ಬ್ರೇಕಿಂಗ್ ನ್ಯೂಸ್
13-08-25 11:56 am HK News Desk ದೇಶ - ವಿದೇಶ
ಚೆನ್ನೈ, ಆಗಸ್ಟ್ 13 : ಸರ್ಕಾರಿ ವಸತಿ ಗೃಹದಲ್ಲಿ ಆಶ್ರಯ ಪಡೆಯುವಂತೆ ಬಾಲಕಿಗೆ ಆದೇಶ ಹೊರಡಿಸಿದ ಮದ್ರಾಸ್ ಹೈಕೋರ್ಟ್ ತೀರ್ಪು ಕೇಳಿದ ಹದಿಹರೆಯದ ಬಾಲಕಿಯೋರ್ವಳು ಕೋರ್ಟಿನ ಮೊದಲನೇ ಮಹಡಿಯಿಂದ ಧುಮುಕಿದ ನಾಟಕೀಯ ಘಟನೆ ಮಂಗಳವಾರ ಚೆನ್ನೈನಲ್ಲಿ ನಡೆದಿದೆ. ಗಾಯಾಳು 15ರ ಹರೆಯದ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಾಲಕಿಯ ಹೆತ್ತವರು ವಿಚ್ಚೇದಿತರಾಗಿದ್ದು ಮಗಳು ನಾಪತ್ತೆಯಾಗಿದ್ದಾಳೆ ಎಂದು ಆಕೆಯ ತಂದೆ ಹೆಬಿಯಸ್ ಕಾರ್ಪಸ್ ಅರ್ಜಿ ದಾಖಲಿಸಿದ್ದರು. ಕೇಸು ಜಾಡು ಹಿಡಿದು ಹೊರಟ ಪೊಲೀಸರು ಬಾಲಕಿಯನ್ನು ಆಕೆಯ ಅಜ್ಜಿ ಮನೆಯಲ್ಲಿ ಪತ್ತೆ ಮಾಡಿ ಕೋರ್ಟ್ ಗೆ ಹಾಜರುಪಡಿಸಿದ್ದರು. ಕೋರ್ಟ್ ವಿಚಾರಣೆಯಲ್ಲಿ ಆಕೆ ತಾನು ತಾಯಿಯ ಜೊತೆ ಅಂಡಮಾನ್ ನಲ್ಲಿ ವಾಸಿಸುವುದಾಗಿ ಅಚ್ಚರಿಯ ಹೇಳಿಕೆ ನೀಡಿದ್ದಳು. ಬಳಿಕ ನ್ಯಾಯಮೂರ್ತಿಗಳಾದ ಎಂ.ಎಸ್ ರಮೇಶ್ ಮತ್ತು ವಿ. ಲಕ್ಷ್ಮೀನಾರಾಯಣನ್ ಅವರಿದ್ದ ಪೀಠ, ಬಾಲಕಿ ಹಾಗೂ ಕೌನ್ಸಿಲರ್ ಒಬ್ಬರ ಜೊತೆ ಅಭಿಪ್ರಾಯ ಪಡೆದು, ಅಂಡಮಾನ್ ವಾತಾವರಣ ಬಾಲಕಿಯ ವಾಸ್ತವ್ಯಕ್ಕೆ ಪೂರಕವಾಗಿಲ್ಲ ಎಂದು ಪ್ರಕಟಿಸಿ, ಸರ್ಕಾರಿ ವಸತಿ ಗೃಹದಲ್ಲಿರುವಂತೆ ಬಾಲಕಿಗೆ ನಿರ್ದೇಶನ ನೀಡಿತ್ತು. ಜೊತೆಗೆ ಬಾಲಕಿಗೆ ಮನೋವೈಜ್ಞಾನಿಕ ಚಿಕಿತ್ಸೆ ನೀಡುವಂತೆ ಆದೇಶಿಸಿ ಆಗಸ್ಟ್ 26ಕ್ಕೆ ಮುಂದಿನ ವಿಚಾರಣೆಗೆ ದಿನಾಂಕ ನಿಗದಿಪಡಿಸಿತು.


ಆದರೆ ಕೋರ್ಟ್ ಆದೇಶ ಕೇಳಿದ ಬಾಲಕಿ ಕೋರ್ಟ್ ನ ಮೊದಲ ಮಹಡಿಯಿಂದ ಕೆಳಗೆ ಧುಮುಕಿದ್ದಾಳೆ. ತಕ್ಷಣ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಾಯದಿಂದ ಪಾರಾಗಿದ್ದಾಳೆ ಎನ್ನುವ ಮಾಹಿತಿ ಇದೆ.
In a dramatic incident at the Madras High Court on Tuesday, a 15-year-old girl jumped from the first floor of the court premises after being denied permission to stay with her mother in the Andaman Islands. She was immediately rushed to the hospital and is reported to be out of danger.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm