ಬ್ರೇಕಿಂಗ್ ನ್ಯೂಸ್
13-08-25 10:41 am HK News Desk ದೇಶ - ವಿದೇಶ
ಜೈಪುರ, ಆ.13 : ರಾಜಸ್ಥಾನದಲ್ಲಿ ಬುಧವಾರ ನಸುಕಿನ ವೇಳೆ ಸಂಭವಿಸಿದ ರಣಭೀಕರ ರಸ್ತೆ ಅಪಘಾತವೊಂದರಲ್ಲಿ ಏಳು ಮಕ್ಕಳು, ಮೂವರು ಮಹಿಳೆಯರು ಸೇರಿ ಒಟ್ಟು 10 ಮಂದಿ ದುರ್ಮರಣಕ್ಕೀಡಾಗಿದ್ದು, 9 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಯಾತ್ರಾರ್ಥಿಗಳಿದ್ದ ಪಿಕ್ ಅಪ್ ವ್ಯಾನ್ ರಸ್ತೆ ಬದಿ ನಿಂತಿದ್ದ ಟ್ರಕ್ ಗೆ ಬಡಿದು ಅಪಘಾತ ಉಂಟಾಗಿದೆ. ರಾಜಸ್ಥಾನದ ದೌಸಾ ಎಂಬಲ್ಲಿಯ ಮನೋಹರ್ ಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಳಗ್ಗೆ 4 ಗಂಟೆ ಹೊತ್ತಿಗೆ ಈ ದುರ್ಘಟನೆ ಸಂಭವಿಸಿದೆ. ಉತ್ತರ ಪ್ರದೇಶದ ಇಟಾಹ್ ಜಿಲ್ಲೆಯ ಯಾತ್ರಿಗಳು ರಾಜಸ್ಥಾನದ ಪ್ರಸಿದ್ಧ ಪುಣ್ಯಕ್ಷೇತ್ರ ಸಾಲ್ಸರ್ ಬಾಲಾಜಿ ದೇವಸ್ಥಾನಕ್ಕೆ ತೆರಳಿ ವಾಪಸಾಗುತ್ತಿದ್ದ ವೇಳೆ ಅಪಘಾತ ಸಂಭವಿಸಿದ್ದು, ಎರಡು ಪಿಕ್ ಅಪ್ ಗಳಲ್ಲಿ ಯಾತ್ರಿಗಳಿದ್ದರು. ಒಂದು ಪಿಕ್ ಅಪ್ ಮುಂದೆ ಹೋಗಿದ್ದು, ಮತ್ತೊಂದು ಪಿಕ್ ಅಪ್ ಅಪಘಾತಕ್ಕೀಡಾಗಿದೆ. 9 ಮಂದಿ ಗಂಭೀರ ಗಾಯಗೊಂಡಿದ್ದು ಅವರನ್ನು ಜೈಪುರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪೈಕಿ ಕೆಲವರ ಸ್ಥಿತಿ ಚಿಂತಾಜನಕವಾಗಿದೆ.

ರಸ್ತೆ ಅಪಘಾತದ ಬಗ್ಗೆ ರಾಜಸ್ಥಾನ ಮುಖ್ಯಮಂತ್ರಿ ಭಜನ್ ಲಾಲ್ ಶರ್ಮ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
In a horrific road accident in Rajasthan early Wednesday morning, ten people — including seven children and three women — lost their lives, while nine others sustained serious injuries.
12-12-25 08:47 pm
Bangalore Correspondent
Yatnal, Dk Shivakumar, Vijayendra: ಡಿಕೆ ಸಿಎಂ,...
12-12-25 07:47 pm
ಅಧಿವೇಶನ ಮುಗಿದ ತಕ್ಷಣವೇ ಡಿಕೆಶಿ ಮುಖ್ಯಮಂತ್ರಿಯಾಗುತ...
12-12-25 03:18 pm
ಅಧಿವೇಶನ ಮಧ್ಯೆಯೂ ಡಿಕೆಶಿ ಆಪ್ತ ಶಾಸಕರು, ಸಚಿವರ ಡಿನ...
12-12-25 03:15 pm
ನಾಯಕತ್ವ ಗೊಂದಲ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಮಾತ...
12-12-25 01:36 pm
12-12-25 11:00 pm
HK News Desk
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
ಶಾಲೆಗಳಲ್ಲಿ ವಂದೇ ಮಾತರಂ ಹಾಡುವುದು ಕಡ್ಡಾಯಗೊಳಿಸಿ ;...
10-12-25 10:54 pm
12-12-25 10:28 pm
Mangalore Correspondent
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ; ಅಧಿಕ...
12-12-25 02:02 pm
Mangalore Jail Inmate, Death: ಎದೆನೋವು ; ಉಡುಪಿ...
11-12-25 10:55 pm
ದೈವದ ಚಾಕರಿ ಮಾಡುವವರಿಗೆ ಮಾಸಾಶನ, ಸರ್ಕಾರಿ ಸವಲತ್ತು...
11-12-25 04:21 pm
12-12-25 01:58 pm
Mangalore Correspondent
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm
ಪುತ್ತೂರಿನಲ್ಲಿ ನಿಲ್ಲಿಸಿದ್ದ ಲಾರಿಯಿಂದ 21 ಲಕ್ಷ ಮೌ...
09-12-25 04:33 pm