ಬ್ರೇಕಿಂಗ್ ನ್ಯೂಸ್
26-08-25 09:02 pm HK News Desk ದೇಶ - ವಿದೇಶ
ಹೈದರಾಬಾದ್, ಆ.26: ರಾಜ್ಯದ ಆರ್ಥಿಕ ಪರಿಸ್ಥಿತಿಯ ಬಗ್ಗೆ ಮುಖ್ಯಮಂತ್ರಿ ರೇವಂತ್ ರೆಡ್ಡಿ ಮತ್ತೊಮ್ಮೆ ನಿರಾಶೆ ವ್ಯಕ್ತಪಡಿಸಿದ್ದಾರೆ. ರಾಜ್ಯದ ಖಜಾನೆ ಬತ್ತಿ ಹೋಗಿದೆ. ಬಡವರಿಗೆ ಹಂಚಲು ಭೂಮಿಯೂ ಇಲ್ಲ ಎಂದು ಹೇಳಿದ್ದಾರೆ. ಇದಕ್ಕೆಲ್ಲಾ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳೇ ಕಾರಣ ಎಂದು ರಾಜಕೀಯ ಪಂಡಿತರು ವಿಶ್ಲೇಷಿಸಿದ್ದಾರೆ.
ಹೈದರಾಬಾದ್ನಲ್ಲಿನ ಉಸ್ಮಾನಿಯಾ ವಿಶ್ವವಿದ್ಯಾಲಯದ ಹೊಸ ಹಾಸ್ಟೆಲ್ ಉದ್ಘಾಟನೆ ಮತ್ತು ವಿವಿಧ ಕಟ್ಟಡಗಳಿಗೆ ಶಿಲಾನ್ಯಾಸ ಮಾಡಿದ ಬಳಿಕ ಮಾತನಾಡಿದ ಅವರು, "ನಾನು ನಿಮಗೆ ರಾಜ್ಯದ ನಿಜವಾದ ಪರಿಸ್ಥಿತಿಯನ್ನು ಹೇಳುತ್ತೇನೆ. ಬಡವರಿಗೆ ವಿತರಿಸಲು ನನ್ನ ಬಳಿ ಭೂಮಿಯೂ ಇಲ್ಲ. ನಾನು ನಿಮ್ಮನ್ನು ಶ್ರೀಮಂತರನ್ನಾಗಿ ಮಾಡಲು ಬಯಸಿದ್ದರೂ, ಸರ್ಕಾರದ ಖಜಾನೆ ಖಾಲಿಯಾಗಿದೆ" ಎಂದರು.
ತೆಲಂಗಾಣವು ದೇಶದಲ್ಲಿ ಅಭಿವೃದ್ಧಿ ಹೊಂದಿದ ರಾಜ್ಯಗಳಲ್ಲಿ ಒಂದಾಗಿದ್ದರೂ, ಆರ್ಥಿಕ ಸ್ಥಿತಿ ಕೆಟ್ಟದಾಗಿದೆ. ಬಡವರಿಗಾಗಿ ಸರ್ಕಾರ ಹಲವು ಯೋಜನೆಗಳನ್ನು (ಗ್ಯಾರಂಟಿ) ಜಾರಿ ಮಾಡಿದೆ. ಆದರೆ, ವಿತ್ತೀಯ ಸ್ಥಿತಿ ಗಂಭೀರವಾಗಿದೆ ಎಂದು ಅವರು ಒಪ್ಪಿಕೊಂಡರು.
ಶಿಕ್ಷಣ ಕೊಡಿಸುವೆ, ಬೇರೆ ಕಷ್ಟಕಷ್ಟ:
ಮುಂದುವರಿದು ಶಿಕ್ಷಣದ ಮಹತ್ವದ ಬಗ್ಗೆ ಮಾತನಾಡಿದ ಸಿಎಂ ರೇವಂತ್ ರೆಡ್ಡಿ ಅವರು, "ನಿಮಗೆ ನಾನು ಗುಣಮಟ್ಟದ ಶಿಕ್ಷಣವನ್ನು ನೀಡಲು ಮಾತ್ರ ಶಕ್ತನಾಗಿದ್ದೇನೆ. ಇದರಿಂದ ಮಾತ್ರ ನಾವು ಬೆಳೆಯಲು ಸಾಧ್ಯ. ಉಸ್ಮಾನಿಯಾ ವಿವಿಯನ್ನು ಆಕ್ಸ್ಫರ್ಡ್ ವಿಶ್ವವಿದ್ಯಾಲಯದ ಮಾದರಿಗೆ ಕೊಂಡೊಯ್ಯಲು ಎಲ್ಲ ಪ್ರಯತ್ನ ನಡೆಸಲಾಗುವುದು" ಎಂದು ಅಭಯ ನೀಡಿದರು.
"ತೆಲಂಗಾಣದಲ್ಲಿ 1.5 ಕೋಟಿ ಎಕರೆ ಕೃಷಿ ಭೂಮಿ ಇದ್ದು, ಅದರಲ್ಲಿ ಶೇಕಡಾ 96ರಷ್ಟು ಸಣ್ಣ ಮತ್ತು ಅತಿ ಸಣ್ಣ ರೈತರು ತಲಾ ಒಂದರಿಂದ ಮೂರು ಎಕರೆ ಭೂಮಿ ಹೊಂದಿದ್ದಾರೆ. ಸರ್ಕಾರ ಭೂ ಮಿತಿ ಕಾಯ್ದೆ ಜಾರಿಗೆ ತಂದರೂ ಸಹ, ಹೆಚ್ಚುವರಿ ಭೂಮಿಯನ್ನು ಪಡೆಯಲು ಸಾಧ್ಯವಿಲ್ಲ. ಆದ್ದರಿಂದ ರಾಜ್ಯದ ಜನರಿಗೆ ನಾನು ನೀಡಬಹುದಾದ ಏಕೈಕ ಸಂಪನ್ಮೂಲವೆಂದರೆ ಗುಣಮಟ್ಟದ ಶಿಕ್ಷಣ ಮಾತ್ರ" ಎಂದರು.
"ತೆಲಂಗಾಣ ಅಭಿವೃದ್ಧಿ ಹೊಂದಿದ ರಾಜ್ಯಗಳಲ್ಲಿ ಒಂದು. ಕೇಂದ್ರ ಸರ್ಕಾರದ ಅಂಕಿ ಅಂಶಗಳ ಪ್ರಕಾರ, ಸರ್ಕಾರಿ ಸ್ವಾಮ್ಯದ ಆದಾಯ, ಕಾನೂನು-ಸುವ್ಯವಸ್ಥೆ ಮತ್ತು ಪೊಲೀಸ್ ವ್ಯವಸ್ಥೆಯಲ್ಲಿ ಮುಂಚೂಣಿಯಲ್ಲಿದೆ ಎಂದು ಗುರುತಿಸಿದೆ. ಕಳೆದ 20 ತಿಂಗಳುಗಳಲ್ಲಿ ಖಾಸಗಿ ವಲಯದಲ್ಲಿ ರಾಜ್ಯವು 1.5 ಲಕ್ಷ ಯುವಕರಿಗೆ ಉದ್ಯೋಗ ನೀಡಿದೆ" ಎಂದು ಹೇಳಿದರು.
ಇದಕ್ಕೂ ಮೊದಲು ಮೇ ತಿಂಗಳಲ್ಲಿ ಸಭೆಯೊಂದರಲ್ಲಿ ರಾಜ್ಯದ ಖಜಾನೆ ಬರಿದಾದ ಬಗ್ಗೆ ಸಿಎಂ ತಿಳಿಸಿದ್ದರು. ನಮ್ಮ ಆರ್ಥಿಕ ಸ್ಥಿತಿಯು ನಿರಾಶಾದಾಯಕವಾಗಿದೆ. ವಿಶ್ವಾಸದ ಕೊರತೆಯಿಂದ ಬ್ಯಾಂಕ್ಗಳು ಹೊಸ ಸಾಲ ಮಂಜೂರು ಮಾಡಲೂ ಹಿಂದೇಟು ಹಾಕುತ್ತಿವೆ. ಅಭಿವೃದ್ಧಿ ಯೋಜನೆಗಳಿಗೆ ಅಡ್ಡಿಯಾಗುತ್ತಿದೆ ಎಂದು ದೈನೇಸಿ ಸ್ಥಿತಿಯನ್ನು ಒಪ್ಪಿಕೊಂಡಿದ್ದರು.
Telangana Chief Minister Revanth Reddy has once again expressed deep concern over the state’s worsening financial condition, admitting that the government coffers are empty and even land to distribute to the poor is unavailable.
11-12-25 12:44 pm
HK News Desk
ಬೆಂಗಳೂರು ದೇವನಹಳ್ಳಿ ಬಳಿ ಭೀಕರ ಅಪಘಾತ ; ಡಿವೈಡರ್ ಹ...
11-12-25 12:14 pm
Transport Minister Ramalinga Reddy: ಆರ್ಟಿಒ...
10-12-25 09:40 pm
ಬೆಂಗಳೂರಿನಲ್ಲಿ ರಸ್ತೆ ಅಪಘಾತ ; ಆರು ತಿಂಗಳ ಹಿಂದಷ್ಟ...
10-12-25 05:37 pm
ಅಧಿಕಾರ ಹಂಚಿಕೆ ಬಗ್ಗೆ ಗೊಂದಲ ; ಯಾರೂ ಆ ಬಗ್ಗೆ ಮಾತನ...
10-12-25 12:58 pm
11-12-25 02:09 pm
HK News Desk
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
ಶಾಲೆಗಳಲ್ಲಿ ವಂದೇ ಮಾತರಂ ಹಾಡುವುದು ಕಡ್ಡಾಯಗೊಳಿಸಿ ;...
10-12-25 10:54 pm
ಭಾರತೀಯರಿಗೆ ಸಂತಸದ ಸುದ್ದಿ ; ಯುನೆಸ್ಕೋ ಪಟ್ಟಿಗೆ ದೀ...
10-12-25 01:17 pm
ಮಾಜಿ ಸಿಜೆಐ ಗವಾಯಿಗೆ ಶೂ ಎಸೆದಿದ್ದ ವಕೀಲ ರಾಕೇಶ್ ಕಿ...
09-12-25 11:03 pm
10-12-25 11:04 pm
Mangalore Correspondent
ಮಂಗಳೂರಿನಲ್ಲಿ ಆರು ತಿಂಗಳಿನಿಂದ ಡ್ರಗ್ಸ್ ಬೇಟೆ ; ಕಾ...
10-12-25 10:51 pm
Bharath Kumdel, Instagram, Target Group: ಭರತ್...
10-12-25 08:45 pm
“Board Exams Made Easier: AI Shikshak Breaks...
10-12-25 06:01 pm
Mangalore Accident, Gowjee Events owner Death...
10-12-25 04:00 pm
10-12-25 10:14 pm
Udupi Correspondent
ಪುತ್ತೂರಿನಲ್ಲಿ ನಿಲ್ಲಿಸಿದ್ದ ಲಾರಿಯಿಂದ 21 ಲಕ್ಷ ಮೌ...
09-12-25 04:33 pm
ಚಿನ್ನ ಅಡವಿಟ್ಟು ನಕಲಿ ಷೇರು ಮಾರುಕಟ್ಟೆಗೆ 31 ಲಕ್ಷ...
09-12-25 11:58 am
ಗಡಿಭಾಗ ತಲಪಾಡಿಯಲ್ಲಿ ಎಂಡಿಎಂಎ ಡ್ರಗ್ಸ್ ಮಾರಾಟ ; ಎರ...
08-12-25 09:29 pm
ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಜಾಲ ; ಸ...
06-12-25 09:52 pm