ಬ್ರೇಕಿಂಗ್ ನ್ಯೂಸ್
22-08-25 08:07 pm HK News Desk ದೇಶ - ವಿದೇಶ
ಕೊಲಂಬೊ, ಆ.22: ಸರ್ಕಾರಿ ಹಣವನ್ನು ದುರ್ಬಳಕೆ ಮಾಡಿಕೊಂಡು ಬ್ರಿಟನ್ ತೆರಳಿದ್ದರು ಎಂಬ ಆರೋಪದಲ್ಲಿ ಶ್ರೀಲಂಕಾದ ಮಾಜಿ ಅಧ್ಯಕ್ಷ 76 ವರ್ಷದ ರನಿಲ್ ವಿಕ್ರಮಸಿಂಘೆ ಅವರನ್ನು ಶುಕ್ರವಾರ ಕೊಲಂಬೋದಲ್ಲಿ ಸಿಐಡಿ ವಿಭಾಗದ ಅಧಿಕಾರಿಗಳು ಬಂಧಿಸಿದ್ದಾರೆ.
ರನಿಲ್ ವಿಕ್ರಮಸಿಂಘೆ ಅವರು ಶ್ರೀಲಂಕಾ ಅಧ್ಯಕ್ಷರಾಗಿದ್ದಾಗ ಸೆಪ್ಟೆಂಬರ್ 2023ರಲ್ಲಿ ಬ್ರಿಟನ್ ವಿಶ್ವವಿದ್ಯಾಲಯದಲ್ಲಿ ತಮ್ಮ ಪತ್ನಿಯ ಪದವಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಲು ಲಂಡನ್ಗೆ ಭೇಟಿ ನೀಡಲು ಸರ್ಕಾರಿ ಹಣವನ್ನು ಬಳಸಿಕೊಂಡಿದ್ದಾರೆಂಬ ಆರೋಪ ಕೇಳಿಬಂದಿತ್ತು. ಈ ಬಗ್ಗೆ ಕೊಲಂಬೋ ಸಿಐಡಿ ಕಚೇರಿಯಲ್ಲಿ ಹೇಳಿಕೆ ನೀಡಲು ರನಿಲ್ ಅವರು ಶುಕ್ರವಾರ ಬಂದಿದ್ದಾಗಲೇ ಅವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. 76 ವರ್ಷದ ವಿಕ್ರಮಸಿಂಘೆ ಅವರನ್ನು ಸಿಐಡಿ ಪ್ರಧಾನ ಕಚೇರಿಯಲ್ಲಿ ಬಂಧಿಸಲಾಗಿದೆ.
ವಿಕ್ರಮಸಿಂಘೆ ಅವರು ಬ್ರಿಟಿಷ್ ವಿಶ್ವವಿದ್ಯಾಲಯದಲ್ಲಿ ತಮ್ಮ ಪತ್ನಿ ಪ್ರೊಫೆಸರ್ ಮೈತ್ರಿ ಅವರ ಘಟಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಲು ಸೆಪ್ಟೆಂಬರ್ 2023ರಲ್ಲಿ ಲಂಡನ್ಗೆ ಭೇಟಿ ನೀಡಲು ಸರ್ಕಾರದ ಹಣ ಬಳಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ವಿಕ್ರಮಸಿಂಘೆ ಅವರು ಅಧಿಕೃತ ಕಾರ್ಯಕ್ರಮದ ನಂತರ ಅಮೆರಿಕದಿಂದ ಹಿಂತಿರುಗುತ್ತಿದ್ದರು ಮತ್ತು ಅವರ ಪತ್ನಿಯ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಸರ್ಕಾರದ ವೆಚ್ಚದಲ್ಲಿ ಲಂಡನ್ಗೆ ತೆರಳಿದ್ದರು ಎಂದು ಆರೋಪಿಸಲಾಗಿದೆ.
ಆರು ಬಾರಿ ಲಂಕಾ ಪ್ರಧಾನಿಯಾಗಿದ್ದ ರನಿಲ್ ವಿಕ್ರಮಸಿಂಘೆ ಅವರನ್ನು 2022ರ ಜುಲೈನಲ್ಲಿ ಆರ್ಥಿಕ ತುರ್ತುಸ್ಥಿತಿ ಏರ್ಪಟ್ಟಾಗ ಅಧ್ಯಕ್ಷ ಹುದ್ದೆಗೇರಿಸಲಾಗಿತ್ತು. ಸೆಪ್ಟೆಂಬರ್ 2024 ರ ವರೆಗೆ ಅವರು ಶ್ರೀಲಂಕಾ ಅಧ್ಯಕ್ಷರಾಗಿದ್ದರು. ಇದೇ ಸಂದರ್ಭದಲ್ಲಿ ತನ್ನ ಖಾಸಗಿ ಕಾರ್ಯಕ್ರಮಕ್ಕಾಗಿ ಬ್ರಿಟನ್ ತೆರಳಿದ್ದು ಈಗ ಅವರಿಗೆ ಮುಳುವಾಗಿದೆ. ವಿಕ್ರಮಸಿಂಘೆ ಅವರು ಲಂಕಾದ ಸಿರಿವಂತ ಕುಟುಂಬದ ವ್ಯಕ್ತಿಯಾಗಿದ್ದು ತನ್ನ 29ನೇ ವಯಸ್ಸಿನಲ್ಲೇ ಸಚಿವ ಸ್ಥಾನಕ್ಕೇರಿ ಸಾರ್ವಜನಿಕ ಜೀವನ ಆರಂಭಿಸಿದ್ದರು.
Former Sri Lankan president Ranil Wickremesinghe was arrested on Friday for allegedly "misusing government funds".
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm