ಬ್ರೇಕಿಂಗ್ ನ್ಯೂಸ್
22-07-25 12:58 pm HK News Desk ದೇಶ - ವಿದೇಶ
ತಿರುವನಂತಪುರಂ, ಜುಲೈ 22 : ಕೊಲೆ ಪ್ರಕರಣದಲ್ಲಿ ಮರಣದಂಡನೆಗೆ ಗುರಿಯಾಗಿದ್ದ ಕೇರಳ ಮೂಲದ ನರ್ಸ್ ನಿಮಿಷಾ ಪ್ರಿಯಾ ಅವರನ್ನು ಯೆಮೆನ್ ಸರ್ಕಾರ ಜೈಲಿನಿಂದ ಶೀಘ್ರದಲ್ಲೇ ಬಿಡುಗಡೆ ಮಾಡಲಿದೆ. ಭಾರತ ಸರ್ಕಾರದ ಪ್ರತಿನಿಧಿಗಳು, ಹಲವು ಗಣ್ಯರ ಪ್ರಯತ್ನದಿಂದಾಗಿ ಯೆಮೆನ್ ಸರ್ಕಾರ ನಿಮಿಷಾ ಪ್ರಿಯಾಳ ಗಲ್ಲು ಶಿಕ್ಷೆಯನ್ನು ರದ್ದುಪಡಿಸಿದೆ ಎಂದು ಗ್ಲೋಬಲ್ ಪೀಸ್ ಸಂಸ್ಥೆಯ ಸ್ಥಾಪಕ ಮತ್ತು ಕ್ರಿಶ್ಚಿಯನ್ ಧರ್ಮೋಪದೇಶಕ ಡಾ.ಕೆ.ಎ. ಪೌಲ್ ಹೇಳಿಕೆ ಬಿಡುಗಡೆ ಮಾಡಿದ್ದಾರೆ.
ಯೆಮೆನ್ನಲ್ಲಿ ತನ್ನ ಪಾಲುದಾರನ ಕೊಲೆ ಪ್ರಕರಣದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿ ಜೈಲಿನಲ್ಲಿರುವ ನಿಮಿಷಾ ಪ್ರಿಯಾ ಅವರ ಗಲ್ಲು ಶಿಕ್ಷೆ ರದ್ದುಗೊಂಡಿದ್ದು, ಅವರನ್ನು ತಕ್ಷಣ ಬಿಡುಗಡೆ ಮಾಡಲಾಗುತ್ತದೆ ಎಂದು ಆಂಧ್ರಪ್ರದೇಶ ಮೂಲದ ಕ್ರಿಶ್ಚಿಯನ್ ಧರ್ಮೋಪದೇಶಕ ಕೆಎ ಪೌಲ್ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಅಲ್ಲದೆ, ಪ್ರಧಾನಿ ಮೋದಿ ಸರ್ಕಾರಕ್ಕೆ ಧನ್ಯವಾದ ಹೇಳಿದ್ದಾರೆ.


ಕಳೆದ ವಾರ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್, ನಿಮಿಷಾ ಪ್ರಿಯಾ ಪರವಾಗಿ ಯೆಮೆನ್ ಸರ್ಕಾರ ಮತ್ತು ಅಲ್ಲಿನ ನ್ಯಾಯಾಲಯದಲ್ಲಿ ವಾದಿಸಲು ವಕೀಲರನ್ನು ಕಳಿಸಿಕೊಟ್ಟಿದ್ದಾಗಿ ಹೇಳಿದ್ದರು. ಅಲ್ಲದೆ, ಷರಿಯತ್ ಕಾನೂನು ಪ್ರಕಾರ ಕ್ಷಮಾದಾನ ಪಡೆಯುವ ವಿಚಾರದಲ್ಲಿ ನಿಮಿಷಾ ಕುಟುಂಬಕ್ಕೆ ಕಾನೂನು ಪ್ರತಿನಿಧಿಗಳು ಸಹಕಾರ ನೀಡಲಿದ್ದಾರೆ ಎಂದಿದ್ದರು. ಇದಲ್ಲದೆ, ಕೇರಳದ ಎಪಿ ಅಬುಬಕ್ಕರ್ ಮುಸ್ಲಿಯಾರ್ ಅವರು ಯೆಮೆನ್ ದೇಶದ ಮುಸ್ಲಿಂ ಧಾರ್ಮಿಕ ಮುಖಂಡರನ್ನು ಸಂಪರ್ಕಿಸಿ ಕ್ಷಮಾದಾನಕ್ಕೆ ಕೋರಿದ್ದರು. ಅಂತಾರಾಷ್ಟ್ರೀಯ ಮಟ್ಟದಲ್ಲಿ ನಡೆದ ಈ ಒತ್ತಡದಿಂದಾಗಿ ಯೆಮೆನ್ ಸರ್ಕಾರ ನಿಮಿಷಾರನ್ನು ಗಲ್ಲು ಶಿಕ್ಷೆಯಿಂದ ಪಾರು ಮಾಡಿದೆ ಎನ್ನಲಾಗುತ್ತಿದೆ. ಆದರೆ ಈ ಬಗ್ಗೆ ಅಧಿಕೃತ ಮಾಹಿತಿ ಭಾರತ ಸರ್ಕಾರದಿಂದಾಗಲೀ, ಯೆಮೆನ್ ಕಡೆಯಿಂದಾಗಲೀ ಬಂದಿಲ್ಲ.
ಇತ್ತೀಚೆಗೆ ಜುಲೈ 16ಕ್ಕೆ ನಿಗದಿಯಾಗಿದ್ದ ಗಲ್ಲು ಶಿಕ್ಷೆಯನ್ನು ಸುನ್ನಿ ಧರ್ಮಗುರು ಎಪಿ ಮುಸ್ಲಿಯಾರ್ ಕೋರಿಕೆಯಂತೆ ಮುಂದೂಡಿಕೆ ಮಾಡಲಾಗಿತ್ತು. ಅದಕ್ಕು ಮುನ್ನ ಭಾರತ ಸರ್ಕಾರ ತನ್ನ ಕೈಲಾದ ಪ್ರಯತ್ನ ಮಾಡಿದ್ದೇವೆ ಎಂದು ಸುಪ್ರೀಂ ಕೋರ್ಟಿನಲ್ಲಿ ಹೇಳಿಕೆ ನೀಡಿತ್ತು. ಕೇರಳ ಮೂಲದ ಉದ್ಯಮಿಗಳು ಸೇರಿದಂತೆ ದಾನಿಗಳ ಮೂಲಕ ಸಂಗ್ರಹವಾಗಿದ್ದ 12 ಕೋಟಿಯಷ್ಟು ಬ್ಲಡ್ ಮನಿ ಕೊಡಲು ಒಪ್ಪಿದರೂ, ಮೃತನ ಕುಟುಂಬ ಒಪ್ಪದೆ ಇದ್ದುದರಿಂದ ಪ್ರಸ್ತಾಪ ಮುರಿದು ಬಿದ್ದಿತ್ತು.
Evangelist and Founder of Global Peace Initiative Dr KA Paul on Tuesday night (local time) claimed in a video message from Sanaa in Yemen that the death sentence to Indian Nurse Nimisha Priya has been cancelled after days and nights of extensive efforts by Yemeni and Indian leaders.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm