ಬ್ರೇಕಿಂಗ್ ನ್ಯೂಸ್
20-07-25 04:47 pm HK News Desk ದೇಶ - ವಿದೇಶ
ನವದೆಹಲಿ, ಜುಲೈ 20 : ಸಿಆರ್ಪಿಎಫ್ ಯೋಧನೊಬ್ಬ ತನ್ನ ಜೊತೆಗೆ ಲಿವ್ ಇನ್ ರಿಲೇಶನ್ನಲ್ಲಿದ್ದ ಪ್ರಿಯತಮೆಯೂ, ವೃತ್ತಿಯಲ್ಲಿ ಎಎಸ್ಐ ಆಗಿದ್ದ ಯುವತಿಯನ್ನು ಇರಿದು ಕೊಂದು ಬಳಿಕ ಆಕೆ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಠಾಣೆಯಲ್ಲಿ ಶರಣಾದ ಘಟನೆ ಗುಜರಾತ್ನ ಕಚ್ ಜಿಲ್ಲೆಯ ಅಂಜಾರ್ನಲ್ಲಿ ನಡೆದಿದೆ.
ಅರುಣಾಬೆನ್ ನಟುಭಾಯಿ ಜಾದವ್ (25) ಕೊಲೆಯಾದ ಯುವತಿಯಾಗಿದ್ದು ಕಛ್ ಜಿಲ್ಲೆಯ ಅಂಜಾರ್ ಪೊಲೀಸ್ ಠಾಣೆಯಲ್ಲಿ ಸಹಾಯಕ ಸಬ್ ಇನ್ಸ್ಪೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದರು. ಹತ್ಯೆಗೈದ ಆರೋಪಿ ದಿಲೀಪ್ ಡಾಂಗ್ಚಿಯಾ ಸಿಆರ್ಪಿಎಫ್ ಯೋಧನಾಗಿದ್ದು, ಇಬ್ಬರೂ ಹಲವು ವರ್ಷಗಳಿಂದ ಲಿವ್ ಇನ್ನಲ್ಲಿದ್ದರು. ಹತ್ಯೆಯ ಬಳಿಕ ಆರೋಪಿ ಆಕೆ ಕೆಲಸ ಮಾಡುತ್ತಿದ್ದ ಅಂಜಾರ್ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ.

ಶುಕ್ರವಾರ ರಾತ್ರಿ ಅರುಣಾಬೆನ್ ಮತ್ತು ಆರೋಪಿ ಮನೆಯಲ್ಲಿ ಜಗಳವಾಡಿದ್ದು ಈ ವೇಳೆ ತಾಯಿ ಬಗ್ಗೆ ಅವಹೇಳನಕಾರಿ ಮಾತನಾಡಿದ್ದಕ್ಕೆ ಕೊಲೆ ಮಾಡಿರುವುದಾಗಿ ಆರೋಪಿ ಪೊಲೀಸರ ಬಳಿ ಹೇಳಿಕೊಂಡಿದ್ದಾನೆ. 2021ರಲ್ಲಿ ಇನ್ಸ್ಟಾಗ್ರಾಮ್ ಮೂಲಕ ಇಬ್ಬರು ಪರಿಚಯ ಆಗಿದ್ದರು. ಬಳಿಕ ಪರಿಚಯ ಪ್ರೇಮಕ್ಕೆ ತಿರುಗಿ, ಒಟ್ಟಿಗೆ ವಾಸವಿದ್ದರು. ಇಬ್ಬರೂ ಮುಂದೆ ಮದುವೆಯಾಗಲು ನಿರ್ಧರಿಸಿದ್ದರು. ಆದರೆ ಇದರ ನಡುವೆಯೇ ಇವರ ಬಾಳಲ್ಲಿ ದುರಂತ ನಡೆದುಹೋಗಿದೆ. ಶುಕ್ರವಾರ ರಾತ್ರಿ 10 ಗಂಟೆ ಸುಮಾರಿಗೆ ಇವರು ವಾಸವಿದ್ದ ಕೊಠಡಿಯಲ್ಲೇ ಸಣ್ಣ ವಿಚಾರಕ್ಕೆ ಜಗಳ ಶುರುವಾಗಿದ್ದು ದಿಲೀಪ್ ತನ್ನ ಪ್ರಿಯತಮೆಯನ್ನು ಕತ್ತು ಹಿಸುಕಿ ಕೊಂದು ಪೊಲೀಸರಿಗೆ ಶರಣಾಗಿದ್ದಾರೆ.
In a shocking incident from Anjar in Gujarat’s Kutch district, a Central Reserve Police Force (CRPF) jawan allegedly strangled his live-in partner, who was serving as an Assistant Sub-Inspector (ASI), and later surrendered at the very police station where she was posted.
18-02-26 06:03 pm
HK News Desk
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
ಕಾಪಿರೈಟ್ ಕದನದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ...
17-02-26 02:53 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
18-02-26 11:19 am
Mangaluru Staffer
Parameshwara in Mangalore: ಶಾಸಕರು ವಿದೇಶಕ್ಕೆ ತ...
17-02-26 12:42 pm
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
18-02-26 07:42 pm
Mangaluru Staffer
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm
ದಾವಣಗೆರೆ ಬೆನ್ನಲ್ಲೇ ಮಂಗಳೂರು ಕೋರ್ಟಿಗೂ ಬೆದರಿಕೆ ಸ...
16-02-26 04:01 pm