ಬ್ರೇಕಿಂಗ್ ನ್ಯೂಸ್
07-07-25 08:45 pm HK News Desk ದೇಶ - ವಿದೇಶ
ಪಾಟ್ನಾ, ಜುಲೈ 7 : ಫೇಸ್ಬುಕ್ ನಲ್ಲಿ ಪರಿಚಯವಾದ ಮುಸ್ಲಿಂ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದ ಹಿಂದು ಯುವತಿಯನ್ನು ಗೋಮಾಂಸ ತಿನ್ನಿಸಿ ಇಸ್ಲಾಮಿಗೆ ಮತಾಂತರವಾಗುವಂತೆ ಒತ್ತಡ ಹೇರಿದ ಘಟನೆ ಬಿಹಾರದಲ್ಲಿ ನಡೆದಿದ್ದು, ಯುವತಿ ಪೊಲೀಸ್ ದೂರು ನೀಡಿ ತನ್ನನ್ನು ತನ್ನದೇ ಊರಿಗೆ ತಲುಪಿಸುವಂತೆ ಗೋಗರೆದಿದ್ದಾಳೆ.
ಯುವತಿ ಮಧ್ಯಪ್ರದೇಶದ ಇಂದೋರ್ ಮೂಲದ ಆರತಿ ಎಂಬಾಕೆಯಾಗಿದ್ದು, ಬಿಹಾರದ ಬೆಗುಸರಾಯ್ ಜಿಲ್ಲೆಯ ನಿವಾಸಿ ಮೊಹಮ್ಮದ್ ಶಹಬಾಜ್ ಎಂಬಾತನನ್ನು ಐದು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದಳು. ಇದೀಗ ತನ್ನನ್ನು ಗೋಮಾಂಸ ತಿನ್ನುವಂತೆ ಹಾಗೂ ಇಸ್ಲಾಮಿಗೆ ಮತಾಂತರ ಆಗಲು ಒತ್ತಡ ಹೇರುತ್ತಿದ್ದಾನೆ. ನನ್ನ ಮೊಬೈಲಿನಲ್ಲಿದ್ದ ಹಿಂದು ದೇವರ ಫೋಟೋಗಳನ್ನು ಡಿಲೀಟ್ ಮಾಡಿದ್ದಾನೆ. ನಿರಾಕರಿಸಿದ್ದಕ್ಕೆ ಹಲ್ಲೆ ಮಾಡಿದ್ದಾನೆಂದು ಯುವತಿ ಪೊಲೀಸರಿಗೆ ತಿಳಿಸಿದ್ದಾಳೆ.
ಫೇಸ್ಬುಕ್ ನಲ್ಲಿ ಪರಿಚಯವಾದ ಸಂದರ್ಭದಲ್ಲಿ ತನ್ನನ್ನು ಚಿನ್ನ ಮತ್ತು ಬೆಳ್ಳಿಯ ವ್ಯಾಪಾರಿಯೆಂದು ಶಹಬಾಜ್ ಪರಿಚಯಿಸಿಕೊಂಡಿದ್ದ. ಆದರೆ ಇಲ್ಲಿ ಬಂದು ನೋಡಿದಾಗ ಆತ ಅಂಗಡಿ ಒಂದರಲ್ಲಿ ಮಾಲೆ ನೇಯುವ ಕೆಲಸ ಮಾಡುತ್ತಿದ್ದ. ಆದರೂ ಜೊತೆಗೆ ವಾಸ ಮಾಡಿದ್ದೆ. ಈಗ ಈ ರೀತಿ ಮಾಡುತ್ತಿರುವುದರಿಂದ ನನ್ನನ್ನು ಬದುಕಲು ಬಿಡುತ್ತಾನೆಂಬ ನಂಬಿಕೆ ಇಲ್ಲ ಎಂದು ಹೇಳಿರುವ ಯುವತಿ, ನಾನು ಆತನ ವಿರುದ್ಧ ದೂರು ಕೊಟ್ಟು ಎಫ್ಐಆರ್ ದಾಖಲಿಸಲು ಹೇಳುವುದಿಲ್ಲ. ನನ್ನನ್ನು ಮರಳಿ ಇಂದೋರ್ ತಲುಪಿಸಿ ಎಂದು ಪೊಲೀಸರಲ್ಲಿ ಕೇಳಿಕೊಂಡಿದ್ದಾಳೆ.
ಮದುವೆಯಾಗಿ ಬಂದ ನಂತರ ಹೆತ್ತವರ ಜೊತೆಗೆ ಸಂಪರ್ಕ ಇಟ್ಟುಕೊಂಡಿಲ್ಲ. ಅವರು ನಾನು ಸತ್ತಿರಬಹುದು ಎಂದು ಭಾವಿಸಿರಬಹುದು. ಆದರೆ ಮರಳಿ ನನ್ನ ಊರಿಗೆ ಹೋಗಲೇಬೇಕೆಂದು ಈಗ ಬಯಕೆಯಾಗಿದೆ ಎಂದು ಆಕೆ ತಿಳಿಸಿದ್ದಾಳೆ. ಆದರೆ ಶಹಬಾಜ್ ತನ್ನ ಮೇಲಿನ ಆರೋಪವನ್ನು ನಿರಾಕರಿಸಿದ್ದು, ಆಕೆ ಮಕ್ಕಳಾಗದಂತೆ ಆಪರೇಶನ್ ಮಾಡಿಕೊಂಡಿದ್ದು, ಮುಂದೆಯೂ ಮಕ್ಕಳು ಆಗಲ್ಲ. ಬೇರೆ ಪುರುಷರ ಜೊತೆಗೂ ಸಂಬಂಧ ಹೊಂದಿದ್ದು, ನನ್ನ ಜೊತೆಗಿದ್ದ ಐದು ವರ್ಷದಲ್ಲಿ ಮೂರು ಬಾರಿ ಮನೆಯಿಂದ ಓಡಿ ಹೋಗಿದ್ದಾಳೆ ಎಂದು ಹೇಳಿದ್ದಾನೆ. ಎಸ್ಪಿ ಸುಬೋಧ್ ಕುಮಾರ್, ಆಕೆ ದೂರು ಕೊಡಲು ಮುಂದೆ ಬರುತ್ತಿಲ್ಲ. ತನ್ನನ್ನು ಮರಳಿ ಇಂದೋರ್ ತಲುಪಿಸುವಂತೆ ದೂರಿನಲ್ಲಿ ಕೇಳಿಕೊಂಡಿದ್ದಾಳೆ. ಸದ್ಯಕ್ಕೆ ನಿಗಾ ಕೇಂದ್ರದಲ್ಲಿ ಇರಿಸಿದ್ದು, ಇಂದೋರ್ ತಲುಪಿಸಲು ಏರ್ಪಾಡು ಮಾಡುತ್ತೇವೆ ಎಂದಿದ್ದಾರೆ.
A woman from Indore alleged that her husband from Begusarai, Bihar forced her to eat beef and change her religion after marriage. The couple met on Facebook and married five years ago.
26-06-26 08:30 pm
HK News Staffer
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
26-06-26 09:42 pm
HK News Staffer
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
26-06-26 07:35 pm
HK News Staffer
ಕುಳಾಯಿಗುಡ್ಡೆಯ ಮನೆ ಮೇಲೆ ಸಿಸಿಬಿ ದಾಳಿ, 2.10 ಲಕ್ಷ...
26-06-26 04:26 pm
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm