ಬ್ರೇಕಿಂಗ್ ನ್ಯೂಸ್
17-08-25 09:09 pm HK News Desk ದೇಶ - ವಿದೇಶ
ನವದೆಹಲಿ, ಆ.17 : ಉಪ ರಾಷ್ಟ್ರಪತಿ ಚುನಾವಣೆಗೆ ಎನ್.ಡಿ.ಎ ಮೈತ್ರಿಕೂಟ ತನ್ನ ಅಭ್ಯರ್ಥಿಯನ್ನು ಘೋಷಿಸಿದ್ದು ಹಾಲಿ ಮಹಾರಾಷ್ಟ್ರ ರಾಜ್ಯಪಾಲ, ತಮಿಳುನಾಡು ಮೂಲದ ಸಿ.ಪಿ ರಾಧಾಕೃಷ್ಣನ್ ಅವರನ್ನು ಅಭ್ಯರ್ಥಿಯಾಗಿ ಆರಿಸಲಾಗಿದೆ.
ಸೆ.9ರಂದು ಉಪ ರಾಷ್ಟ್ರಪತಿ ಹುದ್ದೆಗೆ ಚುನಾವಣೆ ನಡೆಯಲಿದ್ದು ಈ ಹಿನ್ನೆಲೆಯಲ್ಲಿ ಅಭ್ಯರ್ಥಿ ಆಯ್ಕೆ ಸಲುವಾಗಿ ಬಿಜೆಪಿ ಸಂಸದೀಯ ಸಮಿತಿಯ ಸಭೆ ನಡೆಸಲಾಯಿತು. ಸಭೆಯಲ್ಲಿ ಪ್ರಧಾನಿ ಮೋದಿ ನೇತೃತ್ವದಲ್ಲಿ ರಾಧಾಕೃಷ್ಣನ್ ಹೆಸರು ಫೈನಲ್ ಮಾಡಲಾಗಿದೆ. ತಮಿಳುನಾಡು ಮೂಲದ ಅಭ್ಯರ್ಥಿ ಘೋಷಣೆ ಮೂಲಕ ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆ ನಿಟ್ಟಿನಲ್ಲಿ ಎನ್.ಡಿ.ಎ ಮಾಸ್ಟರ್ ಸ್ಟ್ರೋಕ್ ನೀಡಿದೆ.

ಸಿ.ಪಿ ರಾಧಾಕೃಷ್ಣನ್ ತಮಿಳುನಾಡು ಬಿಜೆಪಿಯ ಮಾಜಿ ಅಧ್ಯಕ್ಷರಾಗಿದ್ದು, ಕೊಯಂಬತ್ತೂರು ಕ್ಷೇತ್ರದಿಂದ ಎರಡು ಬಾರಿ ಸಂಸದರೂ ಆಗಿದ್ದರು. 2003ರಿಂದ 2006ರ ಅವಧಿಯಲ್ಲಿ ತಮಿಳುನಾಡು ಬಿಜೆಪಿ ಅಧ್ಯಕ್ಷರಾಗಿದ್ದ ರಾಧಾಕೃಷ್ಣನ್ 1998 ಮತ್ತು 1999ರಲ್ಲಿ ಕೊಯಮತ್ತೂರು ಲೋಕಸಭಾ ಕ್ಷೇತ್ರದಿಂದ ಸಂಸದರಾಗಿದ್ದರು. ಆರೆಸ್ಸೆಸ್ ಹಿನ್ನೆಲೆಯಿದ್ದು, ಭಾರತೀಯ ಜನಸಂಘದಿಂದ ರಾಜಕೀಯ ಜೀವನ ಆರಂಭಿಸಿದ್ದ ರಾಧಾಕೃಷ್ಣನ್, ವಾಜಪೇಯಿ ಅವರ ಒಡನಾಡಿಯಾಗಿದ್ದರು. 2024ರ ಜುಲೈ 31ರಿಂದ ಮಹಾರಾಷ್ಟ್ರ ರಾಜ್ಯಪಾಲರಾಗಿ ನೇಮಕಗೊಂಡಿದ್ದರು. ಅದಕ್ಕೂ ಹಿಂದೆ ಜಾರ್ಖಂಡ್ ರಾಜ್ಯಪಾಲರಾಗಿದ್ದರು. ಕೆಲಕಾಲ ತೆಲಂಗಾಣ ರಾಜ್ಯಪಾಲ ಹಾಗೂ ಕೇಂದ್ರಾಡಳಿತ ಪ್ರದೇಶ ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಕೂಡ ಹೆಚ್ಚುವರಿ ಜವಾಬ್ದಾರಿ ಹೊಂದಿದ್ದರು.
ಉಪ ರಾಷ್ಟ್ರಪತಿ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಆಗಸ್ಟ್ 21 ಕೊನೆಯ ದಿನವಾಗಿದೆ. ಇಂಡಿಯಾ ಒಕ್ಕೂಟದಿಂದ ಅಭ್ಯರ್ಥಿ ಘೋಷಿಸುವ ವಿಚಾರ ಇನ್ನೂ ಚರ್ಚೆಗೆ ಬಂದಿಲ್ಲ.
In a surprise move, the NDA alliance has announced Maharashtra Governor and Tamil Nadu native C.P. Radhakrishnan as its official candidate for the upcoming Vice Presidential election scheduled for September 9.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm