ಬ್ರೇಕಿಂಗ್ ನ್ಯೂಸ್
25-06-25 11:10 am HK News Desk ದೇಶ - ವಿದೇಶ
ನವದೆಹಲಿ, ಜೂನ್ 24 : ಇಸ್ರೇಲ್ ಮತ್ತು ಇರಾನ್ ಮಧ್ಯೆ ಕದನ ವಿರಾಮ ಘೋಷಿಸಿದ್ದರೂ ಉಭಯ ದೇಶಗಳು ಯುದ್ಧದಲ್ಲಿ ತೊಡಗಿರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಕೂಡಲೇ ಸೇನಾ ಕಾರ್ಯಾಚರಣೆ ನಿಲ್ಲಿಸಿ ಎಂದು ಇಸ್ರೇಲ್ ಗೆ ಎಚ್ಚರಿಕೆ ನೀಡಿದ್ದಾರೆ.
12 ದಿನಗಳ ಇಸ್ರೇಲ್ ಮತ್ತು ಇರಾನ್ ಯುದ್ಧಕ್ಕೆ ಮಂಗಳವಾರ ಬೆಳಗ್ಗೆ ಅಮೆರಿಕ ಕದನ ವಿರಾಮ ಘೋಷಣೆ ಮಾಡಿತ್ತು. ಘೋಷಣೆಯ ಬೆನ್ನಲ್ಲೇ ಇರಾನ್ ಅದನ್ನು ಉಲ್ಲಂಘಿಸಿದ್ದು ಇಸ್ರೇಲ್ ಮೇಲೆ ಅಟ್ಯಾಕ್ ಮಾಡಿತ್ತು. ಇದೇ ನೆಪವೊಡ್ಡಿ ಇಸ್ರೇಲ್ ಮರು ದಾಳಿಗೆ ಮುಂದಾಗಿದ್ದು ತಕ್ಕ ಪ್ರತ್ಯುತ್ತರ ನೀಡುವಂತೆ ಸೇನಾ ಪಡೆಗೆ ಸೂಚಿಸಿದೆ. ದಕ್ಷಿಣ ಇಸ್ರೇಲಿನ ಬೀರ್ ಶೆವಾದ ಮೇಲೆ ಕ್ಷಿಪಣಿ ದಾಳಿಯಾಗಿದ್ದರಿಂದ ಏಳು ಮಂದಿ ಸಾವು ಕಂಡಿದ್ದಾರೆ.
ಈ ಮಧ್ಯೆ ಇರಾನ್ ಮೇಲೆ ಬಾಂಬ್ ದಾಳಿ ನಡೆಸದಂತೆ ಇಸ್ರೇಲ್ಗೆ ತಮ್ಮ ಟ್ರುತ್ ಸೋಶಿಯಲ್ ಪೋಸ್ಟ್ ಮೂಲಕ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಾಕೀತು ಮಾಡಿದ್ದಾರೆ. ನೀವು ಈಗ ಇರಾನ್ ಮೇಲೆ ಬಾಂಬ್ ದಾಳಿ ನಡೆಸಿದರೆ, ಬಹುದೊಡ್ಡ ಯುದ್ಧ ವಿರಾಮ ಉಲ್ಲಂಘನೆಯಾಗಲಿದೆ. ನಿಮ್ಮ ವಿಮಾನಗಳನ್ನು ಹಿಂದಕ್ಕೆ ಕರೆಸಿಕೊಳ್ಳಿ ಎಂದು ಟ್ರಂಪ್ ಸೂಚಿಸಿದ್ದಾರೆ.
ಅಮೆರಿಕ ಕದನ ವಿರಾಮ ಘೋಷಣೆ ಮಾಡಿದ್ದರೂ, ಈ ಬಗ್ಗೆ ಯಾವುದೇ ಅಧಿಕೃತ ಒಡಂಬಡಿಕೆ ಆಗಿಲ್ಲ. ಟೆಹ್ರಾನ್ ಕಡೆಯಿಂದ ಬೆಳಗ್ಗೆ ನಾಲ್ಕು ಗಂಟೆಯಿಂದ ಯಾವುದೇ ದಾಳಿ ಆಗಿಲ್ಲ. ಇಸ್ರೇಲ್ ಇದನ್ನು ಉಲ್ಲಂಘಿಸಿ ದಾಳಿ ನಡೆಸಿದರೆ ನಾವು ಪ್ರತ್ಯುತ್ತರ ನೀಡಲು ಮುಕ್ತವಾಗಿದ್ದೇವೆ ಎಂದು ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಗ್ಚಿ ಹೇಳಿದ್ದಾರೆ. ಇರಾನ್ ಮಾತುಕತೆ ಮೂಲಕ ಬಗೆಹರಿಸಲು ರೆಡಿಯಾಗಿದೆ ಎಂಬುದನ್ನು ಈ ಮೂಲಕ ತಿಳಿಸುತ್ತೇವೆ ಎಂದು ಅರಾಗ್ಚಿ ಹೇಳಿದ್ದಾರೆ.
Despite the announcement of a ceasefire between Israel and Iran, hostilities continue to escalate, drawing sharp criticism from U.S. President Donald Trump, who has urged Israel to halt military operations immediately.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm