ಬ್ರೇಕಿಂಗ್ ನ್ಯೂಸ್
03-08-25 04:25 pm HK News Desk ದೇಶ - ವಿದೇಶ
ಮುಂಬೈ, ಆ.3: ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ ಸೇರಿದಂತೆ ಹಲವರ ಹೆಸರನ್ನು ಹೇಳುವಂತೆ ತನಿಖಾಧಿಕಾರಿಗಳು ಒತ್ತಡ ಹೇರಿ ನನಗೆ ಚಿತ್ರಹಿಂಸೆ ನೀಡಿದ್ದರು ಎಂದು ಪ್ರಕರಣದಲ್ಲಿ ಖುಲಾಸೆಗೊಂಡಿರುವ ಮಾಜಿ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಹೇಳಿದ್ದಾರೆ.
ಮಾಲೆಗಾಂವ್ ಪ್ರಕರಣದಲ್ಲಿ ಎನ್ಐಎ ನ್ಯಾಯಾಲಯವು ತೀರ್ಪು ಪ್ರಕಟಿಸಿದ ಮರುದಿನ ಸಾಧ್ವಿ ತನಗಾದ ಕಿರುಕುಳದ ಬಗ್ಗೆ ಹೇಳಿಕೊಂಡಿದ್ದಾರೆ.
ಪ್ರಕರಣದ ತನಿಖೆಯ ಸಂದರ್ಭದಲ್ಲಿ ನನಗೆ ತೀವ್ರ ಚಿತ್ರಹಿಂಸೆ ನೀಡಲಾಗಿತ್ತು. ಗುಜರಾತಿನ ಸೂರತ್ ನಲ್ಲಿ ಉಳಿದಿದ್ದಾಗ ನರೇಂದ್ರ ಮೋದಿ, ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಸೇರಿದಂತೆ ಹಲವರ ಹೆಸರು ಹೇಳುವಂತೆ ತನಿಖಾಧಿಕಾರಿಗಳು ಒತ್ತಾಯಪಡಿಸಿದ್ದರು. ಆದರೆ ನಾನು ಯಾರ ಹೆಸರನ್ನೂ ಉಲ್ಲೇಖಿಸಿರಲಿಲ್ಲ. ಇದು ಸತ್ಯ ವಿಷಯವಾಗಿದ್ದು ಯಾವುದೇ ಕಾರಣಕ್ಕು ಸುಳ್ಳು ಹೇಳುತ್ತಿಲ್ಲ ಎಂದು ಪ್ರಜ್ಞಾ ಸಿಂಗ್ ಠಾಕೂರ್ ಹೇಳಿದ್ದಾರೆ.
ನಾನು ಈ ಎಲ್ಲ ವಿಚಾರವನ್ನು ಲಿಖಿತವಾಗಿ ದಾಖಲಿಸಿದ್ದೇನೆ. ನನಗೆ ಚಿತ್ರಹಿಂಸೆ ನೀಡುವುದೇ ಅವರ ಮೂಲ ಉದ್ದೇಶವಾಗಿತ್ತು. ಹೆಸರು ಹೇಳದಿದ್ದರೆ ಚಿತ್ರಹಿಂಸೆ ಮುಂದುವರಿಸುವುದಾಗಿ ಬೆದರಿಸುತ್ತಿದ್ದರು. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ, ಆರೆಸ್ಸೆಸ್ ನ ಸುದರ್ಶನ್, ಇಂದ್ರೇಶ್ ಹಾಗೂ ರಾಮಮಾಧವ್ ಸೇರಿದಂತೆ ಹೆಸರು ಹೇಳುವಂತೆ ಒತ್ತಾಯಿಸಿದ್ದರು.
ನನಗೆ ಪ್ರಜ್ಞೆ ತಪ್ಪಿ ಆಸ್ಪತ್ರೆಗೆ ದಾಖಲಾಗಿದ್ದರೂ ಬಂಧಿಸಿಡಲಾಗಿತ್ತು. ನಾನು ಹೇಳಿದ ಎಲ್ಲ ವಿಚಾರವನ್ನೂ ದಾಖಲಿಸಿದ್ದೇನೆ. ಈಗ ಸತ್ಯ ಹೊರಬಂದಿದ್ದು ಹಿಂದುತ್ವಕ್ಕೆ, ಸನಾತನ ರಾಷ್ಟ್ರಕ್ಕೆ ಸಿಕ್ಕ ಗೆಲುವಾಗಿದೆ ಎಂದು ಹೇಳಿದರು.
ಆದರೆ ಸಾಧ್ವಿ ಮಾಡಿರುವ ಆರೋಪವನ್ನು ಎನ್ಐಎ ಕೋರ್ಟ್ ನ್ಯಾಯಾಧೀಶ ಎ.ಕೆ. ಲಹೋಟಿ ಆದೇಶದಲ್ಲಿ ಉಲ್ಲೇಖ ಮಾಡಿಲ್ಲ. ಎನ್ಐಎ ತನಿಖಾ ತಂಡ ಈ ಬಗ್ಗೆ ಯಾವುದೇ ಸಾಕ್ಷ್ಯ ಉಲ್ಲೇಖಿಸಿಲ್ಲ ಎಂದು ಲಹೋಟಿ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.
Acquitted in the 2008 Malegaon blast case, former BJP MP Sadhvi Pragya said she was "forced to name" Prime Minister Narendra Modi and Uttar Pradesh Chief Minister Yogi Adityanath in the case. She claimed she was “tortured a lot” for not doing so.
18-10-25 09:11 pm
HK News Desk
ಎಂಟು ದಿನಗಳಿಂದ ಲವರ್ ಜೊತೆಗೆ ರೂಮ್ ಮಾಡಿದ್ದ ಪುತ್ತೂ...
18-10-25 08:50 pm
ಅಳಂದ ಮತಗಳವು ಪ್ರಕರಣ ; ಬಿಜೆಪಿ ಮಾಜಿ ಶಾಸಕ ಗುತ್ತೇದ...
17-10-25 08:39 pm
ಆರೆಸ್ಸೆಸ್ ಚಟುವಟಿಕೆ ಕಡಿವಾಣಕ್ಕೆ ಕೌಂಟರ್ ; ಸಾರ್ವಜ...
17-10-25 05:27 pm
ಸರ್ಕಾರಿ ಸ್ಥಳಗಳಲ್ಲಿ ಆರೆಸ್ಸೆಸ್ ಚಟುವಟಿಕೆಗೆ ಬ್ರೇಕ...
16-10-25 09:04 pm
18-10-25 07:34 pm
HK News Desk
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
18-10-25 11:01 pm
Mangalore Correspondent
Kantara Controversy, Mangalore: ದೈವದ ಹೆಸರಲ್ಲಿ...
18-10-25 07:26 pm
Ullal, Someshwara, Pillar: ಸೋಮೇಶ್ವರ ಪಿಲಾರಿನಲ್...
17-10-25 09:36 pm
1971ರ ಭಾರತ - ಪಾಕ್ ಯುದ್ಧದಲ್ಲಿ ಹೆಲಿಕಾಪ್ಟರ್ ನಿಂದ...
16-10-25 10:37 pm
ತಲೆಮರೆಸಿಕೊಂಡ ಆರೋಪಿಗಳ ಬೆನ್ನುಬಿದ್ದ ಮಂಗಳೂರು ಪೊಲೀ...
16-10-25 08:26 pm
19-10-25 01:26 pm
Bangalore Correspondent
MSME Fraud, SBI Malikatte, Mangalore': ಕೇಂದ್ರ...
18-10-25 10:49 pm
Auto Driver Assaulted, Traffic Police in Putt...
18-10-25 03:48 pm
Fake Gold Scam, Belthangady Anugraha Society:...
18-10-25 03:27 pm
Illegal Arms Case, Mahesh Shetty Timarodi: ಅಕ...
18-10-25 01:52 pm