ಬ್ರೇಕಿಂಗ್ ನ್ಯೂಸ್
05-08-25 10:58 pm HK News Desk ದೇಶ - ವಿದೇಶ
ನವದೆಹಲಿ, ಆ.5 : ಭಾರತ ರಷ್ಯಾದಿಂದ ಕಚ್ಚಾ ತೈಲ ಖರೀದಿಸುವುದನ್ನು ವಿರೋಧಿಸಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟೀಕಿಸಿ, ಅದೇ ನೆಪದಲ್ಲಿ ಸರಕು ಮೇಲೆ ಹೆಚ್ಚುವರಿ ಬಡ್ಡಿ ವಿಧಿಸುವ ವಿಚಾರಕ್ಕೆ ಭಾರತೀಯ ಸೇನೆ ತೀಕ್ಷ್ಣ ಪ್ರತಿಕ್ರಿಯೆ ನೀಡಿದೆ.
ಭಾರತೀಯ ಸೇನೆ ಮಂಗಳವಾರ ಆಗಸ್ಟ್ 1971ರ ಪತ್ರಿಕೆಯ ಸುದ್ದಿ ಕ್ಲಿಪ್ ಒಂದನ್ನು ಪೋಸ್ಟ್ ಮಾಡಿದ್ದು, "ಇದು 1954 ರಿಂದ ಪಾಕಿಸ್ತಾನವನ್ನು ಶಸ್ತ್ರಸಜ್ಜಿತಗೊಳಿಸುವಲ್ಲಿ ಅಮೆರಿಕ ವಹಿಸಿದ ಪಾತ್ರವನ್ನು ಎತ್ತಿ ತೋರಿಸುತ್ತದೆ" ಎಂದು ಹೇಳಿದೆ.
ಈ ಸುದ್ದಿ ಕ್ಲಿಪ್ ನ್ನು ಪೂರ್ವ ಕಮಾಂಡ್ ಪೋಸ್ಟ್ ಮಾಡಲಾಗಿದೆ. "1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯದ ಯುಎಸ್ ಶಸ್ತ್ರಾಸ್ತ್ರಗಳನ್ನು ರವಾನಿಸಲಾಗಿದೆ" ಎಂದು ಭಾರತೀಯ ಸೇನೆ ಹೇಳಿದೆ. ಬಾಂಗ್ಲಾದೇಶದ ರಚನೆಗೆ ಕಾರಣವಾದ 1971 ರ ಇಂಡೋ-ಪಾಕ್ ಯುದ್ಧಕ್ಕೆ ಕೆಲವು ತಿಂಗಳು ಮೊದಲು ಪ್ರಕಟವಾದ ಸುದ್ದಿ, ಹಿಂದಿನ ಎರಡು ದಶಕಗಳಲ್ಲಿ ಪಾಕಿಸ್ತಾನವನ್ನು ಶಸ್ತ್ರಸಜ್ಜಿತಗೊಳಿಸುವಲ್ಲಿ ಅಮೆರಿಕ ವಹಿಸಿದ ಪಾತ್ರದ ಬಗ್ಗೆ ಮಾತನಾಡುತ್ತದೆ. 1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯದ ಯುಎಸ್ ಶಸ್ತ್ರಾಸ್ತ್ರಗಳನ್ನು ರವಾನಿಸಲಾಗಿದೆ" ಎಂದು ಶೀರ್ಷಿಕೆ ಹೇಳುತ್ತದೆ. ಆ ಅವಧಿಗೆ ಸರಬರಾಜು ಮಾಡಲಾದ ಶಸ್ತ್ರಾಸ್ತ್ರಗಳ ಅಂದಾಜು ಮೌಲ್ಯಮಾಪನದ ಬಗ್ಗೆ ರಾಜ್ಯಸಭೆಗೆ ತಿಳಿಸಿದ್ದ ಆಗಿನ ರಕ್ಷಣಾ ಉತ್ಪಾದನಾ ಸಚಿವ ವಿ.ಸಿ ಶುಕ್ಲಾ ಅವರನ್ನು ವರದಿ ಉಲ್ಲೇಖಿಸಿದೆ.
"ರಷ್ಯಾದಿಂದ ತೈಲ ಖರೀದಿಸುವ ಮೂಲಕ ಭಾರತವು ಅವರ ಯುದ್ಧ ದಾಹಕ್ಕೆ ಹಣಕಾಸು ಒದಗಿಸುವುದನ್ನು ಮುಂದುವರಿಸುವುದು ಒಪ್ಪುವುದಿಲ್ಲ" ಎಂದು ಅಮೆರಿಕ ಹೇಳಿತ್ತು. ಇದರ ಬೆನ್ನಲ್ಲೇ ಪಾಕಿಸ್ತಾನಕ್ಕೆ ಸಹಾಯ ಮಾಡಿದ್ದನ್ನು ಉಲ್ಲೇಖಿಸಿ ಅಮೆರಿಕಾಗೆ ತಿವಿದಿದೆ.
In a sharp response to U.S. criticism over India’s continued import of crude oil from Russia, the Indian Army has highlighted America's long-standing military support to Pakistan, posting a historical newspaper clipping from August 1971.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am