ಬ್ರೇಕಿಂಗ್ ನ್ಯೂಸ್
14-08-25 07:24 pm HK News Desk ದೇಶ - ವಿದೇಶ
ನವದೆಹಲಿ, ಆ.14 : ಆಪರೇಷನ್ ಸಿಂಧೂರದ ವೇಳೆ ಪಾಕಿಸ್ತಾನದೊಂದಿಗೆ ಶಾಂತಿ ಒಪ್ಪಂದ ಕುದುರಿಸುವಲ್ಲಿ ತಮ್ಮ ಪಾತ್ರವನ್ನು ನಿರ್ಲಕ್ಷಿಸಿದ್ದಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮುನಿಸಿಕೊಂಡು ಭಾರತದ ಸರಕುಗಳ ಮೇಲೆ ಶೇ.50ರಷ್ಟು ಸುಂಕ ವಿಧಿಸಲು ಮುಂದಾಗಿದ್ದಾರೆ ಎಂದು ಮಾಜಿ ರಾಜತಂತ್ರಜ್ಞ, ಕೆನಡಾದ ಮಾಜಿ ಹೈಕಮಿಷನರ್ ವಿಕಾಸ್ ಸ್ವರೂಪ್ ಹೇಳಿದ್ದಾರೆ.
ಸುದ್ದಿ ಸಂಸ್ಥೆಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಪ್ರಸಿದ್ಧ ಲೇಖಕರೂ ಆಗಿರುವ ವಿಕಾಸ್, ವ್ಯಾಪಾರ ಮಾತುಕತೆಗಳಲ್ಲಿ ಟ್ರಂಪ್ ಆಡಳಿತದ ಒತ್ತಡಕ್ಕೆ ಮಣಿಯದಿರುವ ಭಾರತದ ನಿರ್ಧಾರ ಸರಿಯಾದ ನಡೆಯಾಗಿತ್ತು. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಸುಂಕ ನೀತಿಗಳು ಅಂತಿಮವಾಗಿ ಅಮೆರಿಕದಲ್ಲಿ ಹಣದುಬ್ಬರದ ಹೆಚ್ಚಳಕ್ಕೆ ಕಾರಣವಾಗಲಿದೆ ಎಂದು ಬಣ್ಣಿಸಿದ್ದಾರೆ.
ಅಮೆರಿಕ ಭಾರತದ ಸರಕುಗಳಿಗೆ ಹಾಕಿರುವ ಹೆಚ್ಚವರಿ ಸುಂಕಗಳು ಪಾಕಿಸ್ತಾನದೊಂದಿಗಿನ ಭಾರತದ ಯುದ್ಧದ ಸಂದರ್ಭ ಕದನ ವಿರಾಮ ಘೋಷಣೆಯಲ್ಲಿ ಅಮೆರಿಕಕ್ಕೆ ಪಾಲು ಸಿಗದ್ದರ ಪರಿಣಾಮವಾಗಿದೆ. ಭಾರತವು ಬ್ರಿಕ್ಸ್ ಸದಸ್ಯ ರಾಷ್ಟ್ರವಾಗುವುದು ಕೂಡ ಟ್ರಂಪ್ ಅವರ ಅಸಮಾಧಾನಕ್ಕೆ ಕಾರಣವಾಗಿದೆ. ಬ್ರಿಕ್ಸ್ ಎಂಬುದು ಅಮೆರಿಕನ್ ವಿರೋಧಿ ಮೈತ್ರಿಕೂಟವಾಗಿದ್ದು, ಡಾಲರ್ಗೆ ಪರ್ಯಾಯ ಕರೆನ್ಸಿ ರಚಿಸಲು ಅದು ಕಾರ್ಯತಂತ್ರ ರೂಪಿಸುತ್ತಿದೆ ಎಂಬ ತಪ್ಪು ಕಲ್ಪನೆ ಅವರಲ್ಲಿದೆ. ಭಾರತ ಬ್ರಿಕ್ಸ್ನ ಸದಸ್ಯತ್ವ ಕಳೆದುಕೊಳ್ಳಬೇಕು ಎಂಬುದು ಟ್ರಂಪ್ ಅವರ ವಾದವಾಗಿದೆ ಎಂದು ವಿಕಾಸ್ ಸ್ವರೂಪ್ ಹೇಳಿದ್ದಾರೆ.
ಕಳೆದ ಮೇ ತಿಂಗಳಲ್ಲಿ ನಡೆದ ಆಪರೇಷನ್ ಸಿಂಧೂರ್ ನಂತರ ಪಾಕಿಸ್ತಾನದೊಂದಿಗೆ ಶಾಂತಿ ಒಪ್ಪಂದದ ಮಧ್ಯಸ್ಥಿಕೆ ವಹಿಸಿದ ಕ್ರೆಡಿಟ್ ಅನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ಗೆ ನೀಡಲು ಭಾರತ ನಿರಾಕರಿಸಿದೆ. ಡೊನಾಲ್ಡ್ ಟ್ರಂಪ್ ಹಲವು ಬಾರಿ ಭಾರತ -ಪಾಕ್ ಕದನ ವಿರಾಮಕ್ಕೆ ನಾನೇ ಕಾರಣ ಎಂದು ಹೇಳಿಕೊಂಡು ತಿರುಗಿದ್ದರು. ಆದರೆ ಕದನ ವಿರಾಮ ಪ್ರಕ್ರಿಯೆಯಲ್ಲಿ ಅಮೆರಿಕದ ಪಾತ್ರವೇ ಇಲ್ಲ ಎಂದು ಭಾರತದ ಪ್ರಧಾನಿ ನರೇಂದ್ರ ಮೋದಿಯವರಿಂದ ಹಿಡಿದು ಹಲವು ಸಚಿವರು ಆರಂಭದಿಂದಲೂ ಸಮರ್ಥಿಸಿಕೊಂಡೇ ಬರುತ್ತಿದ್ದರು.
ಭಾರತ ಮತ್ತು ಪಾಕಿಸ್ತಾನ ಯುದ್ಧದಿಂದ ಹಿಂದೆ ಸರಿದು ಕದನ ವಿರಾಮ ಘೋಷಣೆ ಮಾಡಲು ಮತ್ತು ಪರಮಾಣು ದಂಗೆಯನ್ನು ನಿಲ್ಲಿಸಿದ್ದು ನಾನೇ ಎಂದು ಡೊನಾಲ್ಡ್ ಟ್ರಂಪ್ ಸುಮಾರು 30 ಬಾರಿ ಹೇಳಿದ್ದಾರೆ. ಪಾಕಿಸ್ತಾನ ಇದನ್ನು ಒಪ್ಪಿಕೊಂಡು ಟ್ರಂಪ್ ಅವರನ್ನು ನೊಬೆಲ್ ಶಾಂತಿ ಪ್ರಶಸ್ತಿಗೆ ನಾಮನಿರ್ದೇಶನ ಮಾಡಿತ್ತು. ಆದರೆ ಭಾರತ ಪ್ರತಿಬಾರಿಯೂ ಇದನ್ನು ನಿರಾಕರಿಸುತ್ತಲೇ ಬಂದಿದ್ದು ಟ್ರಂಪ್ ಅವರ ಅಸಮಾಧಾನಕ್ಕೆ ಕಾರಣವಾಗಿ ಅದು ಭಾರತದ ಸರಕುಗಳ ಮೇಲೆ ಸುಂಕದ ರೂಪ ಪಡೆದುಕೊಂಡಿತು ಎಂದು ಸ್ವರೂಪ್ ಹೇಳಿದ್ದಾರೆ. ಇದರ ಮಧ್ಯೆ ಕೃಷಿ ಮತ್ತು ಡೈರಿ ಕ್ಷೇತ್ರಗಳಿಗೂ ಹೆಚ್ಚಿನ ಅವಕಾಶ ಒದಗಿಸಬೇಕೆಂಬ ವ್ಯಾಪಾರ ಮಾತುಕತೆಯಲ್ಲೂ ಭಾರತವು ಅಮೆರಿಕದ ಒತ್ತಡಕ್ಕೆ ಮಣಿದಿಲ್ಲ, ಬದಲಿಗೆ ಅಮೆರಿಕವೇ ತನ್ನ ಗರಿಷ್ಠ ಬೇಡಿಕೆಗಳಿಗೆ ಒಪ್ಪಿಗೆ ನೀಡಬೇಕೆಂದು ಭಾರತ ಒತ್ತಡ ತಂತ್ರಗಳನ್ನು ಪ್ರಯೋಗಿಸುತ್ತಿದೆ ಎಂಬುದನ್ನೂ ಸ್ವರೂಪ್ ಬೊಟ್ಟು ಮಾಡಿದ್ದಾರೆ.
Former diplomat Vikas Swarup has lauded India’s firm stand in trade negotiations with the United States, saying the country has done the “right thing” by resisting pressure from the Trump administration to open its agriculture and dairy sectors.
12-12-25 08:47 pm
Bangalore Correspondent
Yatnal, Dk Shivakumar, Vijayendra: ಡಿಕೆ ಸಿಎಂ,...
12-12-25 07:47 pm
ಅಧಿವೇಶನ ಮುಗಿದ ತಕ್ಷಣವೇ ಡಿಕೆಶಿ ಮುಖ್ಯಮಂತ್ರಿಯಾಗುತ...
12-12-25 03:18 pm
ಅಧಿವೇಶನ ಮಧ್ಯೆಯೂ ಡಿಕೆಶಿ ಆಪ್ತ ಶಾಸಕರು, ಸಚಿವರ ಡಿನ...
12-12-25 03:15 pm
ನಾಯಕತ್ವ ಗೊಂದಲ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಮಾತ...
12-12-25 01:36 pm
12-12-25 11:00 pm
HK News Desk
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
ಶಾಲೆಗಳಲ್ಲಿ ವಂದೇ ಮಾತರಂ ಹಾಡುವುದು ಕಡ್ಡಾಯಗೊಳಿಸಿ ;...
10-12-25 10:54 pm
12-12-25 10:28 pm
Mangalore Correspondent
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ; ಅಧಿಕ...
12-12-25 02:02 pm
Mangalore Jail Inmate, Death: ಎದೆನೋವು ; ಉಡುಪಿ...
11-12-25 10:55 pm
ದೈವದ ಚಾಕರಿ ಮಾಡುವವರಿಗೆ ಮಾಸಾಶನ, ಸರ್ಕಾರಿ ಸವಲತ್ತು...
11-12-25 04:21 pm
12-12-25 01:58 pm
Mangalore Correspondent
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm
ಪುತ್ತೂರಿನಲ್ಲಿ ನಿಲ್ಲಿಸಿದ್ದ ಲಾರಿಯಿಂದ 21 ಲಕ್ಷ ಮೌ...
09-12-25 04:33 pm