ಬ್ರೇಕಿಂಗ್ ನ್ಯೂಸ್
05-08-25 10:58 pm HK News Desk ದೇಶ - ವಿದೇಶ
ನವದೆಹಲಿ, ಆ.5 : ಭಾರತ ರಷ್ಯಾದಿಂದ ಕಚ್ಚಾ ತೈಲ ಖರೀದಿಸುವುದನ್ನು ವಿರೋಧಿಸಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟೀಕಿಸಿ, ಅದೇ ನೆಪದಲ್ಲಿ ಸರಕು ಮೇಲೆ ಹೆಚ್ಚುವರಿ ಬಡ್ಡಿ ವಿಧಿಸುವ ವಿಚಾರಕ್ಕೆ ಭಾರತೀಯ ಸೇನೆ ತೀಕ್ಷ್ಣ ಪ್ರತಿಕ್ರಿಯೆ ನೀಡಿದೆ.
ಭಾರತೀಯ ಸೇನೆ ಮಂಗಳವಾರ ಆಗಸ್ಟ್ 1971ರ ಪತ್ರಿಕೆಯ ಸುದ್ದಿ ಕ್ಲಿಪ್ ಒಂದನ್ನು ಪೋಸ್ಟ್ ಮಾಡಿದ್ದು, "ಇದು 1954 ರಿಂದ ಪಾಕಿಸ್ತಾನವನ್ನು ಶಸ್ತ್ರಸಜ್ಜಿತಗೊಳಿಸುವಲ್ಲಿ ಅಮೆರಿಕ ವಹಿಸಿದ ಪಾತ್ರವನ್ನು ಎತ್ತಿ ತೋರಿಸುತ್ತದೆ" ಎಂದು ಹೇಳಿದೆ.
ಈ ಸುದ್ದಿ ಕ್ಲಿಪ್ ನ್ನು ಪೂರ್ವ ಕಮಾಂಡ್ ಪೋಸ್ಟ್ ಮಾಡಲಾಗಿದೆ. "1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯದ ಯುಎಸ್ ಶಸ್ತ್ರಾಸ್ತ್ರಗಳನ್ನು ರವಾನಿಸಲಾಗಿದೆ" ಎಂದು ಭಾರತೀಯ ಸೇನೆ ಹೇಳಿದೆ. ಬಾಂಗ್ಲಾದೇಶದ ರಚನೆಗೆ ಕಾರಣವಾದ 1971 ರ ಇಂಡೋ-ಪಾಕ್ ಯುದ್ಧಕ್ಕೆ ಕೆಲವು ತಿಂಗಳು ಮೊದಲು ಪ್ರಕಟವಾದ ಸುದ್ದಿ, ಹಿಂದಿನ ಎರಡು ದಶಕಗಳಲ್ಲಿ ಪಾಕಿಸ್ತಾನವನ್ನು ಶಸ್ತ್ರಸಜ್ಜಿತಗೊಳಿಸುವಲ್ಲಿ ಅಮೆರಿಕ ವಹಿಸಿದ ಪಾತ್ರದ ಬಗ್ಗೆ ಮಾತನಾಡುತ್ತದೆ. 1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯದ ಯುಎಸ್ ಶಸ್ತ್ರಾಸ್ತ್ರಗಳನ್ನು ರವಾನಿಸಲಾಗಿದೆ" ಎಂದು ಶೀರ್ಷಿಕೆ ಹೇಳುತ್ತದೆ. ಆ ಅವಧಿಗೆ ಸರಬರಾಜು ಮಾಡಲಾದ ಶಸ್ತ್ರಾಸ್ತ್ರಗಳ ಅಂದಾಜು ಮೌಲ್ಯಮಾಪನದ ಬಗ್ಗೆ ರಾಜ್ಯಸಭೆಗೆ ತಿಳಿಸಿದ್ದ ಆಗಿನ ರಕ್ಷಣಾ ಉತ್ಪಾದನಾ ಸಚಿವ ವಿ.ಸಿ ಶುಕ್ಲಾ ಅವರನ್ನು ವರದಿ ಉಲ್ಲೇಖಿಸಿದೆ.
"ರಷ್ಯಾದಿಂದ ತೈಲ ಖರೀದಿಸುವ ಮೂಲಕ ಭಾರತವು ಅವರ ಯುದ್ಧ ದಾಹಕ್ಕೆ ಹಣಕಾಸು ಒದಗಿಸುವುದನ್ನು ಮುಂದುವರಿಸುವುದು ಒಪ್ಪುವುದಿಲ್ಲ" ಎಂದು ಅಮೆರಿಕ ಹೇಳಿತ್ತು. ಇದರ ಬೆನ್ನಲ್ಲೇ ಪಾಕಿಸ್ತಾನಕ್ಕೆ ಸಹಾಯ ಮಾಡಿದ್ದನ್ನು ಉಲ್ಲೇಖಿಸಿ ಅಮೆರಿಕಾಗೆ ತಿವಿದಿದೆ.
In a sharp response to U.S. criticism over India’s continued import of crude oil from Russia, the Indian Army has highlighted America's long-standing military support to Pakistan, posting a historical newspaper clipping from August 1971.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm