ಬ್ರೇಕಿಂಗ್ ನ್ಯೂಸ್
22-07-25 03:04 pm HK News Desk ದೇಶ - ವಿದೇಶ
ತಿರುವನಂತಪುರಂ, ಜುಲೈ 22 : ದೇಶದ ಭದ್ರತೆ ಮತ್ತು ಪಕ್ಷದ ವಿಚಾರದಲ್ಲಿ ಶಶಿ ತರೂರ್ ತನ್ನ ನಿಲುವು ಬದಲಾಯಿಸಿಕೊಳ್ಳುವವರೆಗೂ ಕೇರಳದ ರಾಜಧಾನಿ ತಿರುವನಂತಪುರಂನಲ್ಲಿ ಆಯೋಜಿಸುವ ಪಕ್ಷದ ಕಾರ್ಯಕ್ರಮಕ್ಕೆ ಅವರನ್ನು ಆಹ್ವಾನಿಸುವುದಿಲ್ಲ ಎಂದು ಹಿರಿಯ ಕಾಂಗ್ರೆಸ್ ನಾಯಕ ಕೆ. ಮುರಳೀಧರನ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಮುರಳೀಧರನ್, ತರೂರ್ ಅವರ ಇತ್ತೀಚಿನ ಹೇಳಿಕೆಗಳು ಪಕ್ಷದ ಸಾಮೂಹಿಕ ನಿಲುವಿನಿಂದ ಅವರನ್ನು ದೂರವಿಟ್ಟಿದೆ. ಅವರು ನಮ್ಮೊಂದಿಗಿಲ್ಲ, ಹೀಗಾಗಿ ಅವರು ಕಾರ್ಯಕ್ರಮ ಬಹಿಷ್ಕರಿಸುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.
ಪಹಲ್ಗಾಮ್ ಭಯೋತ್ಪಾದಕ ದಾಳಿ ಸೇರಿದಂತೆ ಇತ್ತೀಚಿನ ದೇಶದ ಭದ್ರತೆ ವಿಚಾರದಲ್ಲಿ ಕೇಂದ್ರ ಸರ್ಕಾರ ಮತ್ತು ಶಸಾಸ್ತ್ರ ಪಡೆಯನ್ನು ಬಹಿರಂಗವಾಗಿ ಬೆಂಬಲಿಸಿದ ಶಶಿ ತರೂರ್ ಬಗ್ಗೆ ಕಾಂಗ್ರೆಸ್ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದರು. ಈ ನಡುವೆ, ಕೊಚ್ಚಿಯಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ ಮಾತನಾಡಿದ ಶಶಿ ತರೂರ್, ತನ್ನ ನಿಲುವನ್ನು ಸಮರ್ಥಿಸಿಕೊಂಡಿದ್ದರು. ಕಾಂಗ್ರೆಸ್ ನಾಯಕರೊಂದಿಗೆ ತಮ್ಮ ಭಿನ್ನಾಭಿಪ್ರಾಯದ ನಡುವೆ, ಸಂಸದ ಶಶಿ ತರೂರ್, ರಾಷ್ಟ್ರೀಯ ಭದ್ರತೆಯ ಹಿತದೃಷ್ಟಿಯಿಂದ ಕೆಲವೊಮ್ಮೆ ಇತರ ಪಕ್ಷಗಳೊಂದಿಗೆ ಸಹಕರಿಸುವುದು ಅಗತ್ಯವಾಗುತ್ತದೆ ಎಂದು ಹೇಳಿದ್ದರು.
ಪಕ್ಷದ ವರ್ಚಸ್ಸಿಗೆ ಧಕ್ಕೆ ತರುವಂತಹ ಹೇಳಿಕೆ ನೀಡುತ್ತಿರುವ ಶಶಿ ತರೂರ್, ತನ್ನ ನಿಲುವು ಬದಲಾಯಿಸಿಕೊಳ್ಳುವವರೆಗೂ ತಿರುವನಂತಪುರಂನಲ್ಲಿ ಆಯೋಜಿಸುವ ಪಕ್ಷದ ಯಾವುದೇ ಸಮಾರಂಭಕ್ಕೂ ಕರೆಯಲ್ಲ. ತರೂರ್ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವುದು ಪಕ್ಷದ ರಾಷ್ಟ್ರೀಯ ನಾಯಕರಿಗೆ ಬಿಟ್ಟ ವಿಚಾರ ಎಂದು ಮುರಳೀಧರನ್ ಹೇಳಿದ್ದಾರೆ.
ಕೇರಳ ಸಿಎಂ ಸ್ಥಾನಕ್ಕೆ ಶಶಿ ತರೂರ್ ಟಾಪ್ ಆಯ್ಕೆ ಎಂದು ಸೂಚಿಸುವ ಸಮೀಕ್ಷೆಯೊಂದನ್ನು ತರೂರ್ ಹಂಚಿಕೊಂಡ ನಂತರ ಅಸಮಾಧಾನ ಮತ್ತಷ್ಟು ಹೆಚ್ಚಾಗಿತ್ತು. ತರೂರ್ ಯಾವ ಪಕ್ಷಕ್ಕೆ ಸೇರಿದವರು ಎಂಬುದನ್ನು ಮೊದಲು ನಿರ್ಧರಿಸಬೇಕು ಎಂದು ಮುರಳೀಧರನ್ ಟೀಕಿಸಿದ್ದಾರೆ. ಮಲಯಾಳಂ ದೈನಿಕದಲ್ಲಿ ಇತ್ತೀಚೆಗೆ ಇಂದಿರಾ ಗಾಂಧಿ ಮತ್ತು ತುರ್ತು ಪರಿಸ್ಥಿತಿ ಕುರಿತಾದ ಶಶಿ ತರೂರ್ ಲೇಖನ ಪ್ರಕಟವಾದ ನಂತರ ಅವರ ವಿರುದ್ಧ ಕಾಂಗ್ರೆಸ್ ನಾಯಕರು ವಾಗ್ದಾಳಿ ನಡೆಸುತ್ತಿದ್ದಾರೆ.
Senior Congress leader K. Muraleedharan has made it clear that party MP Dr. Shashi Tharoor will not be invited to any Congress events in Thiruvananthapuram until he changes his stance on matters concerning national security and party positions.
18-02-26 06:03 pm
HK News Desk
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
ಕಾಪಿರೈಟ್ ಕದನದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ...
17-02-26 02:53 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
18-02-26 11:19 am
Mangaluru Staffer
Parameshwara in Mangalore: ಶಾಸಕರು ವಿದೇಶಕ್ಕೆ ತ...
17-02-26 12:42 pm
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
18-02-26 07:42 pm
Mangaluru Staffer
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm
ದಾವಣಗೆರೆ ಬೆನ್ನಲ್ಲೇ ಮಂಗಳೂರು ಕೋರ್ಟಿಗೂ ಬೆದರಿಕೆ ಸ...
16-02-26 04:01 pm