ಬ್ರೇಕಿಂಗ್ ನ್ಯೂಸ್
03-08-25 04:25 pm HK News Desk ದೇಶ - ವಿದೇಶ
ಮುಂಬೈ, ಆ.3: ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ ಸೇರಿದಂತೆ ಹಲವರ ಹೆಸರನ್ನು ಹೇಳುವಂತೆ ತನಿಖಾಧಿಕಾರಿಗಳು ಒತ್ತಡ ಹೇರಿ ನನಗೆ ಚಿತ್ರಹಿಂಸೆ ನೀಡಿದ್ದರು ಎಂದು ಪ್ರಕರಣದಲ್ಲಿ ಖುಲಾಸೆಗೊಂಡಿರುವ ಮಾಜಿ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಹೇಳಿದ್ದಾರೆ.
ಮಾಲೆಗಾಂವ್ ಪ್ರಕರಣದಲ್ಲಿ ಎನ್ಐಎ ನ್ಯಾಯಾಲಯವು ತೀರ್ಪು ಪ್ರಕಟಿಸಿದ ಮರುದಿನ ಸಾಧ್ವಿ ತನಗಾದ ಕಿರುಕುಳದ ಬಗ್ಗೆ ಹೇಳಿಕೊಂಡಿದ್ದಾರೆ.
ಪ್ರಕರಣದ ತನಿಖೆಯ ಸಂದರ್ಭದಲ್ಲಿ ನನಗೆ ತೀವ್ರ ಚಿತ್ರಹಿಂಸೆ ನೀಡಲಾಗಿತ್ತು. ಗುಜರಾತಿನ ಸೂರತ್ ನಲ್ಲಿ ಉಳಿದಿದ್ದಾಗ ನರೇಂದ್ರ ಮೋದಿ, ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಸೇರಿದಂತೆ ಹಲವರ ಹೆಸರು ಹೇಳುವಂತೆ ತನಿಖಾಧಿಕಾರಿಗಳು ಒತ್ತಾಯಪಡಿಸಿದ್ದರು. ಆದರೆ ನಾನು ಯಾರ ಹೆಸರನ್ನೂ ಉಲ್ಲೇಖಿಸಿರಲಿಲ್ಲ. ಇದು ಸತ್ಯ ವಿಷಯವಾಗಿದ್ದು ಯಾವುದೇ ಕಾರಣಕ್ಕು ಸುಳ್ಳು ಹೇಳುತ್ತಿಲ್ಲ ಎಂದು ಪ್ರಜ್ಞಾ ಸಿಂಗ್ ಠಾಕೂರ್ ಹೇಳಿದ್ದಾರೆ.
ನಾನು ಈ ಎಲ್ಲ ವಿಚಾರವನ್ನು ಲಿಖಿತವಾಗಿ ದಾಖಲಿಸಿದ್ದೇನೆ. ನನಗೆ ಚಿತ್ರಹಿಂಸೆ ನೀಡುವುದೇ ಅವರ ಮೂಲ ಉದ್ದೇಶವಾಗಿತ್ತು. ಹೆಸರು ಹೇಳದಿದ್ದರೆ ಚಿತ್ರಹಿಂಸೆ ಮುಂದುವರಿಸುವುದಾಗಿ ಬೆದರಿಸುತ್ತಿದ್ದರು. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ, ಆರೆಸ್ಸೆಸ್ ನ ಸುದರ್ಶನ್, ಇಂದ್ರೇಶ್ ಹಾಗೂ ರಾಮಮಾಧವ್ ಸೇರಿದಂತೆ ಹೆಸರು ಹೇಳುವಂತೆ ಒತ್ತಾಯಿಸಿದ್ದರು.
ನನಗೆ ಪ್ರಜ್ಞೆ ತಪ್ಪಿ ಆಸ್ಪತ್ರೆಗೆ ದಾಖಲಾಗಿದ್ದರೂ ಬಂಧಿಸಿಡಲಾಗಿತ್ತು. ನಾನು ಹೇಳಿದ ಎಲ್ಲ ವಿಚಾರವನ್ನೂ ದಾಖಲಿಸಿದ್ದೇನೆ. ಈಗ ಸತ್ಯ ಹೊರಬಂದಿದ್ದು ಹಿಂದುತ್ವಕ್ಕೆ, ಸನಾತನ ರಾಷ್ಟ್ರಕ್ಕೆ ಸಿಕ್ಕ ಗೆಲುವಾಗಿದೆ ಎಂದು ಹೇಳಿದರು.
ಆದರೆ ಸಾಧ್ವಿ ಮಾಡಿರುವ ಆರೋಪವನ್ನು ಎನ್ಐಎ ಕೋರ್ಟ್ ನ್ಯಾಯಾಧೀಶ ಎ.ಕೆ. ಲಹೋಟಿ ಆದೇಶದಲ್ಲಿ ಉಲ್ಲೇಖ ಮಾಡಿಲ್ಲ. ಎನ್ಐಎ ತನಿಖಾ ತಂಡ ಈ ಬಗ್ಗೆ ಯಾವುದೇ ಸಾಕ್ಷ್ಯ ಉಲ್ಲೇಖಿಸಿಲ್ಲ ಎಂದು ಲಹೋಟಿ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.
Acquitted in the 2008 Malegaon blast case, former BJP MP Sadhvi Pragya said she was "forced to name" Prime Minister Narendra Modi and Uttar Pradesh Chief Minister Yogi Adityanath in the case. She claimed she was “tortured a lot” for not doing so.
18-02-26 06:03 pm
HK News Desk
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
ಕಾಪಿರೈಟ್ ಕದನದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ...
17-02-26 02:53 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
18-02-26 11:19 am
Mangaluru Staffer
Parameshwara in Mangalore: ಶಾಸಕರು ವಿದೇಶಕ್ಕೆ ತ...
17-02-26 12:42 pm
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
18-02-26 01:52 pm
Udupi Staffer
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm
ದಾವಣಗೆರೆ ಬೆನ್ನಲ್ಲೇ ಮಂಗಳೂರು ಕೋರ್ಟಿಗೂ ಬೆದರಿಕೆ ಸ...
16-02-26 04:01 pm
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm