ಬ್ರೇಕಿಂಗ್ ನ್ಯೂಸ್
20-08-25 11:01 am HK News Desk ದೇಶ - ವಿದೇಶ
ನವದೆಹಲಿ, ಆ.20 : ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು ತನ್ನ ನಿವಾಸದಲ್ಲಿ ಜನಸಂಪರ್ಕ ಕಾರ್ಯಕ್ರಮದಲ್ಲಿದ್ದಾಗ ಅವರ ಮೇಲೆ ಯುವಕನೊಬ್ಬ ಏಕಾಏಕಿ ಹಲ್ಲೆ ನಡೆಸಿದ ಘಡನೆ ನಡೆದಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕೂಡಲೇ ಆರೋಪಿ ಯುವಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ರೇಖಾ ಗುಪ್ತಾ ಅವರು ತಮ್ಮ ಅಧಿಕೃತ ನಿವಾಸದಲ್ಲಿ 'ಜನ್ ಸುನ್ ವಾಯಿ' (ಜನರ ಅಹವಾಲು) ಕಾರ್ಯಕ್ರಮದಲ್ಲಿದ್ದಾಗ ಅಂದಾಜು 30ರ ಹರೆಯದ ವ್ಯಕ್ತಿಯೊಬ್ಬ ಕೋರ್ಟ್ ಕೇಸ್ ಸಂಬಂಧಿಸಿ ದಾಖಲೆ ಪತ್ರಗಳನ್ನು ಹಿಡಿದು ಬಂದಿದ್ದು ಏಕಾಏಕಿ ಸಿಟ್ಟಿಗೆದ್ದು ಹಲ್ಲೆ ನಡೆಸಿದ್ದಾನೆ. ತಕ್ಷಣ ಪೊಲೀಸರು ಆತನನ್ನು ಸೆರೆಹಿಡಿದು ವಿಚಾರಣೆ ನಡೆಸಿದ್ದಾರೆ. ದೂರು ಹೇಳುವ ನೆಪದಲ್ಲಿ ಬಂದಿದ್ದು ಇದರ ನಡುವಲ್ಲೇ ಕೈಯನ್ನು ಹಿಡಿದೆಳೆದು ಕೂದಲು ಹಿಡಿದು ಹಲ್ಲೆ ನಡೆಸಿದ್ದಾನೆ. ಇದರಿಂದ ರೇಖಾ ಗುಪ್ತಾ ತನ್ನ ಕುರ್ಚಿಯಿಂದ ಆಯತಪ್ಪಿ ಕೆಳಕ್ಕೆ ಬಿದ್ದಿದ್ದಾರೆ.
ಆಗಂತುಕ ವ್ಯಕ್ತಿಯನ್ನು ರಾಜೇಶ್ ಕಿಮ್ಜಿ ಎಂದು ಗುರುತಿಸಲಾಗಿದ್ದು ಹಲ್ಲೆ ಉದ್ದೇಶ ಏನೆಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸಿಎಂ ರೇಖಾ ಗುಪ್ತಾ ಅವರ ಮೇಲಿನ ದಾಳಿಯನ್ನು ದೆಹಲಿ ಬಿಜೆಪಿ ಅಧ್ಯಕ್ಷ ವೀರೇಂದ್ರ ಸಚ್ದೇವ ಮತ್ತು ದೆಹಲಿ ಕಾಂಗ್ರೆಸ್ ಮುಖ್ಯಸ್ಥ ದೇವೇಂದರ್ ಯಾದವ್ ಖಂಡಿಸಿದ್ದಾರೆ.
ಜನ್ ಸುನ್ವಾಯಿ ಕಾರ್ಯಕ್ರಮದಲ್ಲಿ ಸಾರ್ವಜನಿಕರು ನೇರವಾಗಿ ಮುಖ್ಯಮಂತ್ರಿಗೆ ಅಹವಾಲು, ದೂರುಗಳನ್ನು ಸಲ್ಲಿಸಬಹುದು. ಬುಧವಾರ ಬೆಳಗ್ಗೆ ಎಂದಿನಂತೆ ಸಿಎಂ ಗುಪ್ತಾ ತನ್ನ ಕೆಲಸದಲ್ಲಿ ನಿರತವಾಗಿದ್ದಾಗಲೇ ಯುವಕ ಹಲ್ಲೆ ನಡೆಸಿದ್ದಾನೆ. ಹಲ್ಲೆ ಘಟನೆ ದೆಹಲಿಯಲ್ಲಿ ಭದ್ರತಾ ವೈಫಲ್ಯದ ಬಗ್ಗೆ ಆತಂಕ ಹೆಚ್ಚಿಸಿದೆ. ಮುಖ್ಯಮಂತ್ರಿಗೇ ಭದ್ರತೆ ಕೊಡುವಲ್ಲಿ ದೆಹಲಿ ಪೊಲೀಸರು ವಿಫಲರಾದರೇ ಎಂಬ ಪ್ರಶ್ನೆ ಎದುರಾಗಿದೆ.
Delhi Chief Minister Rekha Gupta was attacked by an intruder while interacting with the public at her official residence during a Jan Sunwai (public grievance hearing) program on Wednesday. She was immediately rushed to the hospital, while police apprehended the accused on the spot.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm