ಬ್ರೇಕಿಂಗ್ ನ್ಯೂಸ್
22-08-25 08:07 pm HK News Desk ದೇಶ - ವಿದೇಶ
ಕೊಲಂಬೊ, ಆ.22: ಸರ್ಕಾರಿ ಹಣವನ್ನು ದುರ್ಬಳಕೆ ಮಾಡಿಕೊಂಡು ಬ್ರಿಟನ್ ತೆರಳಿದ್ದರು ಎಂಬ ಆರೋಪದಲ್ಲಿ ಶ್ರೀಲಂಕಾದ ಮಾಜಿ ಅಧ್ಯಕ್ಷ 76 ವರ್ಷದ ರನಿಲ್ ವಿಕ್ರಮಸಿಂಘೆ ಅವರನ್ನು ಶುಕ್ರವಾರ ಕೊಲಂಬೋದಲ್ಲಿ ಸಿಐಡಿ ವಿಭಾಗದ ಅಧಿಕಾರಿಗಳು ಬಂಧಿಸಿದ್ದಾರೆ.
ರನಿಲ್ ವಿಕ್ರಮಸಿಂಘೆ ಅವರು ಶ್ರೀಲಂಕಾ ಅಧ್ಯಕ್ಷರಾಗಿದ್ದಾಗ ಸೆಪ್ಟೆಂಬರ್ 2023ರಲ್ಲಿ ಬ್ರಿಟನ್ ವಿಶ್ವವಿದ್ಯಾಲಯದಲ್ಲಿ ತಮ್ಮ ಪತ್ನಿಯ ಪದವಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಲು ಲಂಡನ್ಗೆ ಭೇಟಿ ನೀಡಲು ಸರ್ಕಾರಿ ಹಣವನ್ನು ಬಳಸಿಕೊಂಡಿದ್ದಾರೆಂಬ ಆರೋಪ ಕೇಳಿಬಂದಿತ್ತು. ಈ ಬಗ್ಗೆ ಕೊಲಂಬೋ ಸಿಐಡಿ ಕಚೇರಿಯಲ್ಲಿ ಹೇಳಿಕೆ ನೀಡಲು ರನಿಲ್ ಅವರು ಶುಕ್ರವಾರ ಬಂದಿದ್ದಾಗಲೇ ಅವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. 76 ವರ್ಷದ ವಿಕ್ರಮಸಿಂಘೆ ಅವರನ್ನು ಸಿಐಡಿ ಪ್ರಧಾನ ಕಚೇರಿಯಲ್ಲಿ ಬಂಧಿಸಲಾಗಿದೆ.
ವಿಕ್ರಮಸಿಂಘೆ ಅವರು ಬ್ರಿಟಿಷ್ ವಿಶ್ವವಿದ್ಯಾಲಯದಲ್ಲಿ ತಮ್ಮ ಪತ್ನಿ ಪ್ರೊಫೆಸರ್ ಮೈತ್ರಿ ಅವರ ಘಟಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಲು ಸೆಪ್ಟೆಂಬರ್ 2023ರಲ್ಲಿ ಲಂಡನ್ಗೆ ಭೇಟಿ ನೀಡಲು ಸರ್ಕಾರದ ಹಣ ಬಳಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ವಿಕ್ರಮಸಿಂಘೆ ಅವರು ಅಧಿಕೃತ ಕಾರ್ಯಕ್ರಮದ ನಂತರ ಅಮೆರಿಕದಿಂದ ಹಿಂತಿರುಗುತ್ತಿದ್ದರು ಮತ್ತು ಅವರ ಪತ್ನಿಯ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಸರ್ಕಾರದ ವೆಚ್ಚದಲ್ಲಿ ಲಂಡನ್ಗೆ ತೆರಳಿದ್ದರು ಎಂದು ಆರೋಪಿಸಲಾಗಿದೆ.
ಆರು ಬಾರಿ ಲಂಕಾ ಪ್ರಧಾನಿಯಾಗಿದ್ದ ರನಿಲ್ ವಿಕ್ರಮಸಿಂಘೆ ಅವರನ್ನು 2022ರ ಜುಲೈನಲ್ಲಿ ಆರ್ಥಿಕ ತುರ್ತುಸ್ಥಿತಿ ಏರ್ಪಟ್ಟಾಗ ಅಧ್ಯಕ್ಷ ಹುದ್ದೆಗೇರಿಸಲಾಗಿತ್ತು. ಸೆಪ್ಟೆಂಬರ್ 2024 ರ ವರೆಗೆ ಅವರು ಶ್ರೀಲಂಕಾ ಅಧ್ಯಕ್ಷರಾಗಿದ್ದರು. ಇದೇ ಸಂದರ್ಭದಲ್ಲಿ ತನ್ನ ಖಾಸಗಿ ಕಾರ್ಯಕ್ರಮಕ್ಕಾಗಿ ಬ್ರಿಟನ್ ತೆರಳಿದ್ದು ಈಗ ಅವರಿಗೆ ಮುಳುವಾಗಿದೆ. ವಿಕ್ರಮಸಿಂಘೆ ಅವರು ಲಂಕಾದ ಸಿರಿವಂತ ಕುಟುಂಬದ ವ್ಯಕ್ತಿಯಾಗಿದ್ದು ತನ್ನ 29ನೇ ವಯಸ್ಸಿನಲ್ಲೇ ಸಚಿವ ಸ್ಥಾನಕ್ಕೇರಿ ಸಾರ್ವಜನಿಕ ಜೀವನ ಆರಂಭಿಸಿದ್ದರು.
Former Sri Lankan president Ranil Wickremesinghe was arrested on Friday for allegedly "misusing government funds".
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am