ಬ್ರೇಕಿಂಗ್ ನ್ಯೂಸ್
11-08-25 08:55 pm HK News Desk ದೇಶ - ವಿದೇಶ
ಎರ್ನಾಕುಲಂ, ಆ.11 : ಕ್ರಿಶ್ಚಿಯನ್ ಯುವತಿಯನ್ನು ಮದುವೆಯಾಗುತ್ತೇನೆಂದು ನಂಬಿಸಿ ಮುಸ್ಲಿಂ ಯುವಕನೊಬ್ಬ ಇಸ್ಲಾಮಿಗೆ ಮತಾಂತರಿಸಲು ಯತ್ನಿಸಿದ ಘಟನೆ ಕೇರಳದ ಎರ್ನಾಕುಲಂ ಜಿಲ್ಲೆಯಲ್ಲಿ ನಡೆದಿದ್ದು ಇದರಿಂದ ನೊಂದ ಯುವತಿ ಡೆತ್ ನೋಟ್ ಬರೆದಿಟ್ಟು ಸಾವಿಗೆ ಶರಣಾಗಿದ್ದಾಳೆ. ಪೊಲೀಸರು ಆರೋಪಿ ಯುವಕನನ್ನು ಬಂಧಿಸಿದ್ದಾರೆ.
ಎರ್ನಾಕುಲಂ ಜಿಲ್ಲೆಯ ಕೊತ್ತಮಂಗಲಂ ಎಂಬಲ್ಲಿ ಘಟನೆ ನಡೆದಿದ್ದು ಟೀಚರ್ ಟ್ರೈನಿಂಗ್ ಕೋರ್ಸ್ ಮಾಡುತ್ತಿದ್ದ 23 ವರ್ಷದ ಸೋನಾ ಎಲ್ಡೋಸ್ ಸಾವನ್ನಪ್ಪಿದ ದುರ್ದೈವಿ. ಆರೋಪಿ ರಮೀಜ್ ಮೊಹಮ್ಮದ್ ಎನ್ನುವ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.
ಸೋನಾ ಬರೆದಿಟ್ಟ ಪತ್ರದ ಪ್ರಕಾರ, ಆಕೆಯನ್ನು ಮದುವೆಯಾಗಲೆಂದು ರಮೀಜ್ ತನ್ನ ಮನೆಗೆ ಕರೆದೊಯ್ದಿದ್ದ. ಆದರೆ ಮನೆಯವರು ಮದುವೆಗೂ ಮುನ್ನ ಇಸ್ಲಾಮಿಗೆ ಮತಾಂತರ ಆಗಬೇಕೆಂದು ಹೇಳಿದ್ದಾರೆ. ಮದುವೆಯಾಗುತ್ತೇನೆಂದು ಹೇಳಿ ದೈಹಿಕ ಸಂಬಂಧ ಹೊಂದಿದ್ದ ಯುವಕ ಮತಾಂತರ ಆಗುವಂತೆ ಒತ್ತಡ ಹೇರಿದ್ದಾನೆ. ಇದರಿಂದ ನೊಂದ ಯುವತಿ ತನ್ನ ಸಾವಿನ ಕಾರಣ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸೋನಾ ಮತ್ತು ರಮೀಜ್ ಪದವಿ ಓದುತ್ತಿದ್ದಾಗ ಕ್ಲಾಸ್ ಮೇಟ್ಸ್ ಆಗಿದ್ದು ಆಗಲೇ ಪ್ರೀತಿಸತೊಡಗಿದ್ದರು. ಆನಂತರ ಮದುವೆಯಾಗಲು ನಿರ್ಧರಿಸಿದ್ದು ಆಕೆಯ ಕುಟುಂಬದವರೂ ಒಪ್ಪಿದ್ದರು. ಆದರೆ ಮದುವೆಯಾಗಿ ಆತನ ಮನೆಗೆ ಹೋಗಲು ಸೋನಾ ನಿರಾಕರಿಸಿದ್ದಳು. ರಮೀಜ್ ಮತಾಂತರ ಆಗಿ ತನ್ನ ಮನೆಗೆ ಬರುವಂತೆ ಒತ್ತಡ ಹೇರಿದ್ದ.
ಇದರ ನಡುವೆ, ಸೋನಾ ಆಗಸ್ಟ್ 9ರಂದು ತನ್ನ ಮನೆಯಲ್ಲಿ ಸಾವಿಗೆ ಶರಣಾಗಿದ್ದಾಳೆ. ಅದಕ್ಕೂ ಮುನ್ನ ತನ್ನನ್ನು ಯುವಕ ಮಿಸ್ ಯೂಸ್ ಮಾಡಿದ ಬಗ್ಗೆ ಮತ್ತು ಮತಾಂತರಕ್ಕೆ ಯತ್ನಿಸುತ್ತಿರುವ ಬಗ್ಗೆ ಪತ್ರ ಬರೆದಿದ್ದಳು. ಇದರಂತೆ ಪೊಲೀಸರು ಆತ್ಮಹತ್ಯೆಗೆ ಪ್ರಚೋದನೆ ಮತ್ತು ಮದುವೆಯಾಗುತ್ತೇನೆಂದು ನಂಬಿಸಿ ದೈಹಿಕ ಸಂಬಂಧ ಬೆಳೆಸಿ ಮೋಸ ಮಾಡಿದ ಬಗ್ಗೆ ಪ್ರಕರಣ ದಾಖಲಿಸಿದ್ದಾರೆ. ಎರಡು ತಿಂಗಳ ಹಿಂದೆ ರಮೀಸ್ ತನ್ನ ಕುಟುಂಬ ಸದಸ್ಯರೊಂದಿಗೆ ಸೋನಾ ಮನೆಗೆ ಬಂದು ಮದುವೆ ಬಗ್ಗೆ ಚರ್ಚಿಸಿದ್ದರು. ಮತಾಂತರ ಆಗಿಯೇ ಮದುವೆ ಆಗುವಂತೆ ಹೇಳಿದ್ದು ಅದಕ್ಕೆ ಸೋನಾ ಮನೆಯವರೂ ಒಪ್ಪಿದ್ದರು. ಆದರೆ ಇದರ ನಡುವೆ ರಮೀಸ್ ಬೇರೊಬ್ಬಳು ಯುವತಿ ಜೊತೆಗಿರುವುದನ್ನು ನೋಡಿದ ಸೋನಾ ತಾನು ಇಸ್ಲಾಮಿಗೆ ಮತಾಂತರ ಆಗಲ್ಲ ಎಂದು ಹಠ ಹಿಡಿದಿದ್ದಳು. ಇದಕ್ಕಾಗಿ ಸೋನಾಳನ್ನು ಕರೆದು ರಮೀಸ್ ಹಲ್ಲೆ ಮಾಡಿ ಕಿರುಕುಳ ಕೊಟ್ಟಿದ್ದ. ಇದರ ಬಗ್ಗೆ ಮನೆಯಲ್ಲಿ ಸೋನಾ ಮೊದಲು ಹೇಳಿರಲಿಲ್ಲ. ಸಾವಿನ ಸಂದರ್ಭದಲ್ಲಿ ತನ್ನ ನೋವು ಹೇಳಿ ಅತ್ತಿದ್ದಾಳೆ ಎಂದು ಆಕೆಯ ಸೋದರ ಬಾಸಿಲ್ ಮಾಧ್ಯಮಕ್ಕೆ ತಿಳಿಸಿದ್ದಾರೆ.
ಬಿಜೆಪಿ ನಾಯಕರು ಈ ಘಟನೆಯನ್ನು ಲವ್ ಜಿಹಾದ್ ಎಂದು ಕರೆದಿದ್ದು ಕಾಂಗ್ರೆಸ್ ಮತ್ತು ಸಿಪಿಎಂ ಪಕ್ಷಗಳ ತುಷ್ಟೀಕರಣ ನೀತಿಯಿಂದಾಗಿ ಕೇರಳ ಧಾರ್ಮಿಕ ಉಗ್ರವಾದದಿಂದ ನಲುಗುತ್ತಿದೆ. ಹಿಂದು ಮತ್ತು ಕ್ರಿಶ್ಚಿಯನ್ ಯುವತಿಯರನ್ನು ಟಾರ್ಗೆಟ್ ಮಾಡಿ ಇಸ್ಲಾಮಿಗೆ ಮತಾಂತರ ಮಾಡಲಾಗುತ್ತಿದೆ. ಲವ್ ಜಿಹಾದ್ ಇಲ್ಲ ಎನ್ನುವ ಕೇರಳ ಸರ್ಕಾರದ ನಾಯಕರು ಯುವತಿ ಸಾವಿನ ಬಗ್ಗೆ ಸ್ಪಷ್ಟನೆ ನೀಡಬೇಕೆಂದು ಆಗ್ರಹಿಸಿದ್ದಾರೆ.
A 23-year-old Christian woman in Kerala’s Ernakulam district died by suicide after allegedly being deceived with a promise of marriage and pressured to convert to Islam. Police have arrested the accused, identified as Rameez Mohammed.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm