothar from Batkote and Bashir Ahmad Jothar of Hill Park in Pahalgam have disclosed the identities of the three armed terrorists involved in the attack.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 11:47 am
HK News Staffer
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm