ಬ್ರೇಕಿಂಗ್ ನ್ಯೂಸ್
16-07-25 09:58 pm HK News Desk ದೇಶ - ವಿದೇಶ
ಕೊಲ್ಲಂ, ಜುಲೈ 16: ಯೆಮೆನ್ನಲ್ಲಿ ನರ್ಸ್ ನಿಮಿಷಾ ಪ್ರಿಯಾಗೆ ಗಲ್ಲು ಶಿಕ್ಷೆ ಜಾರಿ ಸದ್ಯಕ್ಕೆ ಮುಂದೂಡಿಕೆಯಾದರೂ, ಕೊಲೆಯಾದ ವ್ಯಕ್ತಿಯ ಕುಟುಂಬಸ್ಥರು ಬ್ಲಡ್ ಮನಿಗೆ ನಿರಾಕರಿಸಿದ್ದಾರೆ. ಕೇರಳದ ಪ್ರಭಾವಿ ಸುನ್ನಿ ಮುಸ್ಲಿಂ ಧರ್ಮಗುರು ಕಾಂತಪುರಂ ಎ.ಪಿ ಅಬೂಬಕರ್ ಮುಸ್ಲಿಯಾರ್ ಅವರ ಮಧ್ಯಪ್ರವೇಶದ ನಂತರ ಶಿಕ್ಷೆ ಮುಂದೂಡಲಾಗಿತ್ತು. ಸದ್ಯಕ್ಕೆ ನಿಮಿಷಾ ಗಲ್ಲು ಶಿಕ್ಷೆಯಿಂದ ಬಚಾವ್ ಆಗಿದ್ದರೂ, ಮೃತನ ಕುಟುಂಬದ ನಿಲುವಿನ ಮೇಲೆ ನಿಂತಿದೆ.
ನರ್ಸ್ ನಿಮಿಷಾ ಪರವಾಗಿ ದಾನಿಗಳ ನೆರವಿನಿಂದ ದೊಡ್ಡ ಮೊತ್ತದ ಪರಿಹಾರ ನೀಡಲು ಸಿದ್ಧರಿದ್ದರೂ, ಯೆಮೆನ್ನಲ್ಲಿರುವ ಮೃತ ವ್ಯಕ್ತಿ ತಲಾಲ್ ಅಬ್ದೋ ಮಹ್ದಿ ಅವರ ಸೋದರ ಮಾತ್ರ ಬ್ಲಡ್ ಮನಿ (ಮೃತರ ಕುಟುಂಬಕ್ಕೆ ಅವರು ಕೇಳಿದಷ್ಟು ಆರ್ಥಿಕ ಸಹಾಯ ನೀಡುವುದು) ಸ್ವೀಕರಿಸಲು ಒಪ್ಪಿಕೊಂಡಿಲ್ಲ. ಹೀಗಾಗಿ ಪ್ರಕರಣ ಇನ್ನಷ್ಟು ಜಟಿಲವಾಗಿದ್ದು ಕುಟುಂಬದ ಮನವೊಲಿಕೆ ಮುಂದುವರಿದಿದೆ.
ನಿಮಿಷಾ ಪ್ರಿಯಾ ಅವರ ವಕೀಲ ಸುಭಾಷ್ ಚಂದ್ರನ್ ಕೆ.ಆರ್ ಅವರು ಕಾಂತಪುರಂ ಅಬೂಬಕರ್ ಮುಸ್ಲಿಯಾರ್ ಮೂಲಕ ತಲಾಲ್ ಅಬ್ದೋ ಮಹ್ದಿ ಅವರ ಕುಟುಂಬ ಸದಸ್ಯರನ್ನು ಮನವೊಲಿಸಲು ಮುಂದಾಗಿದ್ದಾರೆ. ನಿಮಿಷಾ ಪರವಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸೇವ್ ನಿಮಿಷಾ ಪ್ರಿಯಾ ಇಂಟರ್ನ್ಯಾಷನಲ್ ಹೆಸರಲ್ಲಿ ಕ್ರೌಡ್ ಫಂಡಿಂಗ್ ಮಾಡಲಾಗುತ್ತಿದ್ದು ಕೇರಳ ಮೂಲದ ಗಲ್ಫ್ ಉದ್ಯಮಿಗಳು ನೆರವು ನೀಡಿದ್ದಾರೆ. ಕೇರಳ ಮೂಲದ ಲುಲ್ಲು ಮಾಲ್ ಮಾಲೀಕ ಸೇರಿದಂತೆ ಹಲವು ಉದ್ಯಮಿಗಳ ನೆರವಿನಿಂದ 12 ಕೋಟಿಯಷ್ಟು ಬ್ಲಡ್ ಮನಿ ನೀಡಲು ಕುಟುಂಬಕ್ಕೆ ಆಫರ್ ಮಾಡಲಾಗಿದೆ.
ಆದರೆ ತಲಾಲ್ ಅಬ್ದೋ ಮಹ್ದಿ ಅವರ ಕುಟುಂಬವು ಬ್ಲಡ್ ಮನಿ ಸ್ವೀಕರಿಸಲು ನಿರಾಕರಿಸಿದ್ದು ಆರೋಪಿಗೆ ಕ್ಷಮೆ ನೀಡುವುದಿಲ್ಲ. ಷರಿಯಾ ಪ್ರಕಾರ ಗಲ್ಲು ಶಿಕ್ಷೆಯನ್ನೇ ಜಾರಿಗೊಳಿಸಬೇಕು ಎಂದು ಪಟ್ಟು ಹಿಡಿದಿದೆ ಎನ್ನಲಾಗುತ್ತಿದೆ.
ಗಲ್ಲು ಶಿಕ್ಷೆಗೆ ಬದಲಾಗಿ ಕ್ಷಮಾದಾನಕ್ಕೆ ಬ್ಲಡ್ ಮನಿ ಮೂಲಕ, ಕೊಲ್ಲಲ್ಪಟ್ಟ ವ್ಯಕ್ತಿಯ ಕುಟುಂಬಕ್ಕೆ ಕೇಳಿದಷ್ಟು ಹಣವನ್ನು ಪಾವತಿಸುವ ಅಂಶ ಷರಿಯಾ ಕಾನೂನಿನಲ್ಲಿದೆ. ಇದನ್ನು, ಯೆಮೆನ್, ಸೌದಿ ಅರೆಬಿಯಾ ಸೇರಿದಂತೆ ಹಲವು ಇಸ್ಲಾಮಿಕ್ ರಾಷ್ಟ್ರಗಳಲ್ಲಿ ಅನುಸರಿಸಲಾಗುತ್ತದೆ.
The life of Kerala-based nurse Nimisha Priya - who was facing execution in Yemen - has been temporarily spared thanks to the timely intervention of prominent religious figures across two countries.The Grand Mufti of India, Sheikh Abubakr Ahmad, had reached out to renowned Yemeni cleric Sheikh Umar bin Hafiz to intercede with the family of Talal Abdol Mehdi - Priya's Yemeni employer whom she killed inadvertently.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am