ಬ್ರೇಕಿಂಗ್ ನ್ಯೂಸ್
29-08-25 12:50 pm HK News Desk ದೇಶ - ವಿದೇಶ
ನವದೆಹಲಿ, ಆ.29 : ತಿಂಗಳ ಹಿಂದೆ ತಾನು ನೀಡಿದ್ದ ಹೇಳಿಕೆಯೊಂದನ್ನು ಆಧರಿಸಿ ಪ್ರಧಾನಿ ನರೇಂದ್ರ ಮೋದಿಯವರ ನಿವೃತ್ತಿಯ ಬಗ್ಗೆ ಹಬ್ಬಿದ್ದ ಊಹಾಪೋಹಗಳಿಗೆ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗ್ವತ್ ತೆರೆ ಎಳೆದಿದ್ದಾರೆ. ಸಂಘದಲ್ಲಿ 75 ವರ್ಷ ದಾಟಿದ ನಾಯಕರಿಗೆ ನಿವೃತ್ತಿ ನೀಡುವ ನಿಯಮ ಇಲ್ಲ ಎಂದು ಸ್ಪಷ್ಟಪಡಿಸುವ ಮೂಲಕ ಮೋದಿಯವರು ರಾಜಕೀಯದಲ್ಲಿ ಸಕ್ರಿಯರಾಗಿ ಮುಂದುವರಿಯಲು ಅಡ್ಡಿ ಇಲ್ಲ ಎಂಬ ಸಂದೇಶ ರವಾನಿಸಿದ್ದಾರೆ.
ಇದರೊಂದಿಗೆ ಬಿಜೆಪಿ ಮತ್ತು ಬಿಜೆಪಿಯ ಮಾರ್ಗದರ್ಶಕ ಸಂಸ್ಥೆ ರಾಷ್ಟ್ರೀಯ ಸ್ವಯಂಸೇವಕ ಸಂಘದಲ್ಲಿ 75 ವರ್ಷ ಆದ ನಾಯಕರಿಗೆ ನಿವೃತ್ತಿ ನೀಡುವ ಅಲಿಖಿತ ನಿಯಮವಿದೆ ಎಂಬ ಚರ್ಚೆಗಳಿಗೆ ಅವರು ಪೂರ್ಣ ವಿರಾಮ ಹಾಕಿದ್ದಾರೆ. ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಮಾನೋತ್ಸವ ಕಾರ್ಯಕ್ರಮದ ಉಪನ್ಯಾಸದ ಬಳಿಕ ಮಾತನಾಡಿದ ಮೋಹನ್ ಭಾಗ್ವತ್ 75 ವರ್ಷವಾದಾಗ ನಾನು ನಿವೃತ್ತಿಯಾಗುತ್ತೇನೆ ಅಥವಾ ಬೇರೆಯವರು ನಿವೃತ್ತಿಯಾಗಬೇಕು ಎಂದು ನಾನು ಎಂದಿಗೂ ಹೇಳಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ನಾವೆಲ್ಲರೂ ಸಂಘದ ಸ್ವಯಂಸೇವಕರು. ನಮಗೆ ವಹಿಸಿದ ಜವಾಬ್ದಾರಿಯನ್ನು ನಾವು ನಿರ್ವಹಿಸುತ್ತೇವೆ. ನಾನು 80 ವರ್ಷವಾದರೂ ಸಂಘವನ್ನು ಮುನ್ನಡೆಸುತ್ತೇನೆ ಎಂದು ತಿಳಿಸಿದರು. ಪ್ರಧಾನಿ ನರೇಂದ್ರ ಮೋದಿಯವರು 75ನೇ ವಯಸ್ಸಿನಲ್ಲಿ ನಿವೃತ್ತಿಯಾಗುತ್ತಾರೆ ಎಂಬ ವದಂತಿಯನ್ನು ಬಿಜೆಪಿ ಕೂಡ ತಳ್ಳಿ ಹಾಕಿದೆ. 75 ವರ್ಷದ ಮಿತಿ ಎಂಬ ನಿಯಮವೇ ಇಲ್ಲ ಎಂದು ಈಗಾಗಲೇ ಹಲವು ಬಾರಿ ಪಕ್ಷ ಸ್ಪಷ್ಟಪಡಿಸಿದೆ. ಇದಕ್ಕೆ ಉದಾಹರಣೆಯಾಗಿ, ಕೇಂದ್ರ ಸಚಿವ ಸಂಪುಟದಲ್ಲಿ 80 ವರ್ಷದ ಜಿತನ್ ರಾಮ್ ಮಾಂಝಿ ಅವರು ಸಚಿವರಾಗಿರುವುದನ್ನೂ ಬಿಜೆಪಿ ಉಲ್ಲೇಖಿಸಿದೆ.
ಮೂರು ಮಕ್ಕಳನ್ನು ಹೊಂದುವಂತೆ ಕರೆ
ದೇಶದ ಎಲ್ಲ ನಾಗರಿಕರೂ ಕನಿಷ್ಠ ಮೂರು ಮಕ್ಕಳನ್ನು ಪಡೆಯಬೇಕು. ನಾವಿಬ್ಬರು, ನಮಗೆ ಮೂವರು' ಎಂಬ ಸೂತ್ರವನ್ನು ಪಾಲಿಸುವುದು ಒಳ್ಳೆಯದು ಎಂದು ಮೋಹನ್ ಭಾಗ್ವತ್ ಹೇಳಿದ್ದಾರೆ. ದೇಶದಲ್ಲಿ ಜನಸಂಖ್ಯಾ ಕುಸಿತ ತಡೆಗಟ್ಟಿ ಅದನ್ನು ಸ್ಥಿರಗೊಳಿಸಲು ಮೂರು ಮಕ್ಕಳನ್ನು ಹೊಂದುವುದು ಅಗತ್ಯ ಎಂದು ಅವರು ತಿಳಿಸಿದ್ದಾರೆ.
RSS chief Mohan Bhagwat has put an end to speculations regarding Prime Minister Narendra Modi’s retirement, clarifying that he never stated Modi must step down after turning 75. Addressing discussions sparked by one of his earlier remarks, Bhagwat made it clear that there is no such rule in the RSS requiring leaders to retire after the age of 75.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm