ಬ್ರೇಕಿಂಗ್ ನ್ಯೂಸ್
02-07-25 11:05 pm HK News Desk ದೇಶ - ವಿದೇಶ
ಮುಂಬೈ, ಜುಲೈ 2 : PES ಇಂಜಿನಿಯರಿಂಗ್ ಕಾಲೇಜಿನಲ್ಲಿ ಹಿಜಾಬ್ ಧರಿಸಲು ಮುಸ್ಲಿಂ ವಿದ್ಯಾರ್ಥಿನಿಯರಿಗೆ ಅವಕಾಶ ನೀಡಿಲ್ಲ ಎಂದು ಪ್ರಾಂಶುಪಾಲರಿಗೆ ಜೀವ ಬೆದರಿಕೆ ಹಾಕಿದ ಆರೋಪದಲ್ಲಿ 6 ಮಂದಿಯ ವಿರುದ್ದ ಪ್ರಕರಣ ದಾಖಲಾಗಿದೆ.
ಮಹಾರಾಷ್ಟ್ರದ ಔರಂಗಾಬಾದ್ ನಲ್ಲಿರುವ ಪೀಪಲ್ಸ್ ಎಜುಕೇಶನ್ ಸೊಸೈಟಿಯ ಎಂಜಿನಿಯರಿಂಗ್ ಕಾಲೇಜಿನಲ್ಲಿ ಈ ಘಟನೆ ನಡೆದಿದೆ. ಕಾಲೇಜಿನ ಪ್ರಾಂಶುಪಾಲರ ದೂರಿನ ಮೇರೆಗೆ 6 ಮಂದಿಯ ವಿರುದ್ಧ ಪೊಲೀಸರು ಕ್ರಿಮಿನಲ್ ಬೆದರಿಕೆ ಪ್ರಕರಣ ದಾಖಲಿಸಿದ್ದಾರೆ.
ಸೋಮವಾರ ಪೀಪಲ್ಸ್ ಎಜುಕೇಶನ್ ಸೊಸೈಟಿಯ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಅಭಿಜಿತ್ ವಾಡೇಕರ್ ಕಂಟೋನ್ಮೆಂಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆರೋಪಿಗಳ ವಿರುದ್ಧ ಬಿಎನ್ಎಸ್ ಸೆಕ್ಷನ್ 189 (2) (ಕಾನೂನುಬಾಹಿರ ಸಭೆ), 333 (ಅತಿಕ್ರಮಣ), 352 (ಶಾಂತಿ ಭಂಗವನ್ನು ಪ್ರಚೋದಿಸಲು ಉದ್ದೇಶಪೂರ್ವಕ ಅವಮಾನ) ಮತ್ತು 351 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಪೀಪಲ್ಸ್ ಎಜುಕೇಶನ್ ಸೊಸೈಟಿ (PES)ಯ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಅಭಿಜಿತ್ ವಾಡೇಕರ್, 'ಕಾಲೇಜು ಅಧಿಕಾರಿಗಳು ಅಂತಹ ಯಾವುದೇ ನಿಷೇಧ ಹೇರಿಲ್ಲ. ಕಾಲೇಜಿನಲ್ಲಿ ಹಿಜಾಬ್ ಗೆ ಅವಕಾಶವಿದೆ. ಪರೀಕ್ಷೆಯ ಸಮಯದಲ್ಲಿ ಮಾತ್ರ ನಿರ್ಬಂಧಗಳನ್ನು ವಿಧಿಸಲಾಗಿದೆ. ವಿದ್ಯಾರ್ಥಿಗಳು ಪರೀಕ್ಷೆಗೆ ಕುಳಿತುಕೊಳ್ಳುವಾಗ ತಮ್ಮ ಮುಖವನ್ನು ಕಾಣುವಂತೆ ಇಟ್ಟುಕೊಳ್ಳಬೇಕು ಎಂದರು.
ಪರೀಕ್ಷೆ ನಡೆಯುತ್ತಿರುವಾಗ ಮಧ್ಯಾಹ್ನ 1.45 ರ ಸುಮಾರಿಗೆ ಕಾಲೇಜಿಗೆ ಪ್ರವೇಶಿಸಿದ ಆರು ಪುರುಷರ ಗುಂಪು, "ನಮ್ಮ ಜನರಿಗೆ ಹಿಜಾಬ್ ಧರಿಸಲು ನೀವು ಏಕೆ ಅವಕಾಶ ನೀಡುತ್ತಿಲ್ಲ" ಎಂದು ಕೇಳಿದರು. ಬಳಿಕ ಅವಾಚ್ಯ ಶಬ್ದಗಳನ್ನು ಬಳಸಿ ನಿಂದಿಸಿದ್ದಾರೆ ಮತ್ತು ಘೋಷಣೆಗಳನ್ನು ಕೂಗುತ್ತಾ ಬೆದರಿಕೆ ಹಾಕಿದ್ದಾರೆ ಎಂದರು.
An FIR has been registered against six individuals for allegedly issuing death threats to the principal of PES Engineering College in Aurangabad, Maharashtra, over the college’s examination dress code policy concerning the hijab.
18-02-26 06:03 pm
HK News Desk
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
ಕಾಪಿರೈಟ್ ಕದನದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ...
17-02-26 02:53 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
18-02-26 11:19 am
Mangaluru Staffer
Parameshwara in Mangalore: ಶಾಸಕರು ವಿದೇಶಕ್ಕೆ ತ...
17-02-26 12:42 pm
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
18-02-26 07:42 pm
Mangaluru Staffer
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm
ದಾವಣಗೆರೆ ಬೆನ್ನಲ್ಲೇ ಮಂಗಳೂರು ಕೋರ್ಟಿಗೂ ಬೆದರಿಕೆ ಸ...
16-02-26 04:01 pm