ಬ್ರೇಕಿಂಗ್ ನ್ಯೂಸ್
13-08-25 11:56 am HK News Desk ದೇಶ - ವಿದೇಶ
ಚೆನ್ನೈ, ಆಗಸ್ಟ್ 13 : ಸರ್ಕಾರಿ ವಸತಿ ಗೃಹದಲ್ಲಿ ಆಶ್ರಯ ಪಡೆಯುವಂತೆ ಬಾಲಕಿಗೆ ಆದೇಶ ಹೊರಡಿಸಿದ ಮದ್ರಾಸ್ ಹೈಕೋರ್ಟ್ ತೀರ್ಪು ಕೇಳಿದ ಹದಿಹರೆಯದ ಬಾಲಕಿಯೋರ್ವಳು ಕೋರ್ಟಿನ ಮೊದಲನೇ ಮಹಡಿಯಿಂದ ಧುಮುಕಿದ ನಾಟಕೀಯ ಘಟನೆ ಮಂಗಳವಾರ ಚೆನ್ನೈನಲ್ಲಿ ನಡೆದಿದೆ. ಗಾಯಾಳು 15ರ ಹರೆಯದ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಾಲಕಿಯ ಹೆತ್ತವರು ವಿಚ್ಚೇದಿತರಾಗಿದ್ದು ಮಗಳು ನಾಪತ್ತೆಯಾಗಿದ್ದಾಳೆ ಎಂದು ಆಕೆಯ ತಂದೆ ಹೆಬಿಯಸ್ ಕಾರ್ಪಸ್ ಅರ್ಜಿ ದಾಖಲಿಸಿದ್ದರು. ಕೇಸು ಜಾಡು ಹಿಡಿದು ಹೊರಟ ಪೊಲೀಸರು ಬಾಲಕಿಯನ್ನು ಆಕೆಯ ಅಜ್ಜಿ ಮನೆಯಲ್ಲಿ ಪತ್ತೆ ಮಾಡಿ ಕೋರ್ಟ್ ಗೆ ಹಾಜರುಪಡಿಸಿದ್ದರು. ಕೋರ್ಟ್ ವಿಚಾರಣೆಯಲ್ಲಿ ಆಕೆ ತಾನು ತಾಯಿಯ ಜೊತೆ ಅಂಡಮಾನ್ ನಲ್ಲಿ ವಾಸಿಸುವುದಾಗಿ ಅಚ್ಚರಿಯ ಹೇಳಿಕೆ ನೀಡಿದ್ದಳು. ಬಳಿಕ ನ್ಯಾಯಮೂರ್ತಿಗಳಾದ ಎಂ.ಎಸ್ ರಮೇಶ್ ಮತ್ತು ವಿ. ಲಕ್ಷ್ಮೀನಾರಾಯಣನ್ ಅವರಿದ್ದ ಪೀಠ, ಬಾಲಕಿ ಹಾಗೂ ಕೌನ್ಸಿಲರ್ ಒಬ್ಬರ ಜೊತೆ ಅಭಿಪ್ರಾಯ ಪಡೆದು, ಅಂಡಮಾನ್ ವಾತಾವರಣ ಬಾಲಕಿಯ ವಾಸ್ತವ್ಯಕ್ಕೆ ಪೂರಕವಾಗಿಲ್ಲ ಎಂದು ಪ್ರಕಟಿಸಿ, ಸರ್ಕಾರಿ ವಸತಿ ಗೃಹದಲ್ಲಿರುವಂತೆ ಬಾಲಕಿಗೆ ನಿರ್ದೇಶನ ನೀಡಿತ್ತು. ಜೊತೆಗೆ ಬಾಲಕಿಗೆ ಮನೋವೈಜ್ಞಾನಿಕ ಚಿಕಿತ್ಸೆ ನೀಡುವಂತೆ ಆದೇಶಿಸಿ ಆಗಸ್ಟ್ 26ಕ್ಕೆ ಮುಂದಿನ ವಿಚಾರಣೆಗೆ ದಿನಾಂಕ ನಿಗದಿಪಡಿಸಿತು.
ಆದರೆ ಕೋರ್ಟ್ ಆದೇಶ ಕೇಳಿದ ಬಾಲಕಿ ಕೋರ್ಟ್ ನ ಮೊದಲ ಮಹಡಿಯಿಂದ ಕೆಳಗೆ ಧುಮುಕಿದ್ದಾಳೆ. ತಕ್ಷಣ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಾಯದಿಂದ ಪಾರಾಗಿದ್ದಾಳೆ ಎನ್ನುವ ಮಾಹಿತಿ ಇದೆ.
In a dramatic incident at the Madras High Court on Tuesday, a 15-year-old girl jumped from the first floor of the court premises after being denied permission to stay with her mother in the Andaman Islands. She was immediately rushed to the hospital and is reported to be out of danger.
12-08-25 10:39 pm
Bangalore Correspondent
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
KN Rajanna resigns: ಸಹಕಾರ ಸಚಿವ ಕೆ.ಎನ್ ರಾಜಣ್ಣ...
11-08-25 03:29 pm
13-08-25 11:56 am
HK News Desk
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
ಕರ್ನಾಟಕ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿ...
12-08-25 11:35 am
13-08-25 01:49 pm
Mangalore Correspondent
ಶವ ಹೂತ ಪ್ರಕರಣ ; ಕೊನೆಗೂ ಎಂಟ್ರಿಯಾದ ರಾಷ್ಟ್ರೀಯ ಮಾ...
13-08-25 10:37 am
ನಿಯಂತ್ರಣ ತಪ್ಪಿದ ಸ್ಕೂಟರ್ ಆವರಣ ಗೋಡೆಗೆ ಡಿಕ್ಕಿ ;...
13-08-25 10:17 am
ಧರ್ಮಸ್ಥಳ ಕೇಸ್ ; ಜಿಪಿಆರ್ ಬಳಸಿದರೂ ಸಿಗಲಿಲ್ಲ ಎಲುಬ...
12-08-25 11:06 pm
ಕೆಂಪು ಕಲ್ಲು ಗಣಿಗಾರಿಕೆಗೆ ಶೀಘ್ರದಲ್ಲೇ ಹೊಸ ನಿಯಮ ;...
12-08-25 08:34 pm
12-08-25 12:36 pm
Bangalore Correspondent
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm