ಬ್ರೇಕಿಂಗ್ ನ್ಯೂಸ್
07-08-25 10:02 pm HK News Desk ದೇಶ - ವಿದೇಶ
ಇಂದೋರ್, ಆ.7 : ಮಧ್ಯಪ್ರದೇಶದ ಜಬಲ್ಪುರ ಜಿಲ್ಲೆಯ ಸಿಹೋರಾ ತಹಸಿಲ್ ಎಂಬಲ್ಲಿ ಅಪಾರ ಪ್ರಮಾಣದ ಚಿನ್ನದ ನಿಕ್ಷೇಪಗಳನ್ನು ಭೂವಿಜ್ಞಾನಿಗಳು ಪತ್ತೆ ಹಚ್ಚಿದ್ದಾರೆ. ಮಹಾಂಗ್ವಾ ಕೆವಾಲ್ರಿ ಎನ್ನುವ ಗ್ರಾಮದಲ್ಲಿಹಲವು ವರ್ಷಗಳ ಕಾಲ ನಡೆಸಿದ ಭೂವೈಜ್ಞಾನಿಕ ಸಮೀಕ್ಷೆಗಳ ನಂತರ ಇಲ್ಲಿ ಅಪಾರ ಚಿನ್ನದ ನಿಕ್ಷೇಪ ಇರುವುದನ್ನು ವಿಜ್ಞಾನಿಗಳು ತಿಳಿಸಿದ್ದಾರೆ.
ಪ್ರಾಥಮಿಕ ವರದಿಗಳ ಪ್ರಕಾರ, ಈ ಭಾಗದಲ್ಲಿ ಚಿನ್ನದ ನಿಕ್ಷೇಪಗಳು ಸುಮಾರು 100 ಹೆಕ್ಟೇರ್ ಪ್ರದೇಶದಲ್ಲಿ ಹರಡಿಕೊಂಡಿವೆ ಮತ್ತು ಇದರ ಪ್ರಮಾಣವು ಲಕ್ಷ ಟನ್ಗಳಷ್ಟು ಇರಬಹುದು ಎಂದು ಅಂದಾಜಿಸಿದ್ದಾರೆ. ಈ ಪ್ರದೇಶದಿಂದ ತೆರೆಯಲ್ಪಟ್ಟ ಮಣ್ಣಿನ ಮಾದರಿಗಳನ್ನು ರಾಸಾಯನಿಕ ವಿಶ್ಲೇಷಣೆಗೆ ಒಳಪಡಿಸಿದ ಬಳಿಕ ಚಿನ್ನದ ಕುರುಹುಗಳನ್ನು ಪತ್ತೆ ಮಾಡಲಾಗಿದೆ. ಇದಲ್ಲದೆ, ಈ ಜಾಗದಲ್ಲಿ ತಾಮ್ರ ಮತ್ತು ಇತರ ಅಮೂಲ್ಯ ಲೋಹಗಳನ್ನೂ ಪತ್ತೆ ಮಾಡಲಾಗಿದೆ.
ಜಬಲ್ಪುರವು ಈಗಾಗಲೇ ಕಬ್ಬಿಣ, ಮ್ಯಾಂಗನೀಸ್, ಸುಣ್ಣದ ಕಲ್ಲು ಮತ್ತು ಸಿಲಿಕಾ ಮರಳಿನಿಂದಾಗಿ ಖ್ಯಾತಿ ಹೊಂದಿದೆ. ಈಗಾಗಲೇ ವಿವಿಧ ಮಾದರಿಯ ಈ ಭಾಗದಲ್ಲಿ 42 ಗಣಿಗಳಿದ್ದು ಹೊಸತಾಗಿ ಚಿನ್ನದ ಗಣಿಯೂ ಸೇರಿಕೊಳ್ಳುವ ಸಾಧ್ಯತೆಯಿದೆ. ಪಕ್ಕದ ಕತ್ನಿ ಜಿಲ್ಲೆಯಲ್ಲು ವರ್ಷಗಳ ಹಿಂದೆ ಚಿನ್ನದ ನಿಕ್ಷೇಪ ಇದೆಯೆಂದು ಸುದ್ದಿಯಾಗಿತ್ತು. ಆದರೆ ಅದನ್ನು ಹೊರ ತೆಗೆಯಲು ಯಾವುದೇ ಕಂಪನಿ ಮುಂದೆ ಬಂದಿರಲಿಲ್ಲ. ಇದೀಗ ಜಬಲ್ಪುರದಲ್ಲಿಯೂ ಚಿನ್ನದ ನಿಕ್ಷೇಪ ಇದೆಯೆಂಬ ಸುದ್ದಿ ಬಂದಿರುವುದರಿಂದ ದೇಶದ ಗಮನ ಸೆಳೆದಿದೆ. ಸದ್ಯಕ್ಕೆ ಚಿನ್ನದ ನಿಕ್ಷೇಪ ಇದೆ ಎನ್ನಲಾದ ಪ್ರದೇಶದಲ್ಲಿ ಆಳ, ಅಗಲದ ಬಗ್ಗೆ ಮತ್ತು ಆರ್ಥಿಕ ಬೇಡಿಕೆ ವಿಚಾರದಲ್ಲಿ ಇನ್ನಷ್ಟು ಅಧ್ಯಯನ ಅಗತ್ಯ ಇದೆಯೆಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ.
In a significant geological discovery, massive gold reserves have reportedly been found in the Sihora tehsil of Jabalpur district in Madhya Pradesh. After years of geological surveys in the Mahangwa Cavalry region, experts have now confirmed the presence of substantial gold deposits in the area.
20-10-25 06:58 pm
Bangalore Correspondent
Hassan Accident, Two Killed: ಹಾಸನಾಂಬ ದರ್ಶನ ಪಡ...
20-10-25 04:00 pm
ಕಲಬುರಗಿಯಲ್ಲಿ ಭೂಕಂಪನ ; ಮನೆಯಿಂದ ಹೊರಬಂದ ಜನರು, ನಿ...
20-10-25 02:56 pm
ಸೇಡಂನಲ್ಲಿ ಆರೆಸ್ಸೆಸ್ ಪಥಸಂಚಲನ ; ನೂರಾರು ಕಾರ್ಯಕರ್...
19-10-25 07:00 pm
Government Bans RSS: ಸರ್ಕಾರಿ ಶಾಲೆ, ಕಾಲೇಜು ಆವರ...
19-10-25 05:42 pm
20-10-25 08:34 pm
HK News Desk
300 Naxals, PM Narendra Modi: 75 ಗಂಟೆಯಲ್ಲಿ 30...
18-10-25 07:34 pm
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
20-10-25 10:28 pm
Mangalore Correspondent
Ashoka Janamana in Puttur, CM Siddaramaiah: ಪ...
20-10-25 07:25 pm
ಉಳ್ಳಾಲ ಟೀಮ್ ಹನುಮಾನ್ ತಂಡದಿಂದ ನವರಾತ್ರಿ ಯಕ್ಷವೇಷ...
19-10-25 10:32 pm
Karkala Abhishek Suicide Case, Arrest: ಅಭಿಷೇಕ...
19-10-25 07:58 pm
Bindu Jewellery Mangalore: ಮಂಗಳೂರಿನಲ್ಲಿ 'ಬಿಂದ...
19-10-25 07:19 pm
20-10-25 10:51 pm
Mangalore Correspondent
Rape Ullal, Mangalore Crime: ಅಪ್ರಾಪ್ತ ಬಾಲಕಿ ಮ...
20-10-25 12:25 pm
ಚಿನ್ನದಂಗಡಿಗೆ ತೆರಳಿ ಬಣ್ಣನೆಯ ಮಾತುಗಳಿಂದ ಮರುಳು ;...
19-10-25 11:09 pm
Bangalore engineering College rape, Crime: ಬೆ...
19-10-25 01:26 pm
MSME Fraud, SBI Malikatte, Mangalore': ಕೇಂದ್ರ...
18-10-25 10:49 pm