ಬ್ರೇಕಿಂಗ್ ನ್ಯೂಸ್
10-08-20 03:08 pm Headline Karnataka News Network ದೇಶ - ವಿದೇಶ
ಕೋಲ್ಕತ್ತಾ , ಆಗಸ್ಟ್ 10: ಕೊರೊನಾದಿಂದ ಸಾವನ್ನಪ್ಪಿದವರ ದೇಹವನ್ನು ನೋಡಲು ಖಾಸಗಿ ಆಸ್ಪತ್ರೆ 51 ಸಾವಿರ ರೂ. ನೀಡಲುವಂತೆ ಬೇಡಿಕೆ ಇಟ್ಟಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಕೊರೊನಾ ಸೋಂಕಿನಿಂದಾಗಿ ನಮ್ಮ ತಂದೆ ಹರಿ ಗುಪ್ತಾ ಶನಿವಾರ ಮಧ್ಯರಾತ್ರಿ ಸಾವನ್ನಪ್ಪಿದ್ದು, ಈ ಕುರಿತು ಖಾಸಗಿ ಆಸ್ಪತ್ರೆಯವರು ಕುಟುಂಬಸ್ಥರಿಗೆ ಯಾವುದೇ ಮಾಹಿತಿ ನೀಡಿಲ್ಲ. ಅಲ್ಲದೆ ಹಣದ ಬೇಡಿಕೆ ಇಟ್ಟಿದ್ದಾರೆ ಎಂದು ಸಾಗರ್ ಗುಪ್ತಾ ತಿಳಿಸಿದ್ದಾರೆ.
ಭಾನುವಾರ ಮಧ್ಯಾಹ್ನ ಆಸ್ಪತ್ರೆಯವರು ಕರೆ ಮಾಡಿ ಶನಿವಾರ ಮಧ್ಯರಾತ್ರಿ ನಮ್ಮ ತಮದೆ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದರು. ರಾತ್ರಿಯೇ ಏಕೆ ನಮಗೆ ಹೇಳಲಿಲ್ಲ ಎಂದು ಆಸ್ಪತ್ರೆಯವನ್ನು ಪ್ರಶ್ನಿಸಿದರೆ, ಸಂಪರ್ಕದ ಮಾಹಿತಿ ಇರಲಿಲ್ಲ ಎಂದು ಹೇಳಿದರು ಎಂದು ಸಾಗರ್ ಆರೋಪಿಸಿದ್ದಾರೆ.
ಸುದ್ದಿ ತಿಳಿಯುತ್ತಿದ್ದಂತೆ ಕುಟುಂಬಸ್ಥರು ಆಸ್ಪತ್ರೆಗೆ ತೆರಳಿದ್ದು, ಆಗ ದೇಹವನ್ನು ಅಂತ್ಯಸಂಸ್ಕಾರಕ್ಕೆ ಕಳುಹಿಸಲಾಗಿದೆ ಎಂದು ಹೇಳಿದ್ದಾರೆ. ನಂತರ ಕುಟುಂಬಸ್ಥರು ಶಿಬ್ಪುರ್ ಸ್ಮಶಾಣಕ್ಕೆ ತೆರಳಿದ್ದು, ಈ ವೇಳೆ ಸಿಬ್ಬಂದಿ ದೇಹವನ್ನು ನೋಡಲು 51 ಸಾವಿರ ರೂ. ಪಾವತಿಸುವಂತೆ ತಿಳಿಸಿದರು. ನಂತರ ಕುಟುಂಬಸ್ಥರು ಮಾತನಾಡಿ ಈ ಹಣವನ್ನು 31 ಸಾವಿರಕ್ಕೆ ಇಳಿಸಿದ್ದಾರೆ. ಆದರೆ ಈ ಹಣವನ್ನು ಕುಟುಂಬಸ್ಥರಿಗೆ ಪಾವತಿಸಲು ಸಾಧ್ಯವಾಗಿಲ್ಲ. ಹೀಗಾಗಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.
ಪೊಲೀಸ್ ಅಧಿಕಾರಿಯೊಬ್ಬರು ಸ್ಥಳಕ್ಕಾಗಮಿಸಿದ್ದು, ಈ ವೇಳೆ ಪೊಲೀಸರು ಸಹ ಮನವಿ ಮಾಡಿಕೊಂಡಿದ್ದಾರೆ. ಆದರೆ ಆಸ್ಪತ್ರೆ ಸಿಬ್ಬಂದಿ ಇದಾವುದನ್ನೂ ಕೇಳದೆ ಮೇಲಾಧಿಕಾರಿಗಳನ್ನು ಸಂಪರ್ಕಿಸುವಂತೆ ತಿಳಿಸಿದ್ದಾರೆ. ಈ ವೇಳೆ ಕುಟುಂಬಸ್ಥರು ಘಟನೆಯನ್ನು ಮೊಬೈಲ್ನಲ್ಲಿ ಸೆರೆ ಹಿಡಿದಿದ್ದು, ಇದನ್ನು ಕಂಡ ಆಸ್ಪತ್ರೆ ಸಿಬ್ಬಂದಿ ಕುಟುಂಬಸ್ಥರ ಮೊಬೈಲ್ ಕಸಿದುಕೊಂಡಿದ್ದಾರೆ.
ಅಂತಿಮವಾಗಿ ಕುಟುಂಬಸ್ಥರಿಗೆ ಮೃತ ದೇಹವನ್ನು ನೋಡಲು ಬಿಡದೆ ಅಂತ್ಯಸಂಸ್ಕಾರ ಮಾಡಿದ್ದಾರೆ. ಈಗಲೂ ಆಸ್ಪತ್ರೆ ಸಿಬ್ಬಂದಿ ಸುಳ್ಳು ಹೇಳಿದ್ದು, ಯಾವುದೇ ಕುಟುಂಬ ಸದಸ್ಯರು ಸಂಪರ್ಕಕ್ಕೆ ಬಾರದ ಕಾರಣ ನಾವೇ ಅಂತ್ಯಸಂಸ್ಕಾರ ಮಾಡಿದ್ದೇವೆ ಎಂದು ವಾದಿಸಿದ್ದಾರೆ. ಇದೀಗ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಲು ಯೋಚಿಸಿದ್ದಾರೆ.
11-03-26 07:16 pm
HK News Staffer
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
ಲಕ್ಕುಂಡಿಯಲ್ಲಿ ಸಿಕ್ಕ ನಿಧಿ 500 ರಿಂದ 600 ವರ್ಷ ಹಳ...
11-03-26 12:57 pm
ಶಿಕ್ಷಕರಿಗೆ ಬೀದಿ ನಾಯಿ ನಿಯಂತ್ರಣ ಜವಾಬ್ದಾರಿ ಕೊಟ್ಟ...
11-03-26 11:48 am
LPG ಸಿಲಿಂಡರ್ ಪೂರೈಕೆ ಸ್ಥಗಿತ ; ಬೆಂಗಳೂರಿನಲ್ಲಿ ಹಲ...
10-03-26 01:47 pm
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
12-03-26 08:33 am
HK News Staffer
Gas News, Mangalore: ಗಲ್ಫ್ ಯುದ್ಧಕ್ಕೆ ಗ್ಯಾಸ್ ಟ...
11-03-26 09:15 pm
ಬಾಡಿಗೆ ಮನೆಯಲ್ಲಿ ಡ್ರಗ್ಸ್ ಮಾರಾಟ ; ಬಂಟ್ವಾಳದ ನೇರಳ...
11-03-26 07:22 pm
ಗ್ಯಾಸ್ ಬಿಕ್ಕಟ್ಟು ; ಕುಕ್ಕೆ ಸುಬ್ರಹ್ಮಣ್ಯಕ್ಕೆ ತಟ್...
11-03-26 06:26 pm
ಕುತ್ತಾರಿನಲ್ಲಿ ಹಿಟ್ ಆಂಡ್ ರನ್ ಪ್ರಕರಣ ; ಬೈಕ್ ಧಾ...
11-03-26 03:25 pm
12-03-26 12:12 pm
HK News Staffer
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm