ಬ್ರೇಕಿಂಗ್ ನ್ಯೂಸ್
31-08-25 01:04 pm HK News Desk ದೇಶ - ವಿದೇಶ
ಕಾಸರಗೋಡು, ಆ.31 : ಕಣ್ಣೂರು ಜಿಲ್ಲೆಯ ಕಣ್ಣಾಪುರಂ ಎಂಬಲ್ಲಿನ ಮನೆಯೊಂದರಲ್ಲಿ ಶನಿವಾರ ಮುಂಜಾನೆ 2 ಗಂಟೆ ಸುಮಾರಿಗೆ ಭಾರೀ ಸ್ಫೋಟ ಸಂಭವಿಸಿದ್ದು, ವ್ಯಕ್ತಿಯೊಬ್ಬ ಛಿದ್ರ ಛಿದ್ರಗೊಂಡಿದ್ದಾನೆ. ಇನ್ನೊಬ್ಬ ವ್ಯಕ್ತಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ಸೇರಿದ್ದಾನೆ. ಕಣ್ಣೂರು ನಗರದ ಚಾಲಾಡ್ ನಿವಾಸಿ ಮುಹಮ್ಮದ್ ಆಶಮ್ ಮೃತಪಟ್ಟವರೆಂದು ಗುರುತು ಪತ್ತೆ ಮಾಡಲಾಗಿದೆ.
ಘಟನೆಯಲ್ಲಿ ಮನೆ ಸಂಪೂರ್ಣ ಧ್ವಂಸಗೊಂಡಿದ್ದು, ಮೃತಪಟ್ಟ ವ್ಯಕ್ತಿಯ ದೇಹ ಛಿದ್ರಗೊಂಡಿದೆ. ಮೂವರು ವ್ಯಕ್ತಿಗಳು ಬಾಡಿಗೆ ಪಡೆದಿದ್ದ ಮನೆಯಲ್ಲಿ ಈ ಘಟನೆ ನಡೆದಿದ್ದು, ಮನೆಯೊಳಗೆ ಬಾಂಬ್ ನಿರ್ಮಾಣ ಸಾಮಗ್ರಿಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ಸಂಬಂಧಿಸಿ ಅನು ಮಲಿಕ್ ಎಂಬಾತನನ್ನು ಕಾಞಂಗಾಡ್ನಲ್ಲಿ ಪೊಲೀಸರು ಬಂಧಿಸಿದ್ದಾರೆ.

/newsdrum-in/media/media_files/2025/08/30/kannur-blast-2025-08-30-10-21-46.jpg)



ಸ್ಫೋಟ ನಡೆದ ಮನೆಯನ್ನು ಅನು ಮಲಿಕ್ ಬಾಡಿಗೆಗೆ ಪಡೆದಿದ್ದು, ಮೃತ ವ್ಯಕ್ತಿ ಈತನ ಸಂಬಂಧಿ. ಇವರು ಪೆರಿಯಾರಂನಲ್ಲಿ ಬಿಡಿ ಭಾಗಗಳ ಅಂಗಡಿ ಹೊಂದಿದ್ದು ವ್ಯಾಪಾರ ಮಾಡುತ್ತಿದ್ದರು ಎಂದು ಮನೆಯ ಮಾಲೀಕ ಗೋವಿಂದನ್ ತಿಳಿಸಿದ್ದಾರೆ. ಆಸುಪಾಸಿನ ಮನೆ, ಕಟ್ಟಡಗಳಲ್ಲಿಯೂ ಬಿರುಕು ಉಂಟಾಗಿದ್ದು ಆ ಮನೆ ಪೂರ್ತಿಯಾಗಿ ನೆಲಸಮಗೊಂಡಿದೆ. ಸ್ಥಳದಲ್ಲಿ ಪಟಾಕಿ ದಾಸ್ತಾನು ಮಾದರಿಯ ವಸ್ತುಗಳೂ ಪತ್ತೆಯಾಗಿವೆ. ಬಾಂಬ್ ತಯಾರಿ ನಡೆಸುತ್ತಿದ್ದಾಗ ಸ್ಫೋಟಗೊಂಡಿರುವ ಶಂಕೆಯೂ ವ್ಯಕ್ತವಾಗಿದೆ.
ಅನು ಮಲಿಕ್ ಈ ಹಿಂದೆಯೂ ಸ್ಫೋಟ ಪ್ರಕರಣದ ಆರೋಪಿಯಾಗಿದ್ದಾನೆ. 2016ರಲ್ಲಿ ಕಣ್ಣೂರಿನ ಪೋಡಿಕುಂಡು ಎಂಬಲ್ಲಿ ಅನು ಮಲಿಕ್ ವಾಸವಿದ್ದ ಎರಡು ಅಂತಸ್ತಿನ ಮನೆಯೊಂದರಲ್ಲಿ ಸ್ಫೋಟ ನಡೆದಿತ್ತು. ಪರಿಸರದ 15 ಮನೆಗಳಿಗೂ ಹಾನಿಯಾಗಿತ್ತು. ಘಟನೆಯಲ್ಲಿ ಮಲಿಕ್ ಪತ್ನಿ, ಮಗು ಸೇರಿ ಹತ್ತು ಮಂದಿ ಗಾಯಗೊಂಡಿದ್ದರು. ಮಲಿಕ್ ಸ್ಥಳೀಯವಾಗಿ ದೇವಸ್ಥಾನಗಳಿಗೆ ಪಟಾಕಿ ದಾಸ್ತಾನುಗಳ ಪೂರೈಕೆ ಮಾಡುತ್ತಿದ್ದರು ಎನ್ನುವ ಮಾಹಿತಿಯೂ ಇದ್ದು ಶುಕ್ರವಾರ ರಾತ್ರಿ ತಡವಾಗಿ ಮನೆಗೆ ಬಂದಿದ್ದರೆಂದು ಸ್ಥಳೀಯರು ತಿಳಿಸಿದ್ದಾರೆ.
A powerful explosion rocked a house in Kannapuram, Kannur district, around 2 a.m. on Saturday, leaving one man dismembered and another critically injured. The deceased has been identified as Muhammad Asham of Chalad, Kannur, while the injured has been hospitalized.
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 10:48 pm
HK News Staffer
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:16 pm
HK News Desk
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm