ಬ್ರೇಕಿಂಗ್ ನ್ಯೂಸ್
31-08-25 01:04 pm HK News Desk ದೇಶ - ವಿದೇಶ
ಕಾಸರಗೋಡು, ಆ.31 : ಕಣ್ಣೂರು ಜಿಲ್ಲೆಯ ಕಣ್ಣಾಪುರಂ ಎಂಬಲ್ಲಿನ ಮನೆಯೊಂದರಲ್ಲಿ ಶನಿವಾರ ಮುಂಜಾನೆ 2 ಗಂಟೆ ಸುಮಾರಿಗೆ ಭಾರೀ ಸ್ಫೋಟ ಸಂಭವಿಸಿದ್ದು, ವ್ಯಕ್ತಿಯೊಬ್ಬ ಛಿದ್ರ ಛಿದ್ರಗೊಂಡಿದ್ದಾನೆ. ಇನ್ನೊಬ್ಬ ವ್ಯಕ್ತಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ಸೇರಿದ್ದಾನೆ. ಕಣ್ಣೂರು ನಗರದ ಚಾಲಾಡ್ ನಿವಾಸಿ ಮುಹಮ್ಮದ್ ಆಶಮ್ ಮೃತಪಟ್ಟವರೆಂದು ಗುರುತು ಪತ್ತೆ ಮಾಡಲಾಗಿದೆ.
ಘಟನೆಯಲ್ಲಿ ಮನೆ ಸಂಪೂರ್ಣ ಧ್ವಂಸಗೊಂಡಿದ್ದು, ಮೃತಪಟ್ಟ ವ್ಯಕ್ತಿಯ ದೇಹ ಛಿದ್ರಗೊಂಡಿದೆ. ಮೂವರು ವ್ಯಕ್ತಿಗಳು ಬಾಡಿಗೆ ಪಡೆದಿದ್ದ ಮನೆಯಲ್ಲಿ ಈ ಘಟನೆ ನಡೆದಿದ್ದು, ಮನೆಯೊಳಗೆ ಬಾಂಬ್ ನಿರ್ಮಾಣ ಸಾಮಗ್ರಿಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ಸಂಬಂಧಿಸಿ ಅನು ಮಲಿಕ್ ಎಂಬಾತನನ್ನು ಕಾಞಂಗಾಡ್ನಲ್ಲಿ ಪೊಲೀಸರು ಬಂಧಿಸಿದ್ದಾರೆ.

/newsdrum-in/media/media_files/2025/08/30/kannur-blast-2025-08-30-10-21-46.jpg)



ಸ್ಫೋಟ ನಡೆದ ಮನೆಯನ್ನು ಅನು ಮಲಿಕ್ ಬಾಡಿಗೆಗೆ ಪಡೆದಿದ್ದು, ಮೃತ ವ್ಯಕ್ತಿ ಈತನ ಸಂಬಂಧಿ. ಇವರು ಪೆರಿಯಾರಂನಲ್ಲಿ ಬಿಡಿ ಭಾಗಗಳ ಅಂಗಡಿ ಹೊಂದಿದ್ದು ವ್ಯಾಪಾರ ಮಾಡುತ್ತಿದ್ದರು ಎಂದು ಮನೆಯ ಮಾಲೀಕ ಗೋವಿಂದನ್ ತಿಳಿಸಿದ್ದಾರೆ. ಆಸುಪಾಸಿನ ಮನೆ, ಕಟ್ಟಡಗಳಲ್ಲಿಯೂ ಬಿರುಕು ಉಂಟಾಗಿದ್ದು ಆ ಮನೆ ಪೂರ್ತಿಯಾಗಿ ನೆಲಸಮಗೊಂಡಿದೆ. ಸ್ಥಳದಲ್ಲಿ ಪಟಾಕಿ ದಾಸ್ತಾನು ಮಾದರಿಯ ವಸ್ತುಗಳೂ ಪತ್ತೆಯಾಗಿವೆ. ಬಾಂಬ್ ತಯಾರಿ ನಡೆಸುತ್ತಿದ್ದಾಗ ಸ್ಫೋಟಗೊಂಡಿರುವ ಶಂಕೆಯೂ ವ್ಯಕ್ತವಾಗಿದೆ.
ಅನು ಮಲಿಕ್ ಈ ಹಿಂದೆಯೂ ಸ್ಫೋಟ ಪ್ರಕರಣದ ಆರೋಪಿಯಾಗಿದ್ದಾನೆ. 2016ರಲ್ಲಿ ಕಣ್ಣೂರಿನ ಪೋಡಿಕುಂಡು ಎಂಬಲ್ಲಿ ಅನು ಮಲಿಕ್ ವಾಸವಿದ್ದ ಎರಡು ಅಂತಸ್ತಿನ ಮನೆಯೊಂದರಲ್ಲಿ ಸ್ಫೋಟ ನಡೆದಿತ್ತು. ಪರಿಸರದ 15 ಮನೆಗಳಿಗೂ ಹಾನಿಯಾಗಿತ್ತು. ಘಟನೆಯಲ್ಲಿ ಮಲಿಕ್ ಪತ್ನಿ, ಮಗು ಸೇರಿ ಹತ್ತು ಮಂದಿ ಗಾಯಗೊಂಡಿದ್ದರು. ಮಲಿಕ್ ಸ್ಥಳೀಯವಾಗಿ ದೇವಸ್ಥಾನಗಳಿಗೆ ಪಟಾಕಿ ದಾಸ್ತಾನುಗಳ ಪೂರೈಕೆ ಮಾಡುತ್ತಿದ್ದರು ಎನ್ನುವ ಮಾಹಿತಿಯೂ ಇದ್ದು ಶುಕ್ರವಾರ ರಾತ್ರಿ ತಡವಾಗಿ ಮನೆಗೆ ಬಂದಿದ್ದರೆಂದು ಸ್ಥಳೀಯರು ತಿಳಿಸಿದ್ದಾರೆ.
A powerful explosion rocked a house in Kannapuram, Kannur district, around 2 a.m. on Saturday, leaving one man dismembered and another critically injured. The deceased has been identified as Muhammad Asham of Chalad, Kannur, while the injured has been hospitalized.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm