ಬ್ರೇಕಿಂಗ್ ನ್ಯೂಸ್
31-08-25 01:32 pm HK News Desk ದೇಶ - ವಿದೇಶ
ಟೋಕಿಯೊ, ಆ.31 : ರಕ್ಷಣಾ ವಲಯ, ಭದ್ರತಾ ಕ್ಷೇತ್ರದಲ್ಲಿ ಪರಸ್ಪರ ಸಹಕಾರಕ್ಕಾಗಿ ಜಂಟಿ ಘೋಷಣೆ, ಆರ್ಥಿಕ ಅಭಿವೃದ್ಧಿ ವಿಚಾರದಲ್ಲಿ 13 ಒಪ್ಪಂದಗಳಿಗೆ ಸಹಿ, ವಿವಿಧ ಕ್ಷೇತ್ರಗಳಲ್ಲಿ ಒಟ್ಟು 6 ಲಕ್ಷ ಕೋಟಿ ಹೂಡಿಕೆ ಒಪ್ಪಂದಗಳನ್ನು ಪ್ರಧಾನಿ ಮೋದಿ ಅವರು ಜಪಾನ್ ಭೇಟಿಯಲ್ಲಿ ಅಂತಿಮಗೊಳಿಸಿದ್ದಾರೆ. ಎರಡು ದಿನಗಳ ಜಪಾನ್ ಪ್ರವಾಸ ಪೂರ್ಣಗೊಳಿಸಿ ಮೋದಿ ಚೀನಾಗೆ ತೆರಳಿದ್ದಾರೆ.
ಜಪಾನ್ ಪ್ರಧಾನಿ ಶಿಗೆರು ಇಶಿಬಾ ಮತ್ತು ಅಲ್ಲಿನ ಹಲವು ಉದ್ಯಮಿಗಳ ಜತೆ ಮಹತ್ವದ ಮಾತುಕತೆ ನಡೆಸಿದ ಮೋದಿ, ಮುಂದಿನ ಒಂದು ದಶಕದಲ್ಲಿ ಉಭಯ ದೇಶಗಳ ಆರ್ಥಿಕ ಬಲವರ್ಧನೆಗಾಗಿ ಹಲವು ಯೋಜನೆಗಳನ್ನು ಜಂಟಿಯಾಗಿ ಘೋಷಣೆ ಮಾಡಿದ್ದಾರೆ. ಆರ್ಥಿಕ ಭದ್ರತೆ, ಸೆಮಿಕಂಡಕ್ಟರ್ ವಲಯ, ಶುದ್ಧ ಇಂಧನ ಉತ್ಪಾದನೆ, ಟೆಲಿಕಾಂ, ಫಾರ್ಮಾಸ್ಯುಟಿಕಲ್, ಹೊಸ ತಂತ್ರಜ್ಞಾನ ಅಭಿವೃದ್ಧಿಗೆ ಸಹಕಾರ, ಸೂಕ್ಷ್ಮ ಖನಿಜಗಳ ಪರಸ್ಪರ ಪೂರೈಕೆ ಕುರಿತಂತೆ ಉಭಯ ದೇಶಗಳ ನಡುವಿನ ತಿಳುವಳಿಕೆ ಒಪ್ಪಂದಗಳಿಗೆ ಮೋದಿ ಹಾಗೂ ಇಶಿಬಾ ಸಹಿ ಹಾಕಿದ್ದಾರೆ.




ಬುಲೆಟ್ ರೈಲು ಪ್ರಯಾಣ
ಪ್ರವಾಸದ ಎರಡನೇ ದಿನವಾದ ಶನಿವಾರ ಮೋದಿ ಅವರು ಇಶಿಬಾ ಅವರೊಂದಿಗೆ ಬುಲೆಟ್ ರೈಲಿನಲ್ಲಿ ಪ್ರಯಾಣ ಬೆಳೆಸಿದರು. ಮಿಯಾಗಿ ಪ್ರಾಂತ್ಯದ ಸೆಂಡೈನ ಸೆಮಿ ಕಂಡಕ್ಟರ್ ಘಟಕಕ್ಕೆ ಬುಲೆಟ್ ರೈಲಿನಲ್ಲಿ ಪ್ರಯಾಣಿಸಿದರು. ಸೆಮಿ ಕಂಡಕ್ಟರ್ ವಲಯದಲ್ಲಿ ಜಪಾನ್ ದೇಶದ ಪ್ರಮುಖ ಕಂಪನಿಯಾದ ಟೋಕಿಯೋ ಇಲೆಕ್ಟ್ರಾನಿಕ್ಸ್ ಫ್ಯಾಕ್ಟರಿಯನ್ನು ವೀಕ್ಷಿಸಿದರು. ಭಾರತ ಸಹಯೋಗದಲ್ಲಿ ಟಿಇಎಲ್ ಹೊಂದಿರುವ ಹಲವು ಯೋಜನೆಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಜಪಾನ್ ಪೂರ್ವ ರೈಲ್ವೆಯಲ್ಲಿ ತರಬೇತಿಯಲ್ಲಿರುವ ಭಾರತೀಯ ಲೋಕೊ ಪೈಲಟ್ ಗಳ ಜತೆಗೂ ಮೋದಿ ಸಮಾಲೋಚಿಸಿದರು.
Prime Minister Narendra Modi on Saturday (August 30, 2025) left for China to attend the SCO summit after wrapping up a two-day visit to Japan. During his visit, India and Japan firmed up 13 key agreements and declarations and announced the launch of several key initiatives.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm