ಬ್ರೇಕಿಂಗ್ ನ್ಯೂಸ್
20-07-25 04:47 pm HK News Desk ದೇಶ - ವಿದೇಶ
ನವದೆಹಲಿ, ಜುಲೈ 20 : ಸಿಆರ್ಪಿಎಫ್ ಯೋಧನೊಬ್ಬ ತನ್ನ ಜೊತೆಗೆ ಲಿವ್ ಇನ್ ರಿಲೇಶನ್ನಲ್ಲಿದ್ದ ಪ್ರಿಯತಮೆಯೂ, ವೃತ್ತಿಯಲ್ಲಿ ಎಎಸ್ಐ ಆಗಿದ್ದ ಯುವತಿಯನ್ನು ಇರಿದು ಕೊಂದು ಬಳಿಕ ಆಕೆ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಠಾಣೆಯಲ್ಲಿ ಶರಣಾದ ಘಟನೆ ಗುಜರಾತ್ನ ಕಚ್ ಜಿಲ್ಲೆಯ ಅಂಜಾರ್ನಲ್ಲಿ ನಡೆದಿದೆ.
ಅರುಣಾಬೆನ್ ನಟುಭಾಯಿ ಜಾದವ್ (25) ಕೊಲೆಯಾದ ಯುವತಿಯಾಗಿದ್ದು ಕಛ್ ಜಿಲ್ಲೆಯ ಅಂಜಾರ್ ಪೊಲೀಸ್ ಠಾಣೆಯಲ್ಲಿ ಸಹಾಯಕ ಸಬ್ ಇನ್ಸ್ಪೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದರು. ಹತ್ಯೆಗೈದ ಆರೋಪಿ ದಿಲೀಪ್ ಡಾಂಗ್ಚಿಯಾ ಸಿಆರ್ಪಿಎಫ್ ಯೋಧನಾಗಿದ್ದು, ಇಬ್ಬರೂ ಹಲವು ವರ್ಷಗಳಿಂದ ಲಿವ್ ಇನ್ನಲ್ಲಿದ್ದರು. ಹತ್ಯೆಯ ಬಳಿಕ ಆರೋಪಿ ಆಕೆ ಕೆಲಸ ಮಾಡುತ್ತಿದ್ದ ಅಂಜಾರ್ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ.

ಶುಕ್ರವಾರ ರಾತ್ರಿ ಅರುಣಾಬೆನ್ ಮತ್ತು ಆರೋಪಿ ಮನೆಯಲ್ಲಿ ಜಗಳವಾಡಿದ್ದು ಈ ವೇಳೆ ತಾಯಿ ಬಗ್ಗೆ ಅವಹೇಳನಕಾರಿ ಮಾತನಾಡಿದ್ದಕ್ಕೆ ಕೊಲೆ ಮಾಡಿರುವುದಾಗಿ ಆರೋಪಿ ಪೊಲೀಸರ ಬಳಿ ಹೇಳಿಕೊಂಡಿದ್ದಾನೆ. 2021ರಲ್ಲಿ ಇನ್ಸ್ಟಾಗ್ರಾಮ್ ಮೂಲಕ ಇಬ್ಬರು ಪರಿಚಯ ಆಗಿದ್ದರು. ಬಳಿಕ ಪರಿಚಯ ಪ್ರೇಮಕ್ಕೆ ತಿರುಗಿ, ಒಟ್ಟಿಗೆ ವಾಸವಿದ್ದರು. ಇಬ್ಬರೂ ಮುಂದೆ ಮದುವೆಯಾಗಲು ನಿರ್ಧರಿಸಿದ್ದರು. ಆದರೆ ಇದರ ನಡುವೆಯೇ ಇವರ ಬಾಳಲ್ಲಿ ದುರಂತ ನಡೆದುಹೋಗಿದೆ. ಶುಕ್ರವಾರ ರಾತ್ರಿ 10 ಗಂಟೆ ಸುಮಾರಿಗೆ ಇವರು ವಾಸವಿದ್ದ ಕೊಠಡಿಯಲ್ಲೇ ಸಣ್ಣ ವಿಚಾರಕ್ಕೆ ಜಗಳ ಶುರುವಾಗಿದ್ದು ದಿಲೀಪ್ ತನ್ನ ಪ್ರಿಯತಮೆಯನ್ನು ಕತ್ತು ಹಿಸುಕಿ ಕೊಂದು ಪೊಲೀಸರಿಗೆ ಶರಣಾಗಿದ್ದಾರೆ.
In a shocking incident from Anjar in Gujarat’s Kutch district, a Central Reserve Police Force (CRPF) jawan allegedly strangled his live-in partner, who was serving as an Assistant Sub-Inspector (ASI), and later surrendered at the very police station where she was posted.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am