ಬ್ರೇಕಿಂಗ್ ನ್ಯೂಸ್
21-08-25 06:09 pm HK News Desk ದೇಶ - ವಿದೇಶ
ಮುಂಬೈ, ಆ.21 : ಮಹತ್ವದ ಬೆಳವಣಿಗೆಯೊಂದರಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಮಹಾರಾಷ್ಟ್ರ ನವನಿರ್ಮಾಣ ಸೇನೆ(ಎಂಎನ್ಎಸ್) ಮುಖ್ಯಸ್ಥ ರಾಜ್ ಠಾಕ್ರೆ ಗುರುವಾರ ಭೇಟಿ ಮಾಡಿದ್ದು ಹೊಸ ರಾಜಕೀಯ ಸಂಚಲನಕ್ಕೆ ಕಾರಣವಾಗಿದೆ. ಆದರೆ ಈ ಭೇಟಿ ರಾಜಕೀಯ ಹಿನ್ನೆಲೆಯಿಂದಲ್ಲ, ನಗರ ಯೋಜನೆ ಹಾಗೂ ಸಂಚಾರ ದಟ್ಟಣೆಯ ವಿಷಯಗಳ ಬಗ್ಗೆ ಚರ್ಚೆ ಮಾಡಲು ನಿಗದಿಯಾಗಿತ್ತು ಎಂದು ರಾಜ್ ಠಾಕ್ರೆ ಸ್ಪಷ್ಟಪಡಿಸಿದ್ದಾರೆ.
ಆದರೂ ಬೆಸ್ಟ್ ಕ್ರೆಡಿಟ್ ಸೊಸೈಟಿ ಚುನಾವಣೆಯಲ್ಲಿ ಠಾಕ್ರೆ ಬ್ರ್ಯಾಂಡ್ ಮ್ಯಾಜಿಕ್ ನಡೆಯದೆ ಸೋಲು ಅನುಭವಿಸಿದ ಒಂದು ದಿನದ ನಂತರ, ರಾಜ್ ಠಾಕ್ರೆ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಅಧಿಕೃತ ವರ್ಷಾ ಬಂಗಲೆಯಲ್ಲಿ ಭೇಟಿಯಾಗಿರುವುದು ಹೊಸ ರಾಜಕೀಯ ಬೆಳವಣಿಗೆಯ ಲೆಕ್ಕಾಚಾರಗಳನ್ನು ತೆರೆದಿಟ್ಟಿದೆ. ವಿಶೇಷವಾಗಿ ಗ್ರೇಟರ್ ಮುಂಬೈನಲ್ಲಿ 400 ಮಿ.ಮೀ. ಮಳೆ ಸುರಿದಿದ್ದು ಇದರಿಂದ ಉಂಟಾಗಿರುವ ಸಮಸ್ಯೆ ಹಾಗೂ ನಗರ ಯೋಜನೆ ಮತ್ತು ಸಂಚಾರ ದಟ್ಟಣೆ ಕುರಿತು ಚರ್ಚಿಸಲು ಭೇಟಿ ನಿಗದಿಯಾಗಿತ್ತು. ಇದರಲ್ಲಿ ಯಾವುದೇ ರಾಜಕೀಯ ಸಮೀಕರಣಗಳಿಲ್ಲ ಎಂದು ರಾಜ್ ಠಾಕ್ರೆ ತಿಳಿಸಿದ್ದಾರೆ.
ಭಾರೀ ಮಳೆಯ ಸಂದರ್ಭ ವಿಪರೀತ ಟ್ರಾಫಿಕ್ ಜಾಮ್ ಇತ್ತು. ಮುಂಬೈನಲ್ಲಿ ಸಂಚಾರದಲ್ಲಿ ಶಿಸ್ತು ಕಾಣುತ್ತಿಲ್ಲ. ಜನ ಸಿಕ್ಕ ಸಿಕ್ಕಲ್ಲಿ ಕಾರುಗಳನ್ನು ನಿಲ್ಲಿಸುತ್ತಿದ್ದಾರೆ. ಈ ಬಗ್ಗೆ ಸರ್ಕಾರ, ಅಧಿಕಾರಿಗಳು ಗಮನ ಹರಿಸುತ್ತಿಲ್ಲ, ಮೂಲಭೂತ ವಿಷಯಗಳತ್ತ ಯಾರೂ ಗಮನ ಹರಿಸುತ್ತಿಲ್ಲ, ಈ ವಿಷಯವನ್ನು ಮುಖ್ಯಮಂತ್ರಿಯವರ ಗಮನಕ್ಕೆ ತರಲಾಗಿದೆ ಎಂದು ರಾಜ್ ಠಾಕ್ರೆ ಹೇಳಿದರು. ಪಾರ್ಕಿಂಗ್ ಸ್ಥಳಗಳನ್ನು ಅಭಿವೃದ್ಧಿಪಡಿಸಬೇಕು ಮತ್ತು ಸರ್ಕಾರ ಅಥವಾ ಪುರಸಭೆಯ ಮಟ್ಟದಲ್ಲಿ ಶಿಸ್ತು ಹೇರಲು ಸಾಧ್ಯವಾದ ಎಲ್ಲ ಕೆಲಸವನ್ನೂ ಮಾಡಬೇಕು ಎಂದು ಎಂಎನ್ಎಸ್ ಮುಖ್ಯಸ್ಥ ರಾಜ್ ಠಾಕ್ರೆ ಹೇಳಿದರು
In a significant development, Maharashtra Navnirman Sena (MNS) chief Raj Thackeray met Maharashtra Chief Minister Devendra Fadnavis on Thursday, triggering speculation about potential new political alignments. However, Thackeray clarified that the meeting was not political in nature, but focused on urban planning and traffic-related issues in Mumbai.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm