ಬ್ರೇಕಿಂಗ್ ನ್ಯೂಸ್
22-07-25 12:58 pm HK News Desk ದೇಶ - ವಿದೇಶ
ತಿರುವನಂತಪುರಂ, ಜುಲೈ 22 : ಕೊಲೆ ಪ್ರಕರಣದಲ್ಲಿ ಮರಣದಂಡನೆಗೆ ಗುರಿಯಾಗಿದ್ದ ಕೇರಳ ಮೂಲದ ನರ್ಸ್ ನಿಮಿಷಾ ಪ್ರಿಯಾ ಅವರನ್ನು ಯೆಮೆನ್ ಸರ್ಕಾರ ಜೈಲಿನಿಂದ ಶೀಘ್ರದಲ್ಲೇ ಬಿಡುಗಡೆ ಮಾಡಲಿದೆ. ಭಾರತ ಸರ್ಕಾರದ ಪ್ರತಿನಿಧಿಗಳು, ಹಲವು ಗಣ್ಯರ ಪ್ರಯತ್ನದಿಂದಾಗಿ ಯೆಮೆನ್ ಸರ್ಕಾರ ನಿಮಿಷಾ ಪ್ರಿಯಾಳ ಗಲ್ಲು ಶಿಕ್ಷೆಯನ್ನು ರದ್ದುಪಡಿಸಿದೆ ಎಂದು ಗ್ಲೋಬಲ್ ಪೀಸ್ ಸಂಸ್ಥೆಯ ಸ್ಥಾಪಕ ಮತ್ತು ಕ್ರಿಶ್ಚಿಯನ್ ಧರ್ಮೋಪದೇಶಕ ಡಾ.ಕೆ.ಎ. ಪೌಲ್ ಹೇಳಿಕೆ ಬಿಡುಗಡೆ ಮಾಡಿದ್ದಾರೆ.
ಯೆಮೆನ್ನಲ್ಲಿ ತನ್ನ ಪಾಲುದಾರನ ಕೊಲೆ ಪ್ರಕರಣದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿ ಜೈಲಿನಲ್ಲಿರುವ ನಿಮಿಷಾ ಪ್ರಿಯಾ ಅವರ ಗಲ್ಲು ಶಿಕ್ಷೆ ರದ್ದುಗೊಂಡಿದ್ದು, ಅವರನ್ನು ತಕ್ಷಣ ಬಿಡುಗಡೆ ಮಾಡಲಾಗುತ್ತದೆ ಎಂದು ಆಂಧ್ರಪ್ರದೇಶ ಮೂಲದ ಕ್ರಿಶ್ಚಿಯನ್ ಧರ್ಮೋಪದೇಶಕ ಕೆಎ ಪೌಲ್ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಅಲ್ಲದೆ, ಪ್ರಧಾನಿ ಮೋದಿ ಸರ್ಕಾರಕ್ಕೆ ಧನ್ಯವಾದ ಹೇಳಿದ್ದಾರೆ.


ಕಳೆದ ವಾರ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್, ನಿಮಿಷಾ ಪ್ರಿಯಾ ಪರವಾಗಿ ಯೆಮೆನ್ ಸರ್ಕಾರ ಮತ್ತು ಅಲ್ಲಿನ ನ್ಯಾಯಾಲಯದಲ್ಲಿ ವಾದಿಸಲು ವಕೀಲರನ್ನು ಕಳಿಸಿಕೊಟ್ಟಿದ್ದಾಗಿ ಹೇಳಿದ್ದರು. ಅಲ್ಲದೆ, ಷರಿಯತ್ ಕಾನೂನು ಪ್ರಕಾರ ಕ್ಷಮಾದಾನ ಪಡೆಯುವ ವಿಚಾರದಲ್ಲಿ ನಿಮಿಷಾ ಕುಟುಂಬಕ್ಕೆ ಕಾನೂನು ಪ್ರತಿನಿಧಿಗಳು ಸಹಕಾರ ನೀಡಲಿದ್ದಾರೆ ಎಂದಿದ್ದರು. ಇದಲ್ಲದೆ, ಕೇರಳದ ಎಪಿ ಅಬುಬಕ್ಕರ್ ಮುಸ್ಲಿಯಾರ್ ಅವರು ಯೆಮೆನ್ ದೇಶದ ಮುಸ್ಲಿಂ ಧಾರ್ಮಿಕ ಮುಖಂಡರನ್ನು ಸಂಪರ್ಕಿಸಿ ಕ್ಷಮಾದಾನಕ್ಕೆ ಕೋರಿದ್ದರು. ಅಂತಾರಾಷ್ಟ್ರೀಯ ಮಟ್ಟದಲ್ಲಿ ನಡೆದ ಈ ಒತ್ತಡದಿಂದಾಗಿ ಯೆಮೆನ್ ಸರ್ಕಾರ ನಿಮಿಷಾರನ್ನು ಗಲ್ಲು ಶಿಕ್ಷೆಯಿಂದ ಪಾರು ಮಾಡಿದೆ ಎನ್ನಲಾಗುತ್ತಿದೆ. ಆದರೆ ಈ ಬಗ್ಗೆ ಅಧಿಕೃತ ಮಾಹಿತಿ ಭಾರತ ಸರ್ಕಾರದಿಂದಾಗಲೀ, ಯೆಮೆನ್ ಕಡೆಯಿಂದಾಗಲೀ ಬಂದಿಲ್ಲ.
ಇತ್ತೀಚೆಗೆ ಜುಲೈ 16ಕ್ಕೆ ನಿಗದಿಯಾಗಿದ್ದ ಗಲ್ಲು ಶಿಕ್ಷೆಯನ್ನು ಸುನ್ನಿ ಧರ್ಮಗುರು ಎಪಿ ಮುಸ್ಲಿಯಾರ್ ಕೋರಿಕೆಯಂತೆ ಮುಂದೂಡಿಕೆ ಮಾಡಲಾಗಿತ್ತು. ಅದಕ್ಕು ಮುನ್ನ ಭಾರತ ಸರ್ಕಾರ ತನ್ನ ಕೈಲಾದ ಪ್ರಯತ್ನ ಮಾಡಿದ್ದೇವೆ ಎಂದು ಸುಪ್ರೀಂ ಕೋರ್ಟಿನಲ್ಲಿ ಹೇಳಿಕೆ ನೀಡಿತ್ತು. ಕೇರಳ ಮೂಲದ ಉದ್ಯಮಿಗಳು ಸೇರಿದಂತೆ ದಾನಿಗಳ ಮೂಲಕ ಸಂಗ್ರಹವಾಗಿದ್ದ 12 ಕೋಟಿಯಷ್ಟು ಬ್ಲಡ್ ಮನಿ ಕೊಡಲು ಒಪ್ಪಿದರೂ, ಮೃತನ ಕುಟುಂಬ ಒಪ್ಪದೆ ಇದ್ದುದರಿಂದ ಪ್ರಸ್ತಾಪ ಮುರಿದು ಬಿದ್ದಿತ್ತು.
Evangelist and Founder of Global Peace Initiative Dr KA Paul on Tuesday night (local time) claimed in a video message from Sanaa in Yemen that the death sentence to Indian Nurse Nimisha Priya has been cancelled after days and nights of extensive efforts by Yemeni and Indian leaders.
18-02-26 06:03 pm
HK News Desk
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
ಕಾಪಿರೈಟ್ ಕದನದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ...
17-02-26 02:53 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
18-02-26 11:19 am
Mangaluru Staffer
Parameshwara in Mangalore: ಶಾಸಕರು ವಿದೇಶಕ್ಕೆ ತ...
17-02-26 12:42 pm
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
18-02-26 07:42 pm
Mangaluru Staffer
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm
ದಾವಣಗೆರೆ ಬೆನ್ನಲ್ಲೇ ಮಂಗಳೂರು ಕೋರ್ಟಿಗೂ ಬೆದರಿಕೆ ಸ...
16-02-26 04:01 pm