ಬ್ರೇಕಿಂಗ್ ನ್ಯೂಸ್
17-08-25 09:09 pm HK News Desk ದೇಶ - ವಿದೇಶ
ನವದೆಹಲಿ, ಆ.17 : ಉಪ ರಾಷ್ಟ್ರಪತಿ ಚುನಾವಣೆಗೆ ಎನ್.ಡಿ.ಎ ಮೈತ್ರಿಕೂಟ ತನ್ನ ಅಭ್ಯರ್ಥಿಯನ್ನು ಘೋಷಿಸಿದ್ದು ಹಾಲಿ ಮಹಾರಾಷ್ಟ್ರ ರಾಜ್ಯಪಾಲ, ತಮಿಳುನಾಡು ಮೂಲದ ಸಿ.ಪಿ ರಾಧಾಕೃಷ್ಣನ್ ಅವರನ್ನು ಅಭ್ಯರ್ಥಿಯಾಗಿ ಆರಿಸಲಾಗಿದೆ.
ಸೆ.9ರಂದು ಉಪ ರಾಷ್ಟ್ರಪತಿ ಹುದ್ದೆಗೆ ಚುನಾವಣೆ ನಡೆಯಲಿದ್ದು ಈ ಹಿನ್ನೆಲೆಯಲ್ಲಿ ಅಭ್ಯರ್ಥಿ ಆಯ್ಕೆ ಸಲುವಾಗಿ ಬಿಜೆಪಿ ಸಂಸದೀಯ ಸಮಿತಿಯ ಸಭೆ ನಡೆಸಲಾಯಿತು. ಸಭೆಯಲ್ಲಿ ಪ್ರಧಾನಿ ಮೋದಿ ನೇತೃತ್ವದಲ್ಲಿ ರಾಧಾಕೃಷ್ಣನ್ ಹೆಸರು ಫೈನಲ್ ಮಾಡಲಾಗಿದೆ. ತಮಿಳುನಾಡು ಮೂಲದ ಅಭ್ಯರ್ಥಿ ಘೋಷಣೆ ಮೂಲಕ ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆ ನಿಟ್ಟಿನಲ್ಲಿ ಎನ್.ಡಿ.ಎ ಮಾಸ್ಟರ್ ಸ್ಟ್ರೋಕ್ ನೀಡಿದೆ.

ಸಿ.ಪಿ ರಾಧಾಕೃಷ್ಣನ್ ತಮಿಳುನಾಡು ಬಿಜೆಪಿಯ ಮಾಜಿ ಅಧ್ಯಕ್ಷರಾಗಿದ್ದು, ಕೊಯಂಬತ್ತೂರು ಕ್ಷೇತ್ರದಿಂದ ಎರಡು ಬಾರಿ ಸಂಸದರೂ ಆಗಿದ್ದರು. 2003ರಿಂದ 2006ರ ಅವಧಿಯಲ್ಲಿ ತಮಿಳುನಾಡು ಬಿಜೆಪಿ ಅಧ್ಯಕ್ಷರಾಗಿದ್ದ ರಾಧಾಕೃಷ್ಣನ್ 1998 ಮತ್ತು 1999ರಲ್ಲಿ ಕೊಯಮತ್ತೂರು ಲೋಕಸಭಾ ಕ್ಷೇತ್ರದಿಂದ ಸಂಸದರಾಗಿದ್ದರು. ಆರೆಸ್ಸೆಸ್ ಹಿನ್ನೆಲೆಯಿದ್ದು, ಭಾರತೀಯ ಜನಸಂಘದಿಂದ ರಾಜಕೀಯ ಜೀವನ ಆರಂಭಿಸಿದ್ದ ರಾಧಾಕೃಷ್ಣನ್, ವಾಜಪೇಯಿ ಅವರ ಒಡನಾಡಿಯಾಗಿದ್ದರು. 2024ರ ಜುಲೈ 31ರಿಂದ ಮಹಾರಾಷ್ಟ್ರ ರಾಜ್ಯಪಾಲರಾಗಿ ನೇಮಕಗೊಂಡಿದ್ದರು. ಅದಕ್ಕೂ ಹಿಂದೆ ಜಾರ್ಖಂಡ್ ರಾಜ್ಯಪಾಲರಾಗಿದ್ದರು. ಕೆಲಕಾಲ ತೆಲಂಗಾಣ ರಾಜ್ಯಪಾಲ ಹಾಗೂ ಕೇಂದ್ರಾಡಳಿತ ಪ್ರದೇಶ ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಕೂಡ ಹೆಚ್ಚುವರಿ ಜವಾಬ್ದಾರಿ ಹೊಂದಿದ್ದರು.
ಉಪ ರಾಷ್ಟ್ರಪತಿ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಆಗಸ್ಟ್ 21 ಕೊನೆಯ ದಿನವಾಗಿದೆ. ಇಂಡಿಯಾ ಒಕ್ಕೂಟದಿಂದ ಅಭ್ಯರ್ಥಿ ಘೋಷಿಸುವ ವಿಚಾರ ಇನ್ನೂ ಚರ್ಚೆಗೆ ಬಂದಿಲ್ಲ.
In a surprise move, the NDA alliance has announced Maharashtra Governor and Tamil Nadu native C.P. Radhakrishnan as its official candidate for the upcoming Vice Presidential election scheduled for September 9.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am