ಬ್ರೇಕಿಂಗ್ ನ್ಯೂಸ್
29-08-25 01:47 pm HK News Desk ದೇಶ - ವಿದೇಶ
ಟೋಕಿಯೋ, ಆ.29 : ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಕ್ರವಾರ ಬೆಳಗ್ಗೆ ಜಪಾನ್ಗೆ ಭೇಟಿ ನೀಡಿದ್ದು, ಅಲ್ಲಿನ ಜಪಾನ್ ಸಮುದಾಯವು ಗಾಯತ್ರಿ ಮಂತ್ರದ ಉಚ್ಛಾರದೊಂದಿಗೆ ಮೋದಿಯವರನ್ನು ಸ್ವಾಗತಿಸಿದೆ. ಗಾಯತ್ರಿ ಮಂತ್ರದ ಜಪದೊಂದಿಗೆ ಟೋಕಿಯೋದಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಸಾಂಸ್ಕೃತಿಕವಾಗಿ ಸ್ವಾಗತ ಕೋರಲಾಯಿತು. ಅನೇಕ ಜಾನಪದ ಹಾಗೂ ಮಂತ್ರ, ಶ್ಲೋಕಗಳ ಮೂಲಕ ಜಪಾನಿಯರು ಮೋದಿಯವರನ್ನು ತಮ್ಮ ದೇಶಕ್ಕೆ ಬರಮಾಡಿಕೊಂಡರು.
ಟೋಕಿಯೋ ವಿಮಾನ ನಿಲ್ದಾಣದಲ್ಲಿ ಜಪಾನಿನ ಕಲಾವಿದರು ಸಾಂಸ್ಕೃತಿಕ ಕಾರ್ಯಕ್ರಮ ಪ್ರದರ್ಶಿಸಿದ್ದು, ಅಲ್ಲಿನ ಭಾರತೀಯ ವಲಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿ ಮೋದಿಯವರನ್ನು ಬರಮಾಡಿಕೊಂಡರು. ಜಪಾನ್ ಭೇಟಿಗೂ ಮುನ್ನ ಪ್ರಧಾನಿಯವರು ಈ ಭೇಟಿಯು ಭಾರತ ಮತ್ತು ಜಪಾನ್ ನಡುವಿನ ಬಾಂಧವ್ಯ ಬಲಪಡಿಸುವ ಗುರಿ ಹೊಂದಿದೆ ಎಂದು ಹೇಳಿದ್ದು, ಜಪಾನ್ ಭೇಟಿ ಎರಡು ದಿನ ನಿಗದಿಯಾಗಿದೆ. ಈ ವೇಳೆ ಜಪಾನ್ ಪ್ರಧಾನಿ ಇಶಿಬಾ ಅವರೊಂದಿಗೆ ಪ್ರಧಾನಿಯವರು ಮಾತುಕತೆ ನಡೆಸಲಿದ್ದಾರೆ.








ಜಪಾನ್ ಭೇಟಿ ಮೂಲಕ ದೇಶದ ಬೆಳವಣಿಗೆಗೆ ಪೂರಕವಾಗಿ ಜಂಟಿ ಸಹಯೋಗದಲ್ಲಿ ಕಾರ್ಯಾಚರಣೆ ಮಾಡುವುದು, ಆರ್ಥಿಕ ಮತ್ತು ಹೂಡಿಕೆ ಸಂಬಂಧಗಳ ವ್ಯಾಪ್ತಿ ಮತ್ತು ಮಹತ್ವಾಕಾಂಕ್ಷೆಯನ್ನು ವಿಸ್ತರಿಸುವುದು, ಎಐ ಮತ್ತು ಸೆಮಿ ಕಂಡಕ್ಟರ್ಗಳು ಸೇರಿದಂತೆ ಹೊಸ ಮತ್ತು ಉದಯೋನ್ಮುಖ ತಂತ್ರಜ್ಞಾನಗಳಲ್ಲಿ ಸಹಕಾರವನ್ನು ಹೆಚ್ಚಿಸುವ ಉದ್ದೇಶ ಹೊಂದಲಾಗಿದೆ.
ಜಪಾನ್ ಬಳಿಕ ಚೀನಾಕ್ಕೆ ಭೇಟಿ
ಜಪಾನ್ ಭೇಟಿ ಬಳಿಕ ಪ್ರಧಾನಿ ಮೋದಿಯವರು ಚೀನಾಕ್ಕೆ ಭೇಟಿ ನೀಡಲಿದ್ದಾರೆ. ಆಗಸ್ಟ್ 31 ಮತ್ತು ಸೆಪ್ಟೆಂಬರ್ 1ರಂದು ಅವರು ಟಿಯಾಂಜಿನ್ನಲ್ಲಿ ನಡೆಯುವ ಎಸ್ಸಿಒ (ಶಾಂಘೈ ಕಾರ್ಪೊರೇಷನ್ ಆರ್ಗನೈಸೇಶನ್) ಶೃಂಗಸಭೆಯಲ್ಲಿ ಭಾಗವಹಿಸಲು ಚೀನಾಕ್ಕೆ ತೆರಳಲಿದ್ದಾರೆ. ಭಾರತಕ್ಕೆ ಅಮೆರಿಕ ಸುಂಕ ಬೆದರಿಕೆ ಹಿನ್ನೆಲೆಯಲ್ಲಿ ಚೀನಾ ಅಧ್ಯಕ್ಷರೇ ಮೋದಿಯವರನ್ನು ಸ್ವಾಗತಿಸಿ ಪಾಶ್ಚಾತ್ಯ ದೇಶಗಳಿಗೆ ಸಂದೇಶ ನೀಡುವ ನಿರೀಕ್ಷೆಯಿದೆ.
Prime Minister Narendra Modi received a grand cultural welcome upon his arrival in Japan on Friday morning, with the local Indian diaspora and Japanese community chanting the Gayatri Mantra at the Tokyo airport. The recitation of traditional mantras and shlokas created a spiritual ambiance as Japan warmly embraced the Indian leader.
11-12-25 12:44 pm
HK News Desk
ಬೆಂಗಳೂರು ದೇವನಹಳ್ಳಿ ಬಳಿ ಭೀಕರ ಅಪಘಾತ ; ಡಿವೈಡರ್ ಹ...
11-12-25 12:14 pm
Transport Minister Ramalinga Reddy: ಆರ್ಟಿಒ...
10-12-25 09:40 pm
ಬೆಂಗಳೂರಿನಲ್ಲಿ ರಸ್ತೆ ಅಪಘಾತ ; ಆರು ತಿಂಗಳ ಹಿಂದಷ್ಟ...
10-12-25 05:37 pm
ಅಧಿಕಾರ ಹಂಚಿಕೆ ಬಗ್ಗೆ ಗೊಂದಲ ; ಯಾರೂ ಆ ಬಗ್ಗೆ ಮಾತನ...
10-12-25 12:58 pm
11-12-25 02:09 pm
HK News Desk
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
ಶಾಲೆಗಳಲ್ಲಿ ವಂದೇ ಮಾತರಂ ಹಾಡುವುದು ಕಡ್ಡಾಯಗೊಳಿಸಿ ;...
10-12-25 10:54 pm
ಭಾರತೀಯರಿಗೆ ಸಂತಸದ ಸುದ್ದಿ ; ಯುನೆಸ್ಕೋ ಪಟ್ಟಿಗೆ ದೀ...
10-12-25 01:17 pm
ಮಾಜಿ ಸಿಜೆಐ ಗವಾಯಿಗೆ ಶೂ ಎಸೆದಿದ್ದ ವಕೀಲ ರಾಕೇಶ್ ಕಿ...
09-12-25 11:03 pm
10-12-25 11:04 pm
Mangalore Correspondent
ಮಂಗಳೂರಿನಲ್ಲಿ ಆರು ತಿಂಗಳಿನಿಂದ ಡ್ರಗ್ಸ್ ಬೇಟೆ ; ಕಾ...
10-12-25 10:51 pm
Bharath Kumdel, Instagram, Target Group: ಭರತ್...
10-12-25 08:45 pm
“Board Exams Made Easier: AI Shikshak Breaks...
10-12-25 06:01 pm
Mangalore Accident, Gowjee Events owner Death...
10-12-25 04:00 pm
10-12-25 10:14 pm
Udupi Correspondent
ಪುತ್ತೂರಿನಲ್ಲಿ ನಿಲ್ಲಿಸಿದ್ದ ಲಾರಿಯಿಂದ 21 ಲಕ್ಷ ಮೌ...
09-12-25 04:33 pm
ಚಿನ್ನ ಅಡವಿಟ್ಟು ನಕಲಿ ಷೇರು ಮಾರುಕಟ್ಟೆಗೆ 31 ಲಕ್ಷ...
09-12-25 11:58 am
ಗಡಿಭಾಗ ತಲಪಾಡಿಯಲ್ಲಿ ಎಂಡಿಎಂಎ ಡ್ರಗ್ಸ್ ಮಾರಾಟ ; ಎರ...
08-12-25 09:29 pm
ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಜಾಲ ; ಸ...
06-12-25 09:52 pm