ಬ್ರೇಕಿಂಗ್ ನ್ಯೂಸ್
23-08-25 04:58 pm HK News Desk ದೇಶ - ವಿದೇಶ
ಚೆನ್ನೈ, ಆ.23: ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಸ್ಥಾಪಿಸಿ ತಮಿಳುನಾಡು ರಾಜಕೀಯದಲ್ಲಿ ಬಿರುಸಿನ ಓಡಾಟದಲ್ಲಿ ತೊಡಗಿರುವ ನಟ ವಿಜಯ್ ಮುಂದಿನ ವರ್ಷ ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ಮಧುರೈ ಪೂರ್ವ ಕ್ಷೇತ್ರದಿಂದ ಸ್ಪರ್ಧಿಸುವ ಇರಾದೆ ವ್ಯಕ್ತಪಡಿಸಿದ್ದಾರೆ. ಆದರೆ ಅದಿನ್ನೂ ಪೂರ್ಣ ಖಚಿತವಾಗಿಲ್ಲ.
ತಮಿಳುನಾಡಿನ ಎರಡು ಪ್ರಬಲ ದ್ರಾವಿಡ ಪಕ್ಷಗಳ ಬಗ್ಗೆ ಜನ ಭ್ರಮನಿರಸನಗೊಂಡಿದ್ದಾರೆ ಎಂದು ಹೇಳಿರುವ ವಿಜಯ್, 2026ರ ವಿಧಾನಸಭಾ ಚುನಾವಣೆಯಲ್ಲಿ ಮಧುರೈ ಪೂರ್ವದಿಂದ ಸ್ಪರ್ಧಿಸಬಹುದೆಂದು ಗುರುವಾರ ಸುಳಿವು ನೀಡಿದ್ದು, ಅಲ್ಲಿನ ಜನ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ ವಿಜಯ್ ಆಯ್ಕೆಗೆ ಒಲವು ವ್ಯಕ್ತಪಡಿಸುತ್ತಿದ್ದಾರೆ ಎಂದು ಮೂಲಗಳು ಹೇಳಿವೆ.
ನಾವು ಕಳೆದ ಚುನಾವಣೆಗಳಲ್ಲಿ ಎರಡು ಎಲೆ ಮತ್ತು ಉದಯಿಸುವ ಸೂರ್ಯನಿಗೆ ಮತ ಹಾಕಿದ್ದೇವೆ. ಆದರೆ ಈ ಬಾರಿ ಅದು "ವಿಜಯ್ಗೆ" ಎಂದು ದಿನಗೂಲಿ ನೌಕರರೊಬ್ಬರು ಎಐಎಡಿಎಂಕೆ ಮತ್ತು ಡಿಎಂಕೆ ಚುನಾವಣಾ ಚಿಹ್ನೆಗಳನ್ನು ಉಲ್ಲೇಖಿಸಿದ್ದಾರೆ. ತಮಿಳುನಾಡಿನಲ್ಲಿ ಮಹಿಳೆಯರು ಹೊರಗೆ ಹೋಗಲು ಸಾಧ್ಯವಿಲ್ಲ, ನಾವು ಎಲ್ಲಿಯೂ ಒಂಟಿಯಾಗಿ ಹೋಗಲು ಸಾಧ್ಯವಾಗುತ್ತಿಲ್ಲ. ಎಂಜಿಆರ್ ನಂತರ, ಜನರನ್ನು ತನ್ನವರೇ ಎಂದು ನೋಡುತ್ತಿರುವುದು ವಿಜಯ್ ಒಬ್ಬರೇ. ಅವರಿಗೇ ನಮ್ಮ ಮತ ಎಂದು ಮಹಿಳೆಯೊಬ್ಬರು ತಿಳಿಸಿದ್ದಾರೆ.
ಮಧುರೈ ಪೂರ್ವ ಐತಿಹಾಸಿಕವಾಗಿ ಪ್ರಮುಖ ಕ್ಷೇತ್ರ. 1990ರ ದಶಕದ ವರೆಗೆ ಕಮ್ಯುನಿಸ್ಟರು ಮತ್ತು ಎಐಎಡಿಎಂಕೆ ಪ್ರಾಬಲ್ಯ ಹೊಂದಿದ್ದ ಈ ಕ್ಷೇತ್ರದಲ್ಲಿ ಕ್ಷೇತ್ರ ಪುನರ್ವಿಂಗಡಣೆಯ ನಂತರ ಡಿಎಂಕೆ, ಕಳೆದ ಮೂರು ಚುನಾವಣೆಗಳಲ್ಲಿ ಎರಡನ್ನು ಗೆದ್ದಿದೆ. ಮಧುರೈ ಪೂರ್ವ ಕ್ಷೇತ್ರವನ್ನು ಯಾವ ಪಕ್ಷ ಪಡೆದುಕೊಂಡರೂ ಅದು ಚೆನ್ನೈನಲ್ಲಿ ಅಧಿಕಾರವನ್ನು ಸ್ಥಾಪಿಸುತ್ತದೆ ಎಂಬುದು ಜನಜನಿತ. ಮಧುರೈ ಪೂರ್ವದಲ್ಲಿ ಇತ್ತೀಚೆಗೆ ನಡೆದ ವಿಜಯ್ ಪಾಲ್ಗೊಂಡ ರಾಜಕೀಯ ಸಮ್ಮೇಳನದಲ್ಲಿ, ಸುಮಾರು ನಾಲ್ಕು ಲಕ್ಷ ಜನ ಸೇರಿದ್ದು ತಮಿಳುನಾಡು ರಾಜಕೀಯದಲ್ಲಿ ಎಲ್ಲರ ಹುಬ್ಬೇರಿಸುವಂತೆ ಮಾಡಿತ್ತು.
Actor-turned-politician Vijay, who recently launched the Tamizhaga Vetri Kazhagam (TVK), is expected to contest the 2026 Tamil Nadu Assembly elections from the Madurai East constituency, sources said. Though the decision is not yet final, Vijay dropped a strong hint on Thursday, suggesting Madurai East could be his chosen battleground.
11-12-25 03:29 pm
HK News Desk
ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಪರೀಕ್ಷೆ ಬರೆದ ವಿದ್ಯಾರ...
11-12-25 12:44 pm
ಬೆಂಗಳೂರು ದೇವನಹಳ್ಳಿ ಬಳಿ ಭೀಕರ ಅಪಘಾತ ; ಡಿವೈಡರ್ ಹ...
11-12-25 12:14 pm
Transport Minister Ramalinga Reddy: ಆರ್ಟಿಒ...
10-12-25 09:40 pm
ಬೆಂಗಳೂರಿನಲ್ಲಿ ರಸ್ತೆ ಅಪಘಾತ ; ಆರು ತಿಂಗಳ ಹಿಂದಷ್ಟ...
10-12-25 05:37 pm
11-12-25 02:09 pm
HK News Desk
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
ಶಾಲೆಗಳಲ್ಲಿ ವಂದೇ ಮಾತರಂ ಹಾಡುವುದು ಕಡ್ಡಾಯಗೊಳಿಸಿ ;...
10-12-25 10:54 pm
ಭಾರತೀಯರಿಗೆ ಸಂತಸದ ಸುದ್ದಿ ; ಯುನೆಸ್ಕೋ ಪಟ್ಟಿಗೆ ದೀ...
10-12-25 01:17 pm
ಮಾಜಿ ಸಿಜೆಐ ಗವಾಯಿಗೆ ಶೂ ಎಸೆದಿದ್ದ ವಕೀಲ ರಾಕೇಶ್ ಕಿ...
09-12-25 11:03 pm
10-12-25 11:04 pm
Mangalore Correspondent
ಮಂಗಳೂರಿನಲ್ಲಿ ಆರು ತಿಂಗಳಿನಿಂದ ಡ್ರಗ್ಸ್ ಬೇಟೆ ; ಕಾ...
10-12-25 10:51 pm
Bharath Kumdel, Instagram, Target Group: ಭರತ್...
10-12-25 08:45 pm
“Board Exams Made Easier: AI Shikshak Breaks...
10-12-25 06:01 pm
Mangalore Accident, Gowjee Events owner Death...
10-12-25 04:00 pm
10-12-25 10:14 pm
Udupi Correspondent
ಪುತ್ತೂರಿನಲ್ಲಿ ನಿಲ್ಲಿಸಿದ್ದ ಲಾರಿಯಿಂದ 21 ಲಕ್ಷ ಮೌ...
09-12-25 04:33 pm
ಚಿನ್ನ ಅಡವಿಟ್ಟು ನಕಲಿ ಷೇರು ಮಾರುಕಟ್ಟೆಗೆ 31 ಲಕ್ಷ...
09-12-25 11:58 am
ಗಡಿಭಾಗ ತಲಪಾಡಿಯಲ್ಲಿ ಎಂಡಿಎಂಎ ಡ್ರಗ್ಸ್ ಮಾರಾಟ ; ಎರ...
08-12-25 09:29 pm
ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಜಾಲ ; ಸ...
06-12-25 09:52 pm