ಬ್ರೇಕಿಂಗ್ ನ್ಯೂಸ್
02-07-25 11:05 pm HK News Desk ದೇಶ - ವಿದೇಶ
ಮುಂಬೈ, ಜುಲೈ 2 : PES ಇಂಜಿನಿಯರಿಂಗ್ ಕಾಲೇಜಿನಲ್ಲಿ ಹಿಜಾಬ್ ಧರಿಸಲು ಮುಸ್ಲಿಂ ವಿದ್ಯಾರ್ಥಿನಿಯರಿಗೆ ಅವಕಾಶ ನೀಡಿಲ್ಲ ಎಂದು ಪ್ರಾಂಶುಪಾಲರಿಗೆ ಜೀವ ಬೆದರಿಕೆ ಹಾಕಿದ ಆರೋಪದಲ್ಲಿ 6 ಮಂದಿಯ ವಿರುದ್ದ ಪ್ರಕರಣ ದಾಖಲಾಗಿದೆ.
ಮಹಾರಾಷ್ಟ್ರದ ಔರಂಗಾಬಾದ್ ನಲ್ಲಿರುವ ಪೀಪಲ್ಸ್ ಎಜುಕೇಶನ್ ಸೊಸೈಟಿಯ ಎಂಜಿನಿಯರಿಂಗ್ ಕಾಲೇಜಿನಲ್ಲಿ ಈ ಘಟನೆ ನಡೆದಿದೆ. ಕಾಲೇಜಿನ ಪ್ರಾಂಶುಪಾಲರ ದೂರಿನ ಮೇರೆಗೆ 6 ಮಂದಿಯ ವಿರುದ್ಧ ಪೊಲೀಸರು ಕ್ರಿಮಿನಲ್ ಬೆದರಿಕೆ ಪ್ರಕರಣ ದಾಖಲಿಸಿದ್ದಾರೆ.
ಸೋಮವಾರ ಪೀಪಲ್ಸ್ ಎಜುಕೇಶನ್ ಸೊಸೈಟಿಯ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಅಭಿಜಿತ್ ವಾಡೇಕರ್ ಕಂಟೋನ್ಮೆಂಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆರೋಪಿಗಳ ವಿರುದ್ಧ ಬಿಎನ್ಎಸ್ ಸೆಕ್ಷನ್ 189 (2) (ಕಾನೂನುಬಾಹಿರ ಸಭೆ), 333 (ಅತಿಕ್ರಮಣ), 352 (ಶಾಂತಿ ಭಂಗವನ್ನು ಪ್ರಚೋದಿಸಲು ಉದ್ದೇಶಪೂರ್ವಕ ಅವಮಾನ) ಮತ್ತು 351 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಪೀಪಲ್ಸ್ ಎಜುಕೇಶನ್ ಸೊಸೈಟಿ (PES)ಯ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಅಭಿಜಿತ್ ವಾಡೇಕರ್, 'ಕಾಲೇಜು ಅಧಿಕಾರಿಗಳು ಅಂತಹ ಯಾವುದೇ ನಿಷೇಧ ಹೇರಿಲ್ಲ. ಕಾಲೇಜಿನಲ್ಲಿ ಹಿಜಾಬ್ ಗೆ ಅವಕಾಶವಿದೆ. ಪರೀಕ್ಷೆಯ ಸಮಯದಲ್ಲಿ ಮಾತ್ರ ನಿರ್ಬಂಧಗಳನ್ನು ವಿಧಿಸಲಾಗಿದೆ. ವಿದ್ಯಾರ್ಥಿಗಳು ಪರೀಕ್ಷೆಗೆ ಕುಳಿತುಕೊಳ್ಳುವಾಗ ತಮ್ಮ ಮುಖವನ್ನು ಕಾಣುವಂತೆ ಇಟ್ಟುಕೊಳ್ಳಬೇಕು ಎಂದರು.
ಪರೀಕ್ಷೆ ನಡೆಯುತ್ತಿರುವಾಗ ಮಧ್ಯಾಹ್ನ 1.45 ರ ಸುಮಾರಿಗೆ ಕಾಲೇಜಿಗೆ ಪ್ರವೇಶಿಸಿದ ಆರು ಪುರುಷರ ಗುಂಪು, "ನಮ್ಮ ಜನರಿಗೆ ಹಿಜಾಬ್ ಧರಿಸಲು ನೀವು ಏಕೆ ಅವಕಾಶ ನೀಡುತ್ತಿಲ್ಲ" ಎಂದು ಕೇಳಿದರು. ಬಳಿಕ ಅವಾಚ್ಯ ಶಬ್ದಗಳನ್ನು ಬಳಸಿ ನಿಂದಿಸಿದ್ದಾರೆ ಮತ್ತು ಘೋಷಣೆಗಳನ್ನು ಕೂಗುತ್ತಾ ಬೆದರಿಕೆ ಹಾಕಿದ್ದಾರೆ ಎಂದರು.
An FIR has been registered against six individuals for allegedly issuing death threats to the principal of PES Engineering College in Aurangabad, Maharashtra, over the college’s examination dress code policy concerning the hijab.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm