ಬ್ರೇಕಿಂಗ್ ನ್ಯೂಸ್
20-08-25 11:01 am HK News Desk ದೇಶ - ವಿದೇಶ
ನವದೆಹಲಿ, ಆ.20 : ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು ತನ್ನ ನಿವಾಸದಲ್ಲಿ ಜನಸಂಪರ್ಕ ಕಾರ್ಯಕ್ರಮದಲ್ಲಿದ್ದಾಗ ಅವರ ಮೇಲೆ ಯುವಕನೊಬ್ಬ ಏಕಾಏಕಿ ಹಲ್ಲೆ ನಡೆಸಿದ ಘಡನೆ ನಡೆದಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕೂಡಲೇ ಆರೋಪಿ ಯುವಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ರೇಖಾ ಗುಪ್ತಾ ಅವರು ತಮ್ಮ ಅಧಿಕೃತ ನಿವಾಸದಲ್ಲಿ 'ಜನ್ ಸುನ್ ವಾಯಿ' (ಜನರ ಅಹವಾಲು) ಕಾರ್ಯಕ್ರಮದಲ್ಲಿದ್ದಾಗ ಅಂದಾಜು 30ರ ಹರೆಯದ ವ್ಯಕ್ತಿಯೊಬ್ಬ ಕೋರ್ಟ್ ಕೇಸ್ ಸಂಬಂಧಿಸಿ ದಾಖಲೆ ಪತ್ರಗಳನ್ನು ಹಿಡಿದು ಬಂದಿದ್ದು ಏಕಾಏಕಿ ಸಿಟ್ಟಿಗೆದ್ದು ಹಲ್ಲೆ ನಡೆಸಿದ್ದಾನೆ. ತಕ್ಷಣ ಪೊಲೀಸರು ಆತನನ್ನು ಸೆರೆಹಿಡಿದು ವಿಚಾರಣೆ ನಡೆಸಿದ್ದಾರೆ. ದೂರು ಹೇಳುವ ನೆಪದಲ್ಲಿ ಬಂದಿದ್ದು ಇದರ ನಡುವಲ್ಲೇ ಕೈಯನ್ನು ಹಿಡಿದೆಳೆದು ಕೂದಲು ಹಿಡಿದು ಹಲ್ಲೆ ನಡೆಸಿದ್ದಾನೆ. ಇದರಿಂದ ರೇಖಾ ಗುಪ್ತಾ ತನ್ನ ಕುರ್ಚಿಯಿಂದ ಆಯತಪ್ಪಿ ಕೆಳಕ್ಕೆ ಬಿದ್ದಿದ್ದಾರೆ.
ಆಗಂತುಕ ವ್ಯಕ್ತಿಯನ್ನು ರಾಜೇಶ್ ಕಿಮ್ಜಿ ಎಂದು ಗುರುತಿಸಲಾಗಿದ್ದು ಹಲ್ಲೆ ಉದ್ದೇಶ ಏನೆಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸಿಎಂ ರೇಖಾ ಗುಪ್ತಾ ಅವರ ಮೇಲಿನ ದಾಳಿಯನ್ನು ದೆಹಲಿ ಬಿಜೆಪಿ ಅಧ್ಯಕ್ಷ ವೀರೇಂದ್ರ ಸಚ್ದೇವ ಮತ್ತು ದೆಹಲಿ ಕಾಂಗ್ರೆಸ್ ಮುಖ್ಯಸ್ಥ ದೇವೇಂದರ್ ಯಾದವ್ ಖಂಡಿಸಿದ್ದಾರೆ.
ಜನ್ ಸುನ್ವಾಯಿ ಕಾರ್ಯಕ್ರಮದಲ್ಲಿ ಸಾರ್ವಜನಿಕರು ನೇರವಾಗಿ ಮುಖ್ಯಮಂತ್ರಿಗೆ ಅಹವಾಲು, ದೂರುಗಳನ್ನು ಸಲ್ಲಿಸಬಹುದು. ಬುಧವಾರ ಬೆಳಗ್ಗೆ ಎಂದಿನಂತೆ ಸಿಎಂ ಗುಪ್ತಾ ತನ್ನ ಕೆಲಸದಲ್ಲಿ ನಿರತವಾಗಿದ್ದಾಗಲೇ ಯುವಕ ಹಲ್ಲೆ ನಡೆಸಿದ್ದಾನೆ. ಹಲ್ಲೆ ಘಟನೆ ದೆಹಲಿಯಲ್ಲಿ ಭದ್ರತಾ ವೈಫಲ್ಯದ ಬಗ್ಗೆ ಆತಂಕ ಹೆಚ್ಚಿಸಿದೆ. ಮುಖ್ಯಮಂತ್ರಿಗೇ ಭದ್ರತೆ ಕೊಡುವಲ್ಲಿ ದೆಹಲಿ ಪೊಲೀಸರು ವಿಫಲರಾದರೇ ಎಂಬ ಪ್ರಶ್ನೆ ಎದುರಾಗಿದೆ.
Delhi Chief Minister Rekha Gupta was attacked by an intruder while interacting with the public at her official residence during a Jan Sunwai (public grievance hearing) program on Wednesday. She was immediately rushed to the hospital, while police apprehended the accused on the spot.
12-12-25 08:47 pm
Bangalore Correspondent
Yatnal, Dk Shivakumar, Vijayendra: ಡಿಕೆ ಸಿಎಂ,...
12-12-25 07:47 pm
ಅಧಿವೇಶನ ಮುಗಿದ ತಕ್ಷಣವೇ ಡಿಕೆಶಿ ಮುಖ್ಯಮಂತ್ರಿಯಾಗುತ...
12-12-25 03:18 pm
ಅಧಿವೇಶನ ಮಧ್ಯೆಯೂ ಡಿಕೆಶಿ ಆಪ್ತ ಶಾಸಕರು, ಸಚಿವರ ಡಿನ...
12-12-25 03:15 pm
ನಾಯಕತ್ವ ಗೊಂದಲ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಮಾತ...
12-12-25 01:36 pm
12-12-25 11:00 pm
HK News Desk
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
ಶಾಲೆಗಳಲ್ಲಿ ವಂದೇ ಮಾತರಂ ಹಾಡುವುದು ಕಡ್ಡಾಯಗೊಳಿಸಿ ;...
10-12-25 10:54 pm
12-12-25 10:28 pm
Mangalore Correspondent
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ; ಅಧಿಕ...
12-12-25 02:02 pm
Mangalore Jail Inmate, Death: ಎದೆನೋವು ; ಉಡುಪಿ...
11-12-25 10:55 pm
ದೈವದ ಚಾಕರಿ ಮಾಡುವವರಿಗೆ ಮಾಸಾಶನ, ಸರ್ಕಾರಿ ಸವಲತ್ತು...
11-12-25 04:21 pm
12-12-25 01:58 pm
Mangalore Correspondent
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm
ಪುತ್ತೂರಿನಲ್ಲಿ ನಿಲ್ಲಿಸಿದ್ದ ಲಾರಿಯಿಂದ 21 ಲಕ್ಷ ಮೌ...
09-12-25 04:33 pm