ಬ್ರೇಕಿಂಗ್ ನ್ಯೂಸ್
22-07-25 03:04 pm HK News Desk ದೇಶ - ವಿದೇಶ
ತಿರುವನಂತಪುರಂ, ಜುಲೈ 22 : ದೇಶದ ಭದ್ರತೆ ಮತ್ತು ಪಕ್ಷದ ವಿಚಾರದಲ್ಲಿ ಶಶಿ ತರೂರ್ ತನ್ನ ನಿಲುವು ಬದಲಾಯಿಸಿಕೊಳ್ಳುವವರೆಗೂ ಕೇರಳದ ರಾಜಧಾನಿ ತಿರುವನಂತಪುರಂನಲ್ಲಿ ಆಯೋಜಿಸುವ ಪಕ್ಷದ ಕಾರ್ಯಕ್ರಮಕ್ಕೆ ಅವರನ್ನು ಆಹ್ವಾನಿಸುವುದಿಲ್ಲ ಎಂದು ಹಿರಿಯ ಕಾಂಗ್ರೆಸ್ ನಾಯಕ ಕೆ. ಮುರಳೀಧರನ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಮುರಳೀಧರನ್, ತರೂರ್ ಅವರ ಇತ್ತೀಚಿನ ಹೇಳಿಕೆಗಳು ಪಕ್ಷದ ಸಾಮೂಹಿಕ ನಿಲುವಿನಿಂದ ಅವರನ್ನು ದೂರವಿಟ್ಟಿದೆ. ಅವರು ನಮ್ಮೊಂದಿಗಿಲ್ಲ, ಹೀಗಾಗಿ ಅವರು ಕಾರ್ಯಕ್ರಮ ಬಹಿಷ್ಕರಿಸುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.
ಪಹಲ್ಗಾಮ್ ಭಯೋತ್ಪಾದಕ ದಾಳಿ ಸೇರಿದಂತೆ ಇತ್ತೀಚಿನ ದೇಶದ ಭದ್ರತೆ ವಿಚಾರದಲ್ಲಿ ಕೇಂದ್ರ ಸರ್ಕಾರ ಮತ್ತು ಶಸಾಸ್ತ್ರ ಪಡೆಯನ್ನು ಬಹಿರಂಗವಾಗಿ ಬೆಂಬಲಿಸಿದ ಶಶಿ ತರೂರ್ ಬಗ್ಗೆ ಕಾಂಗ್ರೆಸ್ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದರು. ಈ ನಡುವೆ, ಕೊಚ್ಚಿಯಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ ಮಾತನಾಡಿದ ಶಶಿ ತರೂರ್, ತನ್ನ ನಿಲುವನ್ನು ಸಮರ್ಥಿಸಿಕೊಂಡಿದ್ದರು. ಕಾಂಗ್ರೆಸ್ ನಾಯಕರೊಂದಿಗೆ ತಮ್ಮ ಭಿನ್ನಾಭಿಪ್ರಾಯದ ನಡುವೆ, ಸಂಸದ ಶಶಿ ತರೂರ್, ರಾಷ್ಟ್ರೀಯ ಭದ್ರತೆಯ ಹಿತದೃಷ್ಟಿಯಿಂದ ಕೆಲವೊಮ್ಮೆ ಇತರ ಪಕ್ಷಗಳೊಂದಿಗೆ ಸಹಕರಿಸುವುದು ಅಗತ್ಯವಾಗುತ್ತದೆ ಎಂದು ಹೇಳಿದ್ದರು.
ಪಕ್ಷದ ವರ್ಚಸ್ಸಿಗೆ ಧಕ್ಕೆ ತರುವಂತಹ ಹೇಳಿಕೆ ನೀಡುತ್ತಿರುವ ಶಶಿ ತರೂರ್, ತನ್ನ ನಿಲುವು ಬದಲಾಯಿಸಿಕೊಳ್ಳುವವರೆಗೂ ತಿರುವನಂತಪುರಂನಲ್ಲಿ ಆಯೋಜಿಸುವ ಪಕ್ಷದ ಯಾವುದೇ ಸಮಾರಂಭಕ್ಕೂ ಕರೆಯಲ್ಲ. ತರೂರ್ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವುದು ಪಕ್ಷದ ರಾಷ್ಟ್ರೀಯ ನಾಯಕರಿಗೆ ಬಿಟ್ಟ ವಿಚಾರ ಎಂದು ಮುರಳೀಧರನ್ ಹೇಳಿದ್ದಾರೆ.
ಕೇರಳ ಸಿಎಂ ಸ್ಥಾನಕ್ಕೆ ಶಶಿ ತರೂರ್ ಟಾಪ್ ಆಯ್ಕೆ ಎಂದು ಸೂಚಿಸುವ ಸಮೀಕ್ಷೆಯೊಂದನ್ನು ತರೂರ್ ಹಂಚಿಕೊಂಡ ನಂತರ ಅಸಮಾಧಾನ ಮತ್ತಷ್ಟು ಹೆಚ್ಚಾಗಿತ್ತು. ತರೂರ್ ಯಾವ ಪಕ್ಷಕ್ಕೆ ಸೇರಿದವರು ಎಂಬುದನ್ನು ಮೊದಲು ನಿರ್ಧರಿಸಬೇಕು ಎಂದು ಮುರಳೀಧರನ್ ಟೀಕಿಸಿದ್ದಾರೆ. ಮಲಯಾಳಂ ದೈನಿಕದಲ್ಲಿ ಇತ್ತೀಚೆಗೆ ಇಂದಿರಾ ಗಾಂಧಿ ಮತ್ತು ತುರ್ತು ಪರಿಸ್ಥಿತಿ ಕುರಿತಾದ ಶಶಿ ತರೂರ್ ಲೇಖನ ಪ್ರಕಟವಾದ ನಂತರ ಅವರ ವಿರುದ್ಧ ಕಾಂಗ್ರೆಸ್ ನಾಯಕರು ವಾಗ್ದಾಳಿ ನಡೆಸುತ್ತಿದ್ದಾರೆ.
Senior Congress leader K. Muraleedharan has made it clear that party MP Dr. Shashi Tharoor will not be invited to any Congress events in Thiruvananthapuram until he changes his stance on matters concerning national security and party positions.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am