ಬ್ರೇಕಿಂಗ್ ನ್ಯೂಸ್
09-08-25 11:09 pm HK News Desk ದೇಶ - ವಿದೇಶ
ನವದೆಹಲಿ, ಆ.9 : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದ ವಿರುದ್ಧ 50 ಪರ್ಸೆಂಟ್ ಸುಂಕ ವಿಧಿಸಿರುವುದಕ್ಕೆ ಟ್ರಂಪ್ ಅವರ ಒಂದು ಕಾಲದ ಗೆಳೆಯ ಹಾಗೂ ಅಮೆರಿಕದ ಮಾಜಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಜಾನ್ ಬಾಲ್ಟನ್ ಟೀಕಿಸಿದ್ದಾರೆ. ಭಾರತದ ವಿರುದ್ಧ ದುಬಾರಿ ತೆರಿಗೆ ವಿಧಿಸಿದ್ದು ತಪ್ಪು ನಡೆಯಾಗಿದ್ದು ಇದರಿಂದ ಭಾರತವು ರಷ್ಯಾ, ಚೀನಾದ ಜೊತೆ ಹತ್ತಿರವಾಗಲು ದಾರಿ ಮಾಡಿ ಕೊಟ್ಟಂತಾಗಿದೆ ಎಂದು ಹೇಳಿದ್ದಾರೆ.
ಟ್ರಂಪ್ ಅವರ ಈ ನಡೆಯಿಂದಾಗಿ ಅಮೆರಿಕಕ್ಕೇ ನಷ್ಟವಾಗಲಿದೆ. ಟ್ರಂಪ್ ಸುಂಕ ನೀತಿಗೆ ಭಾರತವು ತುಂಬ ನೆಗೆಟಿವ್ ಆಗಿಯೇ ಪ್ರತಿಕ್ರಿಯೆ ನೀಡಿದೆ. ಚೀನಾದ ಮೇಲೂ ಇದೇ ರೀತಿಯ ತೆರಿಗೆ ವಿಧಿಸಿ ಅದು ಯಾವ ರೀತಿ ತೋರಿತ್ತೋ ಅದೇ ಹಾದಿಯಲ್ಲಿ ಭಾರತವೂ ವರ್ತನೆ ತೋರಿದೆ. 25 ಶೇಕಡಾ ತೆರಿಗೆ ವಿಧಿಸಿದ ಮೇಲೆ ಮತ್ತೆ ದಂಡದ ರೂಪದಲ್ಲಿ 25 ಶೇಕಡಾ ಸುಂಕ ವಿಧಿಸಿದ್ದು ರಷ್ಯಾವನ್ನೂ ಭಾರತಕ್ಕೆ ಹತ್ತಿರವಾಗುವಂತೆ ಮಾಡಿದೆ. ರಷ್ಯಾ, ಚೀನಾದಿಂದ ಭಾರತವನ್ನು ದೂರ ಇಡುವಂತೆ ಹತ್ತು ವರ್ಷಗಳಿಂದ ಅಮೆರಿಕ ಮಾಡಿದ್ದ ಪ್ರಯತ್ನಕ್ಕೆ ಟ್ರಂಪ್ ಅವರು ಎಳ್ಳುನೀರು ಬಿಟ್ಟಿದ್ದಾರೆ ಎಂದು ಬಾಲ್ಟನ್ ಟೀಕಿಸಿದ್ದಾರೆ.
ಯುಎಸ್ ವಿದೇಶಾಂಗ ನೀತಿಯ ಎಕ್ಸ್ ಪರ್ಟ್ ಕ್ರಿಸ್ಟೋಫರ್ ಪಾಡಿಲ್ಲಾ ಅವರೂ ಟ್ರಂಪ್ ನಡೆಯನ್ನು ಟೀಕಿಸಿದ್ದು, ಈ ರೀತಿಯ ನಡೆ ಭಾರತ- ಅಮೆರಿಕದ ನಡುವಿನ ಸಂಬಂಧಕ್ಕೆ ದೀರ್ಘ ಕಾಲದ ಅಪಾಯ ತರಲಿದೆ. ಇದರಿಂದ ಅಮೆರಿಕ ನಂಬಿಕೆಗೆ ಅರ್ಹವಾದ ರಾಷ್ಟ್ರವೇ ಅನ್ನುವ ಪ್ರಶ್ನೆ ಏಳುವಂತೆ ಮಾಡುತ್ತದೆ. ತೆರಿಗೆ ಪ್ರಹಾರದ ಯಾವತ್ತಿಗೂ ಕೆಟ್ಟ ನೆನಪಾಗಿ ಉಳಿಯುತ್ತದೆ ಎಂದಿದ್ದಾರೆ.
ಇದಲ್ಲದೆ, ಅಮೆರಿಕದ ಅರ್ಥಶಾಸ್ತ್ರಜ್ಞ ಮತ್ತು ಜಾನ್ ಹಾಪ್ಕಿನ್ಸ್ ಯುನಿವರ್ಸಿಟಿ ಪ್ರೊಫೆಸರ್ ಆಗಿರುವ ಸ್ಟೀವ್ ಹಾಂಕೆ ಅವರು ಟ್ರಂಪ್ ನಡೆಯನ್ನು ತೀವ್ರ ಟೀಕೆ ಮಾಡಿದ್ದು, ಟ್ರಂಪ್ ಅವರು ತಮ್ಮ ಸ್ವಂತಿಕೆಯನ್ನೇ ಹಾಳು ಗೆಡವುತ್ತಿದ್ದಾರೆ. ಅತಿರೇಕಕದ ತೆರಿಗೆ ವಿಧಿಸಿರುವುದು ಮೂರ್ಖತನದ ನಿರ್ಧಾರ ಎಂದು ಹೇಳಿದ್ದಾರೆ.
Former US National Security Advisor John Bolton, once a close ally of Donald Trump, has sharply criticized the US President’s decision to impose a 50% tariff on India. Calling the move a strategic blunder, Bolton said the excessive tariff would push India closer to Russia and China — undoing years of US diplomatic efforts.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm