ಬ್ರೇಕಿಂಗ್ ನ್ಯೂಸ್
04-09-25 08:47 pm HK News Desk ದೇಶ - ವಿದೇಶ
ಮುಂಬೈ, ಸೆ.4: ಮುಂಬೈ ಮತ್ತು ಮಹಾನಗರದ ವಿವಿಧ ಪ್ರದೇಶಗಳಲ್ಲಿ ಗಣೇಶ ವಿಸರ್ಜನೆ ವಿಜೃಂಭಣೆಯಿಂದ ನಡೆಯಲಿರುವ ಕಾರಣ ಮಹಾರಾಷ್ಟ್ರ ಸರ್ಕಾರವು ಮುಂಬೈನಲ್ಲಿ ಈದ್ ಮಿಲಾದ್ ರಜೆಯನ್ನು ಸೆ5ರ ಬದಲು ಸೆ.8ಕ್ಕೆ ಬದಲಾವಣೆ ಮಾಡಿದೆ. ಅದೇ ದಿನ ಈದ್ ಮೆರವಣಿಗೆ ಇನ್ನಿತರ ಹಬ್ಬದ ಕಾರ್ಯಕ್ರಮಗಳ ನಡೆಯಲಿವೆ.
ಮುಸ್ಲಿಂ ಸಮುದಾಯವು ಅದ್ದೂರಿಯಾಗಿ ಈದ್ ಮಿಲಾದ್ ಆಚರಣೆ ಮಾಡುವುದರಿಂದ ಒಂದೇ ದಿನ ಎರಡು ಸಮುದಾಯದ ಹಬ್ಬಗಳು ನಡೆದು ಸಂಭಾವ್ಯ ಅಪಾಯಗಳು ನಡೆಯುವುದನ್ನು ತಪ್ಪಿಸಲು ಮಹಾರಾಷ್ಟ್ರ ಸರ್ಕಾರವು ಮುಂಬೈನಲ್ಲಿ ಈದ್-ಎ-ಮಿಲಾದ್ ಸಾರ್ವಜನಿಕ ರಜೆಯನ್ನು ಸೆಪ್ಟೆಂಬರ್ 8ಕ್ಕೆ ಬದಲಾಯಿಸಿದೆ. ಅನಂತ ಚತುರ್ದಶಿ (ಗಣೇಶ ವಿಗ್ರಹಗಳನ್ನು ಮೆರವಣಿಗೆಯಲ್ಲಿ ತೆಗೆದುಕೊಂಡು ಹೋಗಿ ನೀರಿನಲ್ಲಿ ಮುಳುಗಿಸುವ ಹಿಂದೂ ಹಬ್ಬ) ಸೆಪ್ಟೆಂಬರ್ 6ರಂದು ಬರುವುದರಿಂದ ಈ ಬದಲಾವಣೆ ಮಾಡಲಾಗಿದೆ.

ಸಂಭಾವ್ಯ ಜನಸಂದಣಿ ತಪ್ಪಿಸಲು ಮತ್ತು ಶಾಂತಿಯಿಂದ ಹಬ್ಬದ ಆಚರಣೆ ನಡೆಯಲು ಅನುಕೂಲವಾಗುವಂತೆ ಮುಸ್ಲಿಂ ಸಮುದಾಯವು ಈದ್ ಹಬ್ಬದ ಆಚರಣೆಗೆ ನಿರ್ಧರಿಸಿದ್ದು, ಅದಕ್ಕಾಗಿ ಈದ್ ಮಿಲಾದ್ ಮೆರವಣಿಗೆಯನ್ನು ಸೆಪ್ಟೆಂಬರ್ 8ರಂದು ನಡೆಸಲು ತೀರ್ಮಾನಿಸಿದೆ. ಆದ್ದರಿಂದ ಸರ್ಕಾರವು ಸೆ.5ರ ರಜೆಯನ್ನು ಆ ದಿನಾಂಕಕ್ಕೆ ಬದಲಾಯಿಸಿದೆ ಎಂದು ಮೂಲಗಳು ತಿಳಿಸಿವೆ. ರಾಜ್ಯದ ಇತರ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 5ರಂದೇ ರಜೆ ಇರಲಿದೆ. ಮುಂಬೈ ನಗರ ಮತ್ತು ಉಪ ನಗರಗಳಲ್ಲಿ ಮಾತ್ರ ಸೆಪ್ಟೆಂಬರ್ 8ಕ್ಕೆ ಬದಲಾಯಿಸಲಾಗಿದೆ ಎಂದು ಸರ್ಕಾರದ ಸುತ್ತೋಲೆ ತಿಳಿಸಿದೆ. ಮುಂಬೈ ನಗರ ಮತ್ತು ಉಪನಗರಗಳಲ್ಲಿನ ಸರ್ಕಾರಿ ಕಚೇರಿಗಳು ಸೆಪ್ಟೆಂಬರ್ 5ರಂದು ಎಂದಿನಂತೆ ತೆರೆದಿರುತ್ತವೆ ಎಂದೂ ಸುತ್ತೋಲೆಯಲ್ಲಿ ಸ್ಪಷ್ಟಪಡಿಸಲಾಗಿದೆ.
In view of the grand Ganesh Visarjan celebrations across Mumbai and surrounding areas, the Maharashtra government has officially rescheduled the Eid Milad (Eid-e-Milad) public holiday in Mumbai from September 5 to September 8.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am